ಗ್ಯಾರಂಟಿ ಪೂರೈಸಲು ಜನರ ಮೇಲೆ ಅಧಿಕ ತೆರಿಗೆ: ಶಾಸಕ ಬಿ.ವೈ.ವಿಜಯೇಂದ್ರ

Published : Jun 02, 2023, 03:00 AM IST
ಗ್ಯಾರಂಟಿ ಪೂರೈಸಲು ಜನರ ಮೇಲೆ ಅಧಿಕ ತೆರಿಗೆ: ಶಾಸಕ ಬಿ.ವೈ.ವಿಜಯೇಂದ್ರ

ಸಾರಾಂಶ

ಚುನಾವಣೆಯಲ್ಲಿ ಗೆಲ್ಲಲು ಕಾಂಗ್ರೆಸ್‌ ಪಕ್ಷವು ನೀಡಿದ ಐದು ಗ್ಯಾರಂಟಿಗಳನ್ನು ಈಡೇರಿಸಲು ನಾಗರಿಕರಿಂದ ಒತ್ತಡ ಜಾಸ್ತಿಯಾಗುತ್ತಿದೆ. ಆದ್ದರಿಂದ ಈ ಭರವಸೆಗಳನ್ನು ಈಡೇರಿಸಲು ಮಧ್ಯಮ ವರ್ಗದವರ ಮೇಲೆ ಹೊಸ ಸರ್ಕಾರವು ಅಧಿಕ ತೆರಿಗೆಯನ್ನು ಹೇರುವ ಸಾಧ್ಯತೆ ಇದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ, ಶಾಸಕ ಬಿ.ವೈ.ವಿಜಯೇಂದ್ರ ಹೇಳಿದರು.

ಚಿತ್ರದುರ್ಗ (ಜೂ.02): ಚುನಾವಣೆಯಲ್ಲಿ ಗೆಲ್ಲಲು ಕಾಂಗ್ರೆಸ್‌ ಪಕ್ಷವು ನೀಡಿದ ಐದು ಗ್ಯಾರಂಟಿಗಳನ್ನು ಈಡೇರಿಸಲು ನಾಗರಿಕರಿಂದ ಒತ್ತಡ ಜಾಸ್ತಿಯಾಗುತ್ತಿದೆ. ಆದ್ದರಿಂದ ಈ ಭರವಸೆಗಳನ್ನು ಈಡೇರಿಸಲು ಮಧ್ಯಮ ವರ್ಗದವರ ಮೇಲೆ ಹೊಸ ಸರ್ಕಾರವು ಅಧಿಕ ತೆರಿಗೆಯನ್ನು ಹೇರುವ ಸಾಧ್ಯತೆ ಇದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ, ಶಾಸಕ ಬಿ.ವೈ.ವಿಜಯೇಂದ್ರ ಹೇಳಿದರು. ಚಿತ್ರದುರ್ಗ ನಗರದ ಹೂರ ವಲಯದ ಭೋವಿ ಗುರುಪೀಠಕ್ಕೆ ಭೇಟಿ ನೀಡಿ, ಶ್ರೀಗಳಿಂದ ಆರ್ಶೀವಾದ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಪಕ್ಷ ಚುನಾವಣೆಯ ಸಮಯದಲ್ಲಿ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದ ಗ್ಯಾರಂಟಿಗಳನ್ನು ಈಡೇರಿಸವಲ್ಲಿ ಗೊಂದಲ ಉಂಟಾಗಿದೆ. 

ರಾಜ್ಯದ ಜನತೆ ಭರವಸೆಗಳ ಈಡೇರಿಕೆಗೆ ಕಾಯುತ್ತಿದ್ದರೆ, ಅಧಿಕಾರಿಗಳು ಇದನ್ನು ಈಡೇರಿಸಲು ಹಣಕಾಸಿನ ಚಿಂತನೆಯಲ್ಲಿ ತೊಡಗಿರುವಂತಿದೆ ಎಂದರು. ಈ ಕುರಿತು ಸಂಪುಟದ ಸದಸ್ಯರುಗಳಲ್ಲಿಯೇ ಹಲವು ಅನುಮಾನಗಳು ಇವೆ. ಈ ಕುರಿತು ಬಿಜೆಪಿ ಮೌನವಾಗಿಲ್ಲ. ಎಲ್ಲವನ್ನು ಕಾದು ನೋಡುತ್ತಿದ್ದೇವೆ. ಚುನಾವಣೆ ಸಂದರ್ಭದಲ್ಲಿ ಅವರು ನೀಡಿರುವ ಭರವಸೆಗಳಿಂದಲೇ ಕಾಂಗ್ರೆಸ್‌ ಜಯ ಸಾಧಿಸಿದೆ. ಈಗ ಜನರ ಆಶೋತ್ತರಗಳನ್ನು ಈಡೇರಿಸುವ ಹೊಣೆಗಾರಿಕೆ ಸರ್ಕಾರದ ಮೇಲಿದೆ. ನೀಡಿರುವ ಭರವಸೆ ಹುಸಿಯಾಗದಂತೆ ಈಡೇರಿಸಲಿ. ಗ್ಯಾರಂಟಿಯನ್ನು ಪೂರೈಸುವಲ್ಲಿ ಮಧ್ಯಮ ವರ್ಗದ ಜನತೆಯ ಮೇಲೆ ಸರ್ಕಾರ ಎಕ್ಸೈಸ್‌ ಡ್ಯೂಟಿ ಜಾಸ್ತಿ ಮಾಡುವುದು, ಪೆಟ್ರೋಲ್‌, ಡೀಸೆಲ್‌ ಮೇಲೆ ಹೆಚ್ಚು ತೆರಿಗೆಯನ್ನು ಹಾಕುವಂತಹ ಸಾಧ್ಯತೆಗಳೂ ಇವೆ ಎಂದರು.

ಮುದ್ದಾದ ಅವಳಿ ಮಕ್ಕಳನ್ನು ಉಸಿರುಗಟ್ಟಿಸಿ ಕೊಂದ ತಂದೆ: ಕಾರಣವೇನು ಗೊತ್ತಾ?

ಸದೃಢ ಭಾರತವನ್ನು ನಿರ್ಮಾಣ ಮಾಡಲು ಮಕ್ಕಳನ್ನು ಹುರಿದುಂಬಿಸಬೇಕಾಗಿದೆ. ಅದಕ್ಕಾಗಿ ಎನ್‌ಇಪಿ ಜಾರಿಗೊಳಿಸಲಾಗಿದೆ. ಅದನ್ನು ಸಹ ರದ್ಧುಪಡಿಸಲು ಕಾಂಗ್ರೆಸ್‌ ಮುಂದಾಗಿದೆ. ಎನ್‌ಇಪಿ ವಿಚಾರವಾಗಿ ರಾಜಕೀಯ ಮಾಡಬೇಕಾದ ಅಗತ್ಯವಿಲ್ಲ. ಇವೆಲ್ಲವನ್ನು ಸಹ ಪಕ್ಷ ಕಾದು ನೋಡುತ್ತಿದೆ. ಗ್ಯಾರಂಟಿಗಳಿಗೆ ಷರತ್ತು ವಿಧಿಸುವ ಬಗ್ಗೆ ಮುಂದಿನ ಸಚಿವ ಸಂಪುಟದಲ್ಲಿ ಯಾವ ರೀತಿಯ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ ಎಂಬುದನ್ನು ಕಾದು ನೋಡುತ್ತೇವೆ. ಸ್ವಾತಂತ್ರ್ಯ ಬಂದು ಹಲವಾರು ವರ್ಷ ದೇಶವನ್ನು ಆಳಿದ್ದು ಕಾಂಗ್ರೆಸ್‌. ಅಗ ಬಡತನವನ್ನು ನಿರ್ಮೂಲನೆ ಹಾಗೂ ಜನರಿಗೆ ಶಿಕ್ಷಣವನ್ನು ನೀಡಬೇಕಿತ್ತು. ಆದರೆ ಅದನ್ನು ಮಾಡದೆ ಅವರನ್ನು ಬಡವರಾಗಿಯೇ ಇಟ್ಟು ಅನಕ್ಷರತೆಯನ್ನು ನೀಡಿ, ಮತ ಬ್ಯಾಂಕ್‌ ಆಗಿ ಮಾಡಿಕೊಂಡಿದ್ದಾರೆ ಎಂದರು.

ಫುಲ್ ಡ್ರಿಂಕ್ಸ್ ಮಾಡಿ ಆಸ್ಪತ್ರೆಗೆ ಬಂದ ವೈದ್ಯ ಬೆಡ್ ಮೇಲೆ ಸ್ಲೀಪಿಂಗ್: ಅನಸ್ತೇಷಿಯಾ ಪಡೆದ ಮಹಿಳೆಯರ ಗತಿ ಏನಾಯ್ತು?

ದೇಶದಲ್ಲಿ ಬಡವರು ಬಡವರಾಗಿಯೇ ಇದ್ದಾರೆ ಎಂದರೆ ಅದರ ಕೀರ್ತಿ ಕಾಂಗ್ರೆಸ್‌ ಪಕ್ಷಕ್ಕೆ ಸಲುತ್ತದೆ. ಶಿಕ್ಷಣವನ್ನು ನೀಡಿಲ್ಲ. ಸ್ವಾತಂತ್ರ್ಯ ಬಂದು ಇಷ್ಟುವರ್ಷವಾದರೂ ಸಹ ಉಚಿತ ಗ್ಯಾರಂಟಿಯನ್ನು ನೀಡುತ್ತಾರೆ ಎಂಬುದರಲ್ಲಿ ಗೊತ್ತಾಗುತ್ತದೆ ಎಂದ ವಿಜೇಯೇಂದ್ರ, ಮುಂದಿನ ದಿನದಲ್ಲಿ ಬಿಜೆಪಿಯವರು ವಿರೋಧ ಪಕ್ಷವಾಗಿ ಉತ್ತಮವಾದ ಕಾರ್ಯವನ್ನು ಮಾಡುತ್ತೇವೆ. ನಮಗೆ ವಿರೋಧ ಪಕ್ಷವಾಗಿ ಕೆಲಸ ಮಾಡಿದ ಅನುಭವ ಇದೆ. ಇದರಿಂದ ಇದರಿಂದ ಆಡಳಿತ ಪಕ್ಷವನ್ನು ಸರಿದಾರಿಗೆ ತರುವ ಕಾರ್ಯವನ್ನು ಮಾಡಲಾಗುವುದು ಎಂದು ವಿಜಯೇಂದ್ರ ತಿಳಿಸಿದರು. ಈ ಸಂದರ್ಭದಲ್ಲಿ ಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಶ್ರೀಗಳು, ಶಾಸಕರಾದ ಎಂ.ಚಂದ್ರಪ್ಪ ಸೇರಿದಂತೆ ಸಮಾಜದ ಮುಖಂಡರು ಅಭಿಮಾನಿಗಳು ಭಾಗವಹಿಸಿದ್ದರು. ಇದಾದ ನಂತರ ವಿಜಯೇಂದ್ರರವರು ಮಾದಾರ ಚನ್ನಯ್ಯ ಗುರುಫೀಠಕ್ಕೆ ಭೇಟಿ ಅಲ್ಲಿ ಬಸವಮೂರ್ತಿ ಮಾದಾರ ಚನ್ನಯ್ಯ ಶ್ರೀಗಳಿಂದ ಆರ್ಶೀವಾದ ಪಡೆದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
'ಏಯ್, ಹಾಗೆಲ್ಲಾ ನಾಟಿ ಕೋಳಿ ಬಿಡಬಾರದು, ಏನೂ ಆಗೊಲ್ಲ ತಿನ್ನಬೇಕು': ಆರ್. ಅಶೋಕ್‌ಗೆ ಸಿದ್ದರಾಮಯ್ಯ ಕಿವಿಮಾತು!