3 ತಿಂಗಳಲ್ಲೇ ಸಿದ್ದು ಸರ್ಕಾರದ ವರ್ಚಸ್ಸು ಕಡಿಮೆ: ಶಾಸಕ ವಿಜಯೇಂದ್ರ ಟೀಕೆ

Published : Aug 17, 2023, 04:09 PM IST
3 ತಿಂಗಳಲ್ಲೇ ಸಿದ್ದು ಸರ್ಕಾರದ ವರ್ಚಸ್ಸು ಕಡಿಮೆ: ಶಾಸಕ ವಿಜಯೇಂದ್ರ ಟೀಕೆ

ಸಾರಾಂಶ

ಮೂರು ತಿಂಗಳಲ್ಲಿಯೇ ಸರ್ಕಾರದ ವರ್ಚಸ್ಸು ಕಡಿಮೆಯಾಗಿದೆ. ಗ್ಯಾರಂಟಿ ಯೋಜನೆಗಳ ಅಬ್ಬರದ ಪ್ರಚಾರದ ಕಾಂಗ್ರೆಸ್‌ ಸರ್ಕಾರ ನಡೆಯುತ್ತಿದೆ. ಈ ಯೋಜನೆಗಳಿಗಾಗಿ ಮತ ನೀಡಿದ್ದ ಜನರು ಈಗ ತಾವು ಯಾಮಾರಿದ್ದೇವೆ ಎಂದು ಹಾದಿ ಬೀದಿಯಲ್ಲಿ ಮಾತನಾಡುತ್ತಿದ್ದಾರೆ ಎಂದು ಶಿಕಾರಿಪುರ ಶಾಸಕ ಬಿ.ವೈ.ವಿಜಯೇಂದ್ರ ಟೀಕಿಸಿದರು.

ಶಿವಮೊಗ್ಗ (ಆ.17): ಮೂರು ತಿಂಗಳಲ್ಲಿಯೇ ಸರ್ಕಾರದ ವರ್ಚಸ್ಸು ಕಡಿಮೆಯಾಗಿದೆ. ಗ್ಯಾರಂಟಿ ಯೋಜನೆಗಳ ಅಬ್ಬರದ ಪ್ರಚಾರದ ಕಾಂಗ್ರೆಸ್‌ ಸರ್ಕಾರ ನಡೆಯುತ್ತಿದೆ. ಈ ಯೋಜನೆಗಳಿಗಾಗಿ ಮತ ನೀಡಿದ್ದ ಜನರು ಈಗ ತಾವು ಯಾಮಾರಿದ್ದೇವೆ ಎಂದು ಹಾದಿ ಬೀದಿಯಲ್ಲಿ ಮಾತನಾಡುತ್ತಿದ್ದಾರೆ ಎಂದು ಶಿಕಾರಿಪುರ ಶಾಸಕ ಬಿ.ವೈ.ವಿಜಯೇಂದ್ರ ಟೀಕಿಸಿದರು.

ನಗ​ರ​ದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರದ ವರ್ಚಸ್ಸು ಇಷ್ಟು ಬೇಗ ಕಡಿಮೆ ಆಗಿರುವುದು ಆಶ್ಚರ್ಯ ಉಂಟುಮಾಡುತ್ತಿದೆ. ಅನೇಕ ಸಚಿವರ ಮೇಲೆ ಭ್ರಷ್ಟಾಚಾರದ ಆರೋಪ ಕೇಳಿಬಂದಿದೆ. ಅಧಿಕಾರಕ್ಕೆ ಬರುತ್ತಿದ್ದಂತೆ ಕಾಂಗ್ರೆಸ್‌ ತನ್ನ ಹಳೆಯ ಚಾಳಿ ಮುಂದುವರಿಸಿದೆ. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿಂದಿನಂತೆ ಈಗಲು ತಮ್ಮ ಸರ್ಕಾರವನ್ನು ಸಮರ್ಥಿಸಿಕೊಳ್ಳುವುದನ್ನು ಮುಂದುವರಿಸಿದ್ದಾರೆ ಎಂದು ಹರಿಹಾಯ್ದರು.

ಭ್ರಷ್ಟಾಚಾರದ ಪಾಪದ ಕೂಸು ಹುಟ್ಟು ಹಾಕಿದವರೇ ಕಾಂಗ್ರೆಸ್ಸಿಗರು: ಬಿ.ವೈ.ವಿಜಯೇಂದ್ರ

ಆರ್ಥಿಕ ಶಿಸ್ತು ಕಳೆ​ದು​ಕೊಂಡ ಸರ್ಕಾ​ರ: ಚುನಾವಣೆ ಸಂದರ್ಭ ನೀಡಿದ್ದ ಗ್ಯಾರಂಟಿ ಭರವಸೆಗಳನ್ನು ಈಡೇರಿಸಲು ಸರ್ಕಾರ ಹರಸಾಹಸ ಪಡುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು .40 ರಿಂದ 50 ಸಾವಿರ ಕೋಟಿ ಸಾಲ ಮಾಡಬೇಕಾಗುತ್ತದೆ ಎಂದು ಹೇಳಿದ್ದಾರೆ. ಆದರೆ, .70 ರಿಂದ .80 ಸಾವಿರ ಕೋಟಿ ಸಾಲ ಮಾಡಲಾಗುತ್ತಿದೆ ಎಂದು ಆರ್ಥಿಕ ತಜ್ಞರು ಹೇಳುತ್ತಿದ್ದಾರೆ. ರಾಜ್ಯ ಸರ್ಕಾರ ಆರ್ಥಿಕ ಶಿಸ್ತು ಕಳೆದುಕೊಂಡಿದೆ. ಹಾಗಾಗಿ, ಸರ್ಕಾರಿ ನೌಕರರಿಗೆ ಸಂಬಳ ಕೊಡಲು ಸಾಧ್ಯವಾಗುತ್ತಿಲ್ಲ ಎಂದು ಆರೋಪಿಸಿದರು.

ಮತ​ದಾ​ರ​ರಿಗೆ ಉಚಿತ ವಿದ್ಯುತ್‌ ಕೊಡುವುದಾಗಿ ಭರವಸೆ ಕೊಟ್ಟಿದ್ದರು. ಈಗ ಮಳೆ ಅಭಾವದಿಂದ ವಿದ್ಯುತ್‌ ಕಡಿತಗೊಳಿಸಲಾಗುತ್ತಿದೆ ಎಂದು ಸಚಿವ ಪರಮೇಶ್ವರ್‌ ಹೇಳಿದ್ದಾರೆ. ಮಳೆ ಇಲ್ಲದೇ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಲೋಡ್‌ ಶೆಡ್ಡಿಂಗ್‌ ಮಾಡಿ ಜನರಿಗೆ ಸಮಸ್ಯೆ ಉಂಟು ಮಾಡಲಾಗುತ್ತಿದೆ. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ ತುಂಗಭದ್ರಾ ನದಿಯಿಂದ ಶಿಕಾರಿಪುರ ತಾಲೂಕಿಗೆ ಪೈಪ್‌​ಲೈನ್‌ ಮೂಲಕ ನೀರು ತರುವ ಯೋಜನೆ ರೂಪಿಸಿದ್ದರು. ಆದರೆ, ಲೋಡ್‌ಶೆಡ್ಡಿಂಗ್‌ನಿಂದಾಗಿ ಪೈಪ್‌ಲೈನ್‌ ಮೂಲಕ ನೀರು ಹರಿಸಲು ಸಾಧ್ಯವಾಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಎದೆಯ ಮೇಲೆ ಪೋಷಕರು, ಸುದೀಪ್ ಹಚ್ಚೆ: ವಿಭಿನ್ನ ರೀತಿಯಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡ ಯುವಕ!

ಗ್ಯಾರಂಟಿ ಯೋಜನೆಗಳ ಅಬ್ಬರದ ಪ್ರಚಾರದ ಮಧ್ಯೆ ಸರ್ಕಾರ ನಡೆಯುತ್ತಿದೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ವಿರುದ್ಧ ಈಚೆಗೆ ಗುತ್ತಿಗೆದಾರರೊಬ್ಬರು ಆರೋಪ ಮಾಡಿದ್ದರು. ಈಗ ಅವರು ಹೇಳಿಕೆ ಹಿಂಪಡೆದಿದ್ದಾರೆ. ನಮ್ಮ ಸರ್ಕಾರದ ಅವಧಿಯಲ್ಲಿ ಅನೇಕ ಆರೋಪ ಮಾಡಿದ್ದ ಕೆಂಪಣ್ಣ ಅವರು ಈಗ ಮೌನವಾಗಿದ್ದಾರೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಪುಟಿನ್‌ಗೆ ಇಲ್ಲೇ ಎಲೆಕ್ಷನ್‌ ನಿಲ್ಲೋಕೆ ಟಿಕೆಟ್‌ ಕೊಡ್ತಾರೆ ಅಂದ್ಕೊಂಡಿದ್ದೆ.. ಸಂತೋಷ್‌ ಲಾಡ್‌ ಲೇವಡಿ
ನಾನು ಲಂಚ ಪಡೆದಿದ್ದು ಸಾಬೀತಾದರೆ ರಾಜೀನಾಮೆ: ಗೃಹ ಸಚಿವ ಪರಮೇಶ್ವರ್‌