ಜಾತಿ ಆಧಾರಿತ ರಾಜಕಾರಣಕ್ಕೆ ಮುಂದಾದ ಕಾಂಗ್ರೆಸ್‌: ಶಾಸಕ ಸಿ.ಸಿ.ಪಾಟೀಲ್ ಕಿಡಿ

Kannadaprabha News   | Kannada Prabha
Published : Jul 11, 2025, 10:51 PM IST
cc Patil

ಸಾರಾಂಶ

ರಾಜ್ಯ ಸರ್ಕಾರ ಸುಮಾರು 500 ಮಠಗಳಿಗೆ ಬರಬೇಕಿದ್ದ ಅನುದಾನವನ್ನು ರಾಜ್ಯದ ಬೇರೆ ಬೇರೆ ಮಸೀದಿ, ಚರ್ಚ್‌ಗಳಿಗೆ ಹಂಚಿಕೆ ಮಾಡಿ ಹಿಂದುಗಳಿಗೆ ಅನ್ಯಾಯ ಮಾಡುತ್ತಿದೆ ಎಂದು ಸಿ.ಸಿ.ಪಾಟೀಲ್ ಕಿಡಿಕಾರಿದರು.

ರಾಮದುರ್ಗ (ಜು.11): ರಾಜ್ಯ ಸರ್ಕಾರ ಸುಮಾರು 500 ಮಠಗಳಿಗೆ ಬರಬೇಕಿದ್ದ ಅನುದಾನವನ್ನು ರಾಜ್ಯದ ಬೇರೆ ಬೇರೆ ಮಸೀದಿ, ಚರ್ಚ್‌ಗಳಿಗೆ ಹಂಚಿಕೆ ಮಾಡಿ ಹಿಂದುಗಳಿಗೆ ಅನ್ಯಾಯ ಮಾಡುತ್ತಿದೆ. ಇದರಿಂದ ಜಾತಿ ಆಧಾರಿತ ರಾಜಕಾರಣಕ್ಕೆ ಕಾಂಗ್ರೆಸ್‌ ಮುಂದಾಗುತ್ತಿದೆ ಎಂದು ನರಗುಂದ ಶಾಸಕ, ಮಾಜಿ ಸಚಿವ ಸಿ.ಸಿ.ಪಾಟೀಲ್ ಕಿಡಿಕಾರಿದರು. ತಾಲೂಕಿನ ಎಂ.ಚಂದರಗಿಯ ಗಡದೇಶ್ವರ ಮಠದಲ್ಲಿ ಗುರುಪೂರ್ಣಿಮೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪಕ್ಷ ಯಾವುದೇ ಇರಲಿ, ವೀರಶೈವ ಲಿಂಗಾಯತರು ಒಂದಾಗಿ ವೀರಶೈವ ಧರ್ಮ ಉಳಿಸಬೇಕಾದ ಅನಿವಾರ್ಯತೆ ಎದುರಾಗಿದೆ. ಇದಕ್ಕೆ ಎಲ್ಲ ಮಠಗಳು ಬೆಂಬಲ ಸೂಚಿಸಿಬೇಕಿದೆ ಎಂದು ಕೋರಿದರು.

ಮಾಜಿ ಎಂಎಲ್ಸಿ ಮಹಾಂತೇಶ ಕವಟಗಿಮಠ ರೇಣುಕ ಶ್ರೀ ಪ್ರಶಸ್ತಿ ಸ್ವೀಕರಿಸಿ ಮಾತನಾಡಿ, ಜೀವನದಲ್ಲಿ ತಾಯಿಯೇ ಮೊದಲ ಗುರು. ಜೀವನದಲ್ಲಿ ಸಮಾಜ ಸೇವೆ ಮಾಡಲು ಪೂಜ್ಯರಿಂದ ರೇಣುಕಶ್ರೀ ಪ್ರಶಸ್ತಿಯೂ ಹೆಚ್ಚಿನ ಪ್ರೇರಣೆ ಸಿಕ್ಕಂತಾಗಿದೆ. ಇದರಿಂದ ನಮ್ಮ ಜೀವನಕ್ಕೆ ಹೆಚ್ಚಿನ ಬಲ ಬಂದಿದೆ ಎಂದು ತಿಳಿಸಿದರು.ಶ್ರೀ ಧನಲಕ್ಷ್ಮೀ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಮಲ್ಲಣ್ಣ ಯಾದವಾಡ ಮಾತನಾಡಿ, ಧಾರ್ಮಿಕ ಕಾರ್ಯಕ್ರಮಗಳಿಗೆ ಬರುವಾಗ ತಮ್ಮ ಮಕ್ಕಳನ್ನು ಕರೆ ತಂದು ಸಂಸ್ಕಾರ ಕಲಿತುಕೊಳ್ಳಲು ಪ್ರೋತ್ಸಾಹಿಸಬೇಕು. ತಮ್ಮ ದಿನನಿತ್ಯದ ಕೆಲಸಗಳನ್ನು ಸಲೀಸಾಗಿ ಮಾಡಿಕೊಳ್ಳಲು ಮಕ್ಕಳ ಕೈಗೆ ಮೊಬೈಲ್‌ ನೀಡಬಾರದು ಎಂದು ಮನವಿ ಮಾಡಿದರು.

ಕಟಕೋಳ-ಚಂದರಗಿಯ ಗಡದೇಶ್ವರ ಮಠದ ವೀರಭದ್ರ ಶಿವಯೋಗಿ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿ ಮಾತನಾಡಿ, ಇದೇ 21, 22 ರಂದು ದಾವಣಗೆರೆಯಲ್ಲಿ ನಡೆಯುವ ಪಂಚಾಚಾರ್ಯರ ಮತ್ತು ಶಿವಾಚಾರ್ಯರ ಶೃಂಗಸಭೆಗೆ ನಾಡಿನ ಎಲ್ಲ ಮಠಗಳ ಮಠಾಧೀಶರು ಪಾಲ್ಗೊಂಡು ಧರ್ಮ ರಕ್ಷಣೆಗೆ ಮುಂದಾಗಲಿದ್ದಾರೆ. ಸಮಾಜದ ಎಲ್ಲರೂ ಅಲ್ಲಿ ಸೇರಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಕೋರಿದರು. ಗುಡಗುಂಟಿ ಶುಗರ್ಸ್‌ನ ಎಂಡಿ ವಿರೂಪಾಕ್ಷಯ್ಯ ಗುಡಗುಂಟಿ, ಡಾ.ಗುರುಪಾದಯ್ಯಾ ಸಾಲಿಮಠ, ಅಂದಾನಯ್ಯಸ್ವಾಮಿ ಹಿರೇಮಠ, ಡಾ.ಎಸ್.ವಿ.ವಾಲಿ, ಸಂಗನಗೌಡ ಪಾಟೀಲ, ಎಂ.ಎನ್.ದೇಸಾಯಿ, ಸಿ.ಎ.ದೇಸಾಯಿ, ಟಿ.ಪಿ.ಮನ್ನೋಳಿ, ಈರಣ್ಣ ಕಮ್ಮಾರ, ಶಿವಪ್ಪ ನವರಕ್ಕಿ ಇತರರು ಇದ್ದರು.

ದಾವಣಗೆರೆಯಲ್ಲಿ ನಡೆಯುವ ಶೃಂಗಸಭೆಯಲ್ಲಿ ಸರ್ಕಾರ ನಡೆಸುವ ಜಾತಿ ಗಣತಿಯಲ್ಲಿ ಯಾವ ರೀತಿ ಬರೆಸಬೇಕು ಎನ್ನುವ ದೃಢ ನಿರ್ಧಾರ ತೆಗೆದುಕೊಂಡು ಗೊಂದಲದಲ್ಲಿರುವ ಸಮಾಜಕ್ಕೆ ಮಾರ್ಗದರ್ಶನ ಮಾಡಬೇಕು. ಧಾರ್ಮಿಕ ಕಾರ್ಯಕ್ರಮಕ್ಕೆ ಕೇವಲ ವಯಸ್ಸಾದವರು ಮಾತ್ರ ಬರುತ್ತಿದ್ದು, ಯುವಕರು ಮತ್ತು ಮಕ್ಕಳನ್ನು ಕರೆ ತಂದು ಧರ್ಮ ಧಾರ್ಮಿಕ ವಿಚಾರ ತಿಳಿ ಹೇಳುವ ಮೂಲಕ ಧರ್ಮ ಜಾಗೃತಿ ಮೂಡಿಸಲು ಎಲ್ಲರೂ ಶ್ರಮಿಸಬೇಕು.
-ಸಿ.ಸಿ.ಪಾಟೀಲ, ಮಾಜಿ ಸಚಿವ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
ಆನೆ ಕಾರಿಡಾರ್ ನಿರ್ಮಾಣಕ್ಕೆ ಹೆಚ್ಚು ಒತ್ತು ನೀಡಬೇಕು: ಮಾಜಿ ಸಂಸದ ಪ್ರತಾಪ್ ಸಿಂಹ