ಒಮ್ಮೆಯಾದ್ರೂ ಕೆಪಿಸಿಸಿ ಹುದ್ದೆ ಮುಸ್ಲಿಮರಿಗೆ ಕೊಟ್ಟಿದ್ದೀರಾ?: ಸಿ.ಎಂ.ಇಬ್ರಾಹಿಂ ಆಕ್ರೋಶ!

Published : Dec 17, 2020, 07:52 AM ISTUpdated : Dec 17, 2020, 12:15 PM IST
ಒಮ್ಮೆಯಾದ್ರೂ ಕೆಪಿಸಿಸಿ ಹುದ್ದೆ ಮುಸ್ಲಿಮರಿಗೆ ಕೊಟ್ಟಿದ್ದೀರಾ?: ಸಿ.ಎಂ.ಇಬ್ರಾಹಿಂ ಆಕ್ರೋಶ!

ಸಾರಾಂಶ

ಕಾಂಗ್ರೆಸ್‌ ವಿರುದ್ಧವೇ ಶಾಸಕ ಸಿ.ಎಂ.ಇಬ್ರಾಹಿಂ ಆಕ್ರೋಶ| ಒಮ್ಮೆಯಾದರೂ ಕೆಪಿಸಿಸಿ ಅಧ್ಯಕ್ಷ ಹುದ್ದೆ ಮುಸ್ಲಿಮರಿಗೆ ಕೊಟ್ಟಿದ್ದೀರಾ?

ಬೆಂಗಳೂರು(ಡಿ.17): ವಿಧಾನ ಪರಿಷತ್‌ ಸದಸ್ಯ, ಕಾಂಗ್ರೆಸ್‌ ಮುಖಂಡ ಸಿ.ಎಂ. ಇಬ್ರಾಹಿಂ ಅವರು ಪಕ್ಷದ ವಿರುದ್ಧವೇ ವಾಗ್ದಾಳಿ ನಡೆಸಿದ್ದು, ಶೇ.16ರಷ್ಟುಜನಸಂಖ್ಯೆಯಿರುವ ಮುಸ್ಲಿಮರು ಒಂದು ಬಾರಿಯೂ ಕೆಪಿಸಿಸಿ ಅಧ್ಯಕ್ಷರಾಗಿಲ್ಲ. ಮುಸ್ಲಿಮರು ಇನ್ನೆಷ್ಟುವರ್ಷ ಕಾಂಗ್ರೆಸ್‌ ಪಕ್ಷಕ್ಕೆ ಮತ ಹಾಕಬೇಕು ಎಂದು ಕಿಡಿ ಕಾರಿದ್ದಾರೆ.

ಮುಂದಿನ ರಾಜಕೀಯ ನಿರ್ಧಾರದ ಬಗ್ಗೆ ಡಿಕೆಶಿ ಬಳಿ ಹೇಳಿದ್ದೇನೆ : ಅಸಮಾಧಾನಗೊಂಡ ಕೈ ಮುಖಂಡ

‘ಮುಸ್ಲಿಮರು ನಿಮಗೆ ಮತ ಹಾಕಲು ಮಾತ್ರ ಬೇಕಾ? ನಾವು ಮುಂದೆ ಬಂದು ನಿಮಗೆ ಮತ ಹಾಕಿ ಹಿಂದೆ ಹೋಗಿ ನಿಲ್ಲಬೇಕಾ?’ ಎಂದು ಕಾಂಗ್ರೆಸ್‌ ಮುಖಂಡರನ್ನು ಪ್ರಶ್ನಿಸಿರುವ ಅವರು, ತಮ್ಮ ಮುಂದಿನ ರಾಜಕೀಯ ನಡೆ ಬಗ್ಗೆ ರಾಜ್ಯಾದ್ಯಂತ ಪ್ರವಾಸ ಮಾಡಿದ ಬಳಿಕ ಘೋಷಿಸುವುದಾಗಿ ಹೇಳಿದರು.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವಾತಂತ್ರ್ಯ ಬಂದ ದಿನದಿಂದಲೂ ಮುಸ್ಲಿಮರು ಕಾಂಗ್ರೆಸ್‌ ಪಕ್ಷವನ್ನು ಬೆಂಬಲಿಸಿದ್ದೇವೆ. ಇನ್ನು ಎಷ್ಟುವರ್ಷ ಕಾಂಗ್ರೆಸ್‌ಗೆ ಮತ ಹಾಕುತ್ತಿರಬೇಕು. ನಾವು ಮುಂದೆ ಬಂದು ನಿಮಗೆ ಮತ ಹಾಕುವುದು. ನೀವು ಮುಂದೆ ನಿಂತುಕೊಂಡರೆ ನಾವು ಹಿಂದೆ ಹೋಗುವುದು. ಒಬ್ಬನೇ ಒಬ್ಬ ಮುಸ್ಲಿಮನಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಿಲ್ಲ. ಶೇ.16ರಷ್ಟುಇರುವ ಮುಸ್ಲಿಮರು ನಿಮಗೆ ಮತ ಹಾಕಲು ಮಾತ್ರ ಬೇಕಾ ಎಂದು ಕಾಂಗ್ರೆಸ್‌ ನಾಯಕರನ್ನು ಪ್ರಶ್ನಿಸಿದರು.

ದೇವೇಗೌಡ್ರ ಭೇಟಿ ಬಳಿಕ ಸ್ಪೋಟಕ ಹೇಳಿಕೆ ಕೊಟ್ಟ ಕಾಂಗ್ರೆಸ್ ಹಿರಿಯ ನಾಯಕ..!

ಪ್ರವಾಸ ಬಳಿಕ ನಿಲುವು ಪ್ರಕಟಿಸುತ್ತೇನೆ:

ನನ್ನ ರಾಜಕೀಯ ನಡೆಯ ಬಗ್ಗೆ ಯಾವುದೇ ಅನುಮಾನ ಬೇಡ. ಪಕ್ಷದಲ್ಲಿ ಮುಸ್ಲಿಂ ನಾಯಕತ್ವದ ಸಂಘರ್ಷ ನನ್ನ ನಡೆಗೆ ಕಾರಣ ಎನ್ನುವುದು ಸಹ ಸರಿಯಲ್ಲ. ರಾಜ್ಯಾದ್ಯಂತ ಪ್ರವಾಸ ಮಾಡಿದ ಬಳಿಕ ನನ್ನ ನಿಲುವು ಪ್ರಕಟಿಸುತ್ತೇನೆ. ನನ್ನನ್ನು ಭೇಟಿ ಮಾಡಲು ಆಗಮಿಸಿದ್ದ ಡಿ.ಕೆ. ಶಿವಕುಮಾರ್‌ ಅವರಿಗೂ ಇದನ್ನೇ ತಿಳಿಸಿದ್ದೇನೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಾಜ್ಯದಲ್ಲಿ 'ನಾಯಕತ್ವ ಬದಲಾವಣೆ ಇಲ್ಲ'- ಯತೀಂದ್ರ ಹೇಳಿಕೆಗೆ ಡಿ.ಕೆ. ಶಿವಕುಮಾರ್ ಕೆಂಡಾಮಂಡಲ!
ರೈಲ್ವೆ ಮೂಲಸೌಕರ್ಯ ಅಭಿವೃದ್ಧಿಪಡಿಸಲು ಮೋದಿಯಿಂದ ಬದ್ಧತೆಯ ಕಾರ್ಯ: ಸಂಸದ ಬಿ.ವೈ.ರಾಘವೇಂದ್ರ