ಜನಾರ್ದನ ರೆಡ್ಡಿ ಮತ ಕಾಂಗ್ರೆಸ್‌ಗೆ ಖಚಿತ?: ಸಿಎಂ, ಡಿಸಿಎಂ ಭೇಟಿಯಾಗಿ ಮಾತುಕತೆ

Published : Feb 27, 2024, 04:00 AM IST
ಜನಾರ್ದನ ರೆಡ್ಡಿ ಮತ ಕಾಂಗ್ರೆಸ್‌ಗೆ ಖಚಿತ?: ಸಿಎಂ, ಡಿಸಿಎಂ ಭೇಟಿಯಾಗಿ ಮಾತುಕತೆ

ಸಾರಾಂಶ

ರಾಜ್ಯಸಭೆ ಚುನಾವಣೆಯ ಹಿಂದಿನ ದಿನವಾದ ಸೋಮವಾರ ಕೆಆರ್‌ಪಿಸಿ ಪಕ್ಷದ ಶಾಸಕ ಜನಾರ್ದನರೆಡ್ಡಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದು, ಜನಾರ್ಧನರೆಡ್ಡಿ ಮತ ಬಹುತೇಕ ಕಾಂಗ್ರೆಸ್ ಅಭ್ಯರ್ಥಿಗೆ ಎಂಬಂತಾಗಿದೆ. 

ಬೆಂಗಳೂರು (ಫೆ.27): ರಾಜ್ಯಸಭೆ ಚುನಾವಣೆಯ ಹಿಂದಿನ ದಿನವಾದ ಸೋಮವಾರ ಕೆಆರ್‌ಪಿಸಿ ಪಕ್ಷದ ಶಾಸಕ ಜನಾರ್ದನರೆಡ್ಡಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದು, ಜನಾರ್ಧನರೆಡ್ಡಿ ಮತ ಬಹುತೇಕ ಕಾಂಗ್ರೆಸ್ ಅಭ್ಯರ್ಥಿಗೆ ಎಂಬಂತಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್‌ನಲ್ಲಿ ಜನಾರ್ದನ ರೆಡ್ಡಿ ಕ್ಷೇತ್ರದ ಅಂಜನಾದ್ರಿ ಬೆಟ್ಟಕ್ಕೆ 100 ಕೋಟಿ ರು., ಅಭಿವೃದ್ಧಿ ಕಾರ್ಯಗಳಿಗೆ ಕೋಟ್ಯಂತರ ರು. ನೀಡಿದ್ದು, ಜತೆಗೆ ಐತಿಹಾಸಿಕ ಆನೆಗೊಂದಿ ಉತ್ಸವವನ್ನು ವೈಭವದಿಂದ ಆಚರಿಸಲು ಜಿಲ್ಲಾಡಳಿತ ನಿರ್ಧಾರ ಮಾಡಿದೆ.

ಈ ಹಿನ್ನೆಲೆಯಲ್ಲಿ ಜನಾರ್ದನ ರೆಡ್ಡಿ ಅವರು ಸೋಮವಾರ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿದ್ದಾರೆ. ಇದೇ ವೇಳೆ ರಾಜ್ಯಸಭೆ ಚುನಾವಣೆ ಮತದಾನದ ಬಗ್ಗೆಯೂ ಚರ್ಚೆ ನಡೆದಿದ್ದು, ಕಾಂಗ್ರೆಸ್‌ಗೆ ಮತ ಹಾಕಲು ಒಪ್ಪಿರುವುದಾಗಿ ತಿಳಿದುಬಂದಿದೆ.

ಡಿಕೆಶಿ ಆಪ್ತ ಪೋಲಿಂಗ್ ಏಜೆಂಟ್‌: ಇನ್ನು ಇದಕ್ಕೆ ಪೂರಕವಾಗಿ ಡಿ.ಕೆ. ಶಿವಕುಮಾರ್‌ ಆಪ್ತ ಯೋಗೇಂದ್ರ ವಿಕ್ರಮ್‌ ಅವರನ್ನು ಕೆಆರ್‌ಪಿಸಿ ಪಕ್ಷದ ಪೋಲಿಂಗ್‌ ಏಜೆಂಟ್‌ ಆಗಿ ನೇಮಿಸಿದ್ದು ಇದಕ್ಕೆ ಜನಾರ್ಧನರೆಡ್ಡಿ ಅವರು ಸಹಿ ಹಾಕಿದ್ದಾರೆ. ಹೀಗಾಗಿ ಜನಾರ್ದನರೆಡ್ಡಿ ಅವರು ಮತ ಹಾಕುವಾಗ ಯೋಗೇಂದ್ರ ವಿಕ್ರಮ್‌ ಅವರಿಗೆ ತೋರಿಸಿ ಹಾಕಬೇಕು.

ಅಭಿವೃದ್ಧಿ ಶೂನ್ಯ ಗ್ಯಾರಂಟಿ ಕಾಂಗ್ರೆಸ್‌ ಸರ್ಕಾರ: ಬಿ.ವೈ.ವಿಜಯೇಂದ್ರ ಆರೋಪ

ಇನ್ನೂ ಏನೂ ತೀರ್ಮಾನ ಮಾಡಿಲ್ಲ: ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜನಾರ್ಧನರೆಡ್ಡಿ, ಐತಿಹಾಸಿಕ ಆನೆಗೊಂದಿ ಉತ್ಸವವನ್ನು ವೈಭವದಿಂದ ಆಚರಿಸಲು ಜಿಲ್ಲಾಡಳಿತ ನಿರ್ಧಾರ ಮಾಡಿದೆ. ಮಾರ್ಚ್‌ ತಿಂಗಳಲ್ಲಿ ಈ ಉತ್ಸವ ನಡೆಸಲಾಗುತ್ತಿದ್ದು, ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳಿಗೆ ಆಹ್ವಾನ ನೋಡಲು ಹೋಗಿದ್ದೆ. ರಾಜ್ಯಸಭೆ ಚುನಾವಣೆ ಮತ ಹಾಕಲು ಎಲ್ಲರೂ ಮನವಿ ಮಾಡಿದ್ದಾರೆ. ಅದೇ ರೀತಿ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳೂ ಮನವಿ ಮಾಡಿದ್ದಾರೆ. ಆದರೆ ನಾನು ಇನ್ನೂ ಏನೂ ತೀರ್ಮಾನ ಮಾಡಿಲ್ಲ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಬೆಳಗಾವಿಯ 31 ಕೃಷ್ಣಮೃಗ ಸಾವಿಗೆ ಸಿಬ್ಬಂದಿ ನಿರ್ಲಕ್ಷ್ಯ ಕಾರಣವಲ್ಲ: ಸಚಿವ ಈಶ್ವರ್ ಖಂಡ್ರೆ
ಸಿಎಂ ರೇಸಲ್ಲಿ ಡಿಕೆಶಿ ಒಬ್ಬರೇ ಇಲ್ಲ, ಎಚ್‌ಕೆ, ಪರಂ, ಎಂಬಿಪಾ ಕೂಡ ಅರ್ಹ ಇದ್ದಾರೆ: ಕೆ.ಎನ್‌.ರಾಜಣ್ಣ