ಕೋಟ್ಯಂತರ ರೂ. ವಂಚನೆ ಪ್ರಕರಣದಲ್ಲಿ ಶಾಸಕ ಅರೆಸ್ಟ್

Published : Nov 07, 2020, 06:19 PM IST
ಕೋಟ್ಯಂತರ ರೂ. ವಂಚನೆ ಪ್ರಕರಣದಲ್ಲಿ ಶಾಸಕ ಅರೆಸ್ಟ್

ಸಾರಾಂಶ

ಕೋಟ್ಯಂತರ ರೂ. ವಂಚನೆ ಪ್ರಕರಣದಲ್ಲಿ ಶಾಸಕರೊಬ್ಬರನ್ನು ಪೊಲೀಸ್ ಅರೆಸ್ಟ್ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.

ಕಾಸರಗೋಡು, (ನ.07): ಕೋಟ್ಯಂತರ ರೂ. ವಂಚನೆ ಪ್ರಕರಣದಲ್ಲಿ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್(ಐಯುಎಂಎಲ್) ಮುಖಂಡ ಹಾಗೂ ಮಂಜೇಶ್ವರ ಶಾಸಕ ಎಂ.ಸಿ. ಕಮರುದ್ದೀನ್ ಅವರನ್ನು ಬಂಧಿಸಲಾಗಿದೆ.

ಚಿನ್ನದ ವ್ಯವಹಾರದಲ್ಲಿ ಠೇವಣಿದಾರರನ್ನು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಮರುದ್ದೀನ್ ಅವರನ್ನು ಇಂದು (ಶನಿವಾರ) ಪೊಲೀಸ್ರು ಅರೆಸ್ಟ್ ಮಾಡಿದ್ದಾರೆ.  ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ ವಿವೇಕ್ ಕುಮಾರ್ ನೇತೃತ್ವದ ವಿಶೇಷ ತನಿಖಾ ತಂಡ ಸುದೀರ್ಘ ವಿಚಾರಣೆಯ ಬಳಿಕ ಅವರನ್ನು ಬಂಧಿಸಿದೆ.

ಬಿಜೆಪಿ‌ಗೆ ಕಾಂಗ್ರೆಸ್ ರಿವರ್ಸ್ ಆಪರೇಷನ್: ಸಿದ್ದರಾಮಯ್ಯ ಮಹತ್ವದ ಸಭೆ..!

ಫ್ಯಾಶನ್ ಗೋಲ್ಡ್ ಎಂಬ ಬ್ರಾಂಡ್ ಹೆಸರಿನಲ್ಲಿ ನಡೆಯುವ ಚಿನ್ನದ ವ್ಯವಹಾರದಲ್ಲಿ 115 ಠೇವಣಿದಾರರು ಕಮರುದ್ದೀನ್ ವಿರುದ್ಧ ವಂಚನೆ ಆರೋಪ ಮಾಡಿದ್ದರು. 

15 ಕೋಟಿ ರೂಪಾಯಿ ಚಿನ್ನದ ವ್ಯವಹಾರದ ಠೇವಣಿ ಹಗರಣ ಇದಾಗಿದ್ದು ಇದರಲ್ಲಿ ಶಾಸಕರು 13 ಕೋಟಿ ರೂ. ವಂಚಿಸಿದ್ದಾರೆ ಎಂದು ಆರೋಪಿಸಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ
'ಅಹಿಂದ ಕಿಂಗ್ ಸಿದ್ದರಾಮಯ್ಯ' ಜೀವಂತ ಇರುವಾಗಲೇ ಪರ್ಯಾಯ ನಾಯಕತ್ವದ ಕೂಗು ಏಕೆ?: ಬೈರತಿ ಸುರೇಶ್