ಬಿಜೆಪಿಗೆ ವಿಪಕ್ಷ ನಾಯಕನ ಆಯ್ಕೆ ಮಾಡಲೇ ಆಗುತ್ತಿಲ್ಲ: ಲಕ್ಷ್ಮಣ ಸವದಿ

Published : Jul 31, 2023, 03:20 AM IST
ಬಿಜೆಪಿಗೆ ವಿಪಕ್ಷ ನಾಯಕನ ಆಯ್ಕೆ ಮಾಡಲೇ ಆಗುತ್ತಿಲ್ಲ: ಲಕ್ಷ್ಮಣ ಸವದಿ

ಸಾರಾಂಶ

ಬಿಜೆಪಿಯವರು ಮೊದಲು ನೆರೆ ಹಾವಳಿ, ಅತಿವೃಷ್ಟಿಯಿಂದ ಹಾಳಾಗಿದ್ದಾಗ ಏನು ಪರಿಹಾರ ಕೊಟ್ಟರು ಎನ್ನುವುದನ್ನು ಹೇಳಲಿ. ಅವರಿಗೆ ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡಲು ಆಗುತ್ತಿಲ್ಲ.

ಹುಬ್ಬಳ್ಳಿ (ಜು.31): ಬಿಜೆಪಿಯವರು ಮೊದಲು ನೆರೆ ಹಾವಳಿ, ಅತಿವೃಷ್ಟಿಯಿಂದ ಹಾಳಾಗಿದ್ದಾಗ ಏನು ಪರಿಹಾರ ಕೊಟ್ಟರು ಎನ್ನುವುದನ್ನು ಹೇಳಲಿ. ಅವರಿಗೆ ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡಲು ಆಗುತ್ತಿಲ್ಲ. ನಮ್ಮ ಪಕ್ಷದ ಬಗ್ಗೆ ಏನ್‌ ಮಾತನಾಡುತ್ತಾರೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿಗೆ ಮಾಜಿ ಉಪಮುಖ್ಯಮಂತ್ರಿ, ಶಾಸಕ ಲಕ್ಷ್ಮಣ ಸವದಿ ಟಾಂಗ್‌ ಕೊಟ್ಟರು.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದಿನ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಅತಿವೃಷ್ಟಿಯಿಂದ ಹಾನಿಯಾದ ಮನೆಗಳಿಗೆ ಆಗಲೇ ಸರಿಯಾಗಿ ಪರಿಹಾರ ನೀಡಿಲ್ಲ. ಇನ್ನೂ ಎಷ್ಟೋ ಸಂತ್ರಸ್ತರಿಗೆ ಪರಿಹಾರ ನೀಡುವುದು ಬಾಕಿಯಿದೆ. ನಮ್ಮ ಸರ್ಕಾರ ಎಲ್ಲರಿಗೂ ಸೂಕ್ತ ಪರಿಹಾರ ನೀಡಲು ಕ್ರಮ ಕೈಗೊಳ್ಳಲಿದೆ ಎಂದರು.

ತಿರುಪತಿ, ಗೋವಾ, ಹೈದರಾಬಾದ್‌ಗೂ ವಿಮಾನ ಹಾರಾಟಕ್ಕೆ ಅನುಮತಿ: ಸಂಸದ ರಾಘ​ವೇಂದ್ರ

ಇಡೀ ಸರ್ಕಾರ ವರ್ಗಾವಣೆ ದಂಧೆಯಲ್ಲಿ ಮುಳುಗಿದೆ ಎಂದು ಆರೋಪಿಸಿದ್ದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆರೋಪಕ್ಕೆ ಕಿಡಿಕಾರಿದ ಸವದಿ, ಸರ್ಕಾರ ಎಲ್ಲ ಬಗೆಯ ಸಹಾಯ ಮಾಡುತ್ತಿದ್ದು, ಯಾವುದೇ ಅಧಿಕಾರವಿಲ್ಲದೇ ಅಸಹಾಯಕತೆಯಿಂದ ಬಸವರಾಜ ಬೊಮ್ಮಾಯಿ ಈ ರೀತಿಯ ಸುಳ್ಳು ಆರೋಪ ಮಾಡುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಒಳ್ಳೆಯ ಕೆಲಸ ಮಾಡುತ್ತಿದ್ದು, ವಿನಾಕಾರಣ ಆರೋಪ ಮಾಡುತ್ತಿರುವುದು ಸರಿಯಲ್ಲ ಎಂದರು.

ಶಕ್ತಿ ಯೋಜನೆಯಿಂದ ಸಾರಿಗೆ ಇಲಾಖೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಸವದಿ, ಶಕ್ತಿ ಯೋಜನೆಯಿಂದ ಯಾವುದೇ ರೀತಿಯ ಆರ್ಥಿಕ ತೊಂದರೆ ಆಗಿಲ್ಲ. ಅದರಿಂದ ಸಾಕಷ್ಟು ಸಹಾಯವಾಗಿದೆ. ಏಕೆಂದರೆ ಜನರು ದಿನ ನಿತ್ಯ ಸಾರಿಗೆ ಸಂಸ್ಥೆಗಳಲ್ಲಿ ಪ್ರತಿದಿನ ಹೆಚ್ಚು ಹೆಚ್ಚು ಪ್ರಯಾಣಿಸುತ್ತಿದ್ದಾರೆ. ಇದರಿಂದ ಸಂಸ್ಥೆಗೆ ಹೆಚ್ಚಿನ ಲಾಭವಾಗಿದೆ ಎಂದರು.

ಟೋಲ್‌ ಸಂಗ್ರಹಿಸುವವರು ನಾವಲ್ಲ, ಹೆದ್ದಾರಿ ಪ್ರಾಧಿಕಾರದವರು: ಸಿದ್ದರಾಮಯ್ಯ

ಶಾಸಕರೊಬ್ಬರು ನೀಡಿದ್ದ ಪತ್ರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹರಿದು ಹಾಕಿದ್ದಾರೆ ಎನ್ನುವುದು ಊಹಾಪೋಹ. ಅದಕ್ಕೆ ಸಾಕ್ಷಿ ಏನಾದರೂ ಇದೆಯೇ ಎಂದು ಪ್ರಶ್ನಿಸಿದ ಸವದಿ, ಶಾಸಕರ ಅಸಮಾಧಾನ ಕುರಿತು ಚರ್ಚಿಸಲು ದೆಹಲಿಯಲ್ಲಿ ಸಭೆ ಕರೆದಿಲ್ಲ. ಮುಂಬರುವ ಲೋಕಸಭಾ ಚುನಾವಣೆಯ ಕುರಿತು ಚರ್ಚಿಸಲು ರಾಹುಲ್‌ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಸಭೆ ಕರೆದಿದ್ದಾರೆ. ಅಸಮಾಧಾನಗೊಂಡ ಶಾಸಕರ ಜತೆ ಈಗಾಗಲೇ ಶಾಸಕಾಂಗ ಸಭೆ ಕರೆದು ಚರ್ಚಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಕರ್ನಾಟಕ ಗದ್ದುಗೆ ಫೈಟ್‌ ಬಗ್ಗೆ ಹೈಕಮಾಂಡ್‌ ನಾಯಕರ ಚರ್ಚೆ
ಚುಂಚ ಶ್ರೀ ಬಳಿ ಕೈ ಮುಗಿದು ಎಚ್‌ಡಿಕೆ ಕ್ಷಮೆ