ಬಿಎಸ್‌ವೈ ಸಿಎಂ ಆಗಿ ಮುಂದುವರೆಯೋದು ಸೂರ್ಯ, ಚಂದ್ರರಿರುವಷ್ಟು ಸತ್ಯ: ರೇಣುಕಾಚಾರ್ಯ

Suvarna News   | Asianet News
Published : Jun 06, 2021, 03:38 PM ISTUpdated : Jun 06, 2021, 03:44 PM IST
ಬಿಎಸ್‌ವೈ ಸಿಎಂ ಆಗಿ ಮುಂದುವರೆಯೋದು ಸೂರ್ಯ, ಚಂದ್ರರಿರುವಷ್ಟು ಸತ್ಯ: ರೇಣುಕಾಚಾರ್ಯ

ಸಾರಾಂಶ

* ಇನ್ನೂ ಎರಡೂವರೆ ವರ್ಷ ಸಿಎಂ ಆಗಿ ಯಡಿಯೂರಪ್ಪ ಮುಂದುವರೆಯುತ್ತಾರೆ * ಬೆಂಗಳೂರಿಗೆ ಹೋಗಿ ಸಿಎಂ ಭೇಟಿ ಮಾಡ್ತೇನೆ  * ನಾವು ಯಡಿಯೂರಪ್ಪನವರ ಬೆಂಬಲಕ್ಕೆ ಸದಾ ಇರುತ್ತೇವೆ 

ದಾವಣಗೆರೆ(ಜೂ.06): ಬಿ.ಎಸ್‌. ಯಡಿಯೂರಪ್ಪನವರು ಸಿಎಂ ಆಗಿ ಮುಂದುವರೆಯೋದು ಸೂರ್ಯ, ಚಂದ್ರರಿರುವಷ್ಟು ಸತ್ಯ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ.

ಇಂದು(ಭಾನುವಾರ) ಜಿಲ್ಲೆಯ ಹೊನ್ನಾಳಿ ಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,ಯಡಿಯೂರಪ್ಪ ಆಲದ ಮರವಿದ್ದಂತೆ. ಹೈಕಮಾಂಡ್ ಸೂಚಿಸಿದರೆ ರಾಜೀನಾಮೆ ನೀಡುತ್ತೇನೆ ಎಂದು ಹೇಳಿದ್ದಾರೆ ವಿನಃ ಇದುವರೆಗೂ ಸೂಚಿಸಿಲ್ಲ. ಆದ್ದರಿಂದ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. 

ನಾಯಕತ್ವ ಬದಲಾವಣೆ ಮತ್ತೆ ಮುನ್ನೆಲೆಗೆ, ಸಿಎಂ ಶಾಕಿಂಗ್​ ಪ್ರತಿಕ್ರಿಯೆ

ಇನ್ನೂ ಎರಡೂವರೆ ವರ್ಷ ಸಿಎಂ ಆಗಿ ಯಡಿಯೂರಪ್ಪನವರು ಮುಂದುವರೆಯುತ್ತಾರೆ. ನಾನು ಕೂಡ ಇಂದು ಸಂಜೆ ಬೆಂಗಳೂರಿಗೆ ಹೋಗಿ ಸಿಎಂ ಅವರನ್ನ ಭೇಟಿ ಮಾಡುತ್ತೇನೆ. ಸಿಎಂ ಭೇಟಿ ಪೂರ್ವ ನಿಯೋಜನೆ ಭೇಟಿಯಾಗಿದೆ ಯಾವುದೇ ರಾಜಕೀಯ ಚರ್ಚೆ ಇಲ್ಲ. ಕ್ಷೇತ್ರದ ಅಭಿವೃದ್ಧಿಗೆ ಸಿಎಂ ಜೊತೆ ಚರ್ಚೆ ಮಾಡಲು ಹೊರಟಿರುವೆ ಎಂದು ಹೇಳಿದ್ದಾರೆ. 

ರಾಜ್ಯದಲ್ಲಿ ಯಡಿಯೂರಪ್ಪನವರಿಗೆ ಪರ್ಯಾಯ ನಾಯಕತ್ವದ ಪ್ರಶ್ನೆಯೇ ಇಲ್ಲ. ಸಿಎಂ ಬದಲಾವಣೆಯಾದ್ರೆ ಮಾತ್ರ ಪರ್ಯಾಯ ನಾಯಕತ್ವದ ಪ್ರಶ್ನೆ ಬರುತ್ತದೆ. ಯಡಿಯೂರಪ್ಪ ಸಂಘಟನೆಯಿಂದ ಬೆಳೆದು ಬಂದ ಹಿನ್ನಲೆಯಲ್ಲಿ ಶಿಸ್ತಿನಿಂದ ಹೇಳಿಕೆ ನೀಡಿದ್ದಾರೆ. ನಾವು ಯಡಿಯೂರಪ್ಪನವರ ಬೆಂಬಲಕ್ಕೆ ಸದಾ ಇರುತ್ತೇವೆ ಎಂದು ತಿಳಿಸಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಒಂದೇ ಕಾರಲ್ಲಿ ಪ್ರಯಾಣಿಸಿದ ಖರ್ಗೆ, ಡಿಕೆಶಿ: ತೀವ್ರ ರಾಜಕೀಯ ಕುತೂಹಲ
Karnataka News Live: BBK 12 - ಸ್ಪಂದನಾ ಸೋಮಣ್ಣ ಮುಂದೆ ರಜತ್‌ ಅಸಭ್ಯ ವರ್ತನೆ ಮಾಡಿದ್ರು - ಧ್ರುವಂತ್‌ ವಿರುದ್ಧ ರಜತ್‌ ಆರೋಪ