ಕಾಂಗ್ರೆಸ್ಸಿಂದ ಲೋಕಸಭೆ ಸ್ಪರ್ಧೆಗೆ ಸುಧಾಕರ್‌ ಯತ್ನ: ಶಾಸಕ ಪ್ರದೀಪ್‌ ಈಶ್ವರ್‌

Published : Jul 30, 2023, 03:00 AM IST
ಕಾಂಗ್ರೆಸ್ಸಿಂದ ಲೋಕಸಭೆ ಸ್ಪರ್ಧೆಗೆ ಸುಧಾಕರ್‌ ಯತ್ನ: ಶಾಸಕ ಪ್ರದೀಪ್‌ ಈಶ್ವರ್‌

ಸಾರಾಂಶ

ಮಾಜಿ ಸಚಿವ ಡಾ.ಕೆ.ಸುಧಾಕರ್‌ ಅವರು ಕಾಂಗ್ರೆಸ್‌ ನಾಯಕರ ಬಳಿ ಹೋಗಿ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಲೋಕಸಭೆ ಟಿಕೆಟ್‌ ಕೇಳಿದ್ದಾರೆ ಎಂದು ಶಾಸಕ ಪ್ರದೀಪ್‌ ಈಶ್ವರ್‌ ‘ಬಾಂಬ್‌’ ಸಿಡಿಸಿದ್ದಾರೆ. 

ಚಿಕ್ಕಬಳ್ಳಾಪುರ (ಜು.30): ಮಾಜಿ ಸಚಿವ ಡಾ.ಕೆ.ಸುಧಾಕರ್‌ ಅವರು ಕಾಂಗ್ರೆಸ್‌ ನಾಯಕರ ಬಳಿ ಹೋಗಿ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಲೋಕಸಭೆ ಟಿಕೆಟ್‌ ಕೇಳಿದ್ದಾರೆ ಎಂದು ಶಾಸಕ ಪ್ರದೀಪ್‌ ಈಶ್ವರ್‌ ‘ಬಾಂಬ್‌’ ಸಿಡಿಸಿದ್ದಾರೆ. ಶನಿವಾರ ಸುದ್ದಿಗಾರರ ಜೊತೆ ಮಾತನಾಡಿ, ಕಾಂಗ್ರೆಸ್‌ ಪಕ್ಷದ ಕೆಲ ನಾಯಕರನ್ನು ಸುಧಾಕರ್‌ ಭೇಟಿ ಮಾಡಿರುವುದು ನಿಜ. ಚಿಕ್ಕಬಳ್ಳಾಪುರದ ಕೆಲ ನಾಯಕರೇ ಕಾಂಗ್ರೆಸ್‌ ನಾಯಕರ ಬಳಿ ಅವರನ್ನು ಕರೆದೊಯ್ದಿದ್ದಾರೆ. ಕಾಂಗ್ರೆಸ್‌ ನಾಯಕರ ಬಳಿ ಹೋಗಿ ಎಂಪಿ ಟಿಕೆಟ್‌ ಕೇಳಿದ್ದಾರೆ. ಆದರೆ, ಕಾಂಗ್ರೆಸ್‌ ನಾಯಕರು ಒಪ್ಪಿಲ್ಲ ಎಂದರು.

ಧೈರ್ಯವಿದ್ದರೆ ಪ್ರದೀಪ್‌ ಅವರು ಸ್ವತಂತ್ರವಾಗಿ ಚುನಾವಣೆಯಲ್ಲಿ ಗೆದ್ದು ಬರಲಿ ಎಂಬ ಸುಧಾಕರ್‌ ಆರೋಪಕ್ಕೆ ಪ್ರತಿಕ್ರಿಯಿಸಿ, ‘ಎರಡು ತಿಂಗಳ ಹಿಂದೆಯೇ ನಾನು ನಿಮ್ಮನ್ನು ಸೋಲಿಸಿದ್ದೇನೆ. ಈಗ ಯಾಕೆ ಮತ್ತೆ ಸ್ಪರ್ಧಿಸಬೇಕು. ನೀವು ಬೇಕಾದರೆ, 5 ವರ್ಷ ಆದ ಮೇಲೆ ಪಕ್ಷೇತರರಾಗಿ ಬಂದು ಸ್ಪರ್ಧೆ ಮಾಡಿ. ಬೇರೆ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿದರೆ ವಿಧಾನಸೌಧಕ್ಕೆ ಬರುತ್ತೀರಾ?. ಚಿಕ್ಕಬಳ್ಳಾಪುರದಿಂದ ಸ್ಪರ್ಧೆ ಮಾಡಿದರೆ ಮತ್ತೆ 5 ವರ್ಷ ಸಫರ್‌ ಆಗುತ್ತೀರಾ’ ಎಂದು ಟಾಂಗ್‌ ನೀಡಿದರು.

ಪಿಯು ವಿದ್ಯಾರ್ಥಿಗಳಿಗೆ ಸಿಇಟಿ, ನೀಟ್‌ ಉಚಿತ ತರಬೇತಿ: ಶಾಸಕ ಪ್ರದೀಪ್‌ ಈಶ್ವರ್‌

ವರಮಹಾಲಕ್ಷ್ಮೀ ಹಬ್ಬಕ್ಕೆ ಸೀರೆ ವಿತರಣೆ: ನೂತನ ಶಾಸಕರಾಗಿ ಆಯ್ಕೆಯಾದ ಸಂದರ್ಭದಲ್ಲಿ ಶಾಸಕ ಪ್ರದೀಪ್‌ ಈಶ್ವರ್‌ ಹೇಳಿದಂತೆ ಪ್ರತಿ ವರ್ಷ ವರಮಹಾಲಕ್ಷ್ಮೀ ಹಬ್ಬಕ್ಕೆ ಕ್ಷೇತ್ರದ ಪ್ರತಿಯೊಂದು ಮನೆಗೆ ತಾಂಬೂಲ, ಅರಿಸಿಣ-ಕುಂಕುಮ, ಬಳೆ ಸಹಿತ ಸೀರೆಯನ್ನು ಉಡುಗೊರೆಯಾಗಿ ಇತ್ತಾಚೆಗೆ ವಿತರಣೆ ಮಾಡಿದರು. ಶಾಸಕ ಪ್ರದೀಪ್‌ ಈಶ್ವರ್‌ ಬೆಂಬಲಿಗರು ಗುರುವಾರ ಚಿಕ್ಕಬಳ್ಳಾಪುರ ನಗರದ ಕಂದವಾರ ಬಾಗಿಲಿನ ಶ್ರೀಲಕ್ಷ್ಮೀವೆಂಕಟೇಶ್ವರ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸುವ ಮೂಲಕ ಸೀರೆ ವಿತರಣೆಗೆ ಚಾಲನೆ ನೀಡಿದರು.

ತುಮಕೂರು ಜಿಲ್ಲೆಗೆ ಮೆಟ್ರೋ ರೈಲು ತರುವ ಚಿಂತನೆ: ಸಚಿವ ಪರಮೇಶ್ವರ್‌

ಈ ವೇಳೆ ಮಾತನಾಡಿದ ಮುಖಂಡ ಕೆ.ಎಲ್‌.ಶ್ರೀನಿವಾಸ್‌, ನಗರವೂ ಸೇರಿ ಹಬ್ಬದ ಹೊತ್ತಿಗೆ ಕ್ಷೇತ್ರದ ಪ್ರತಿಯೊಂದು ಊರಿನ ಮನೆ ಮನೆಗೂ ತಾಂಬೂಲ ಸಹಿತ ಸೀರೆ ಬಳೆ ವಿತರಣೆ ಆಗಲಿದೆ. ಇದರಲ್ಲಿ ಯಾವುದೇ ರಾಜಕೀಯದ ಉದ್ದೇಶ ಇಲ್ಲ. ಏಕೆಂದರೆ ಭಾರತೀಯ ಸಂಸ್ಕೃತಿ ಸಂಸ್ಕಾರದಲ್ಲಿ ಹಬ್ಬಗಳಿಗೆ ಬಾಗೀನ ಕೊಡುವ ಪದ್ದತಿ ರೂಢಿಯಲ್ಲಿದೆ. ಈ ಸತ್ಸಂಪ್ರದಾಯವನ್ನು ಶಾಸಕರು ಮುಂದುವರೆಸಿಕೊಂಡು ಹೋಗುತ್ತಿದ್ದಾರೆ ಎಂದರು. ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಜಯರಾಂ,ರಘು, ಡ್ಯಾನ್ಸ್‌ ಶ್ರೀನಿವಾಸ್‌,ಪ್ರೆಸ್‌ ಸೂರಿ, ರಾಜಶೇಖರ್‌(ಬುಜ್ಜಿ), ಸುಧಾ ವೆಂಕಟೇಶ್‌, ಡೇರಿ ಗೋಪಿ, ಮಾಡ್ರನ್‌ ಶಿವಕುಮಾರ್‌, ಲಕ್ಷಣ್‌, ಚಿಕ್ಕಪ್ಪಯ್ಯ, ಜಯರಾಮ್‌, ವೆಂಕಟ್‌, ದೇವರಾಜ್‌, ಪರಿಶ್ರಮ ಅಕಾಡೆಮಿ ಸಿಬ್ಬಂದಿ ಇದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಕಾಂಗ್ರೆಸ್ ಒಳಜಗಳಕ್ಕೆ ಪ್ರತಿಪಕ್ಷ ಕಿಡಿ.. ನಾಯಕತ್ವವಿಲ್ಲದೆ ರಾಜ್ಯದ ಅಭಿವೃದ್ಧಿ ಅಸಾಧ್ಯ: ಆರ್.ಅಶೋಕ್‌
ಭಗವದ್ಗೀತೆ ಬೋಧನೆ ಪ್ರಸ್ತಾಪ ಹಿಂದೆ ಎಚ್ಜಿಕೆ ಅಜೆಂಡಾ : ಮಧು ಬಂಗಾರಪ್ಪ