ಸಿಎಂ ಸುತ್ತ ಓಡಾಡುವವರಿಗೆ ಮಣೆ: ಬಿಜೆಪಿ ಶಾಸಕನ ಆಕ್ರೋಶ

Kannadaprabha News   | Asianet News
Published : Jan 14, 2021, 07:51 AM ISTUpdated : Jan 14, 2021, 07:53 AM IST
ಸಿಎಂ ಸುತ್ತ ಓಡಾಡುವವರಿಗೆ ಮಣೆ: ಬಿಜೆಪಿ ಶಾಸಕನ ಆಕ್ರೋಶ

ಸಾರಾಂಶ

ವೈಯಕ್ತಿಕವಾಗಿ ಯಾರ ಮೇಲೂ ನನಗೆ ದ್ವೇಷ ಇಲ್ಲ| ಮಂತ್ರಿ ಮಾಡಿ ಎಂದು ನಾನು ಯಾರ ಮನೆ ಬಳಿಯೂ ಹೋಗಿಲ್ಲ| 1993ರಿಂದ ಬಿಜೆಪಿಯಲ್ಲಿದ್ದು, ಜಿಲ್ಲಾ ಪಂಚಾಯಿತಿ ಸದಸ್ಯ ಹಾಗೂ ಮೂರು ಬಾರಿ ಶಾಸಕನಾಗಿ ಆಯ್ಕೆ ಆಗಿದ್ದೇನೆ| ಬಿಜೆಪಿ ಯುವಕರ ಪಕ್ಷವಾಗಿದ್ದು, ಯುವಕರಿಗೆ ಆದ್ಯತೆ ನೀಡಿದರೆ ಪಕ್ಷಕ್ಕೆ ಅನುಕೂಲ: ಸತೀಶ್‌ ರೆಡ್ಡಿ| 

ಬೆಂಗಳೂರು(ಜ.14): ಮುಖ್ಯಮಂತ್ರಿಗಳ ಸುತ್ತಮುತ್ತ ಓಡಾಡುವವರಿಗೆ ಮಾತ್ರ ಮಣೆ ಹಾಕಿದರೆ ಸಹಜವಾಗಿ ನೋವು ಆಗಲಿದೆ ಎಂದು ಸಚಿವ ಸ್ಥಾನದ ಆಕಾಂಕ್ಷಿ ಆಗಿದ್ದ ಶಾಸಕ ಸತೀಶ್‌ ರೆಡ್ಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರದ ಮಾಜಿ ಸಚಿವ ಅನಂತಕುಮಾರ್‌ ಅವರು ಇಲ್ಲದಿರುವುದು ನಮ್ಮನ್ನು ಕಾಡುತ್ತಿದೆ. ಅಣ್ಣನಂತೆ ಇದ್ದ ಅನಂತ ಕುಮಾರ್‌ ಅವರ ಬಳಿ ನೋವು ಹೇಳಿಕೊಳ್ಳುತ್ತಿದ್ದೆವು. ಅಲ್ಲದೆ, ಶಾಸಕರ ನೋವನ್ನು ಕೇಂದ್ರದ ಗಮನಕ್ಕೆ ತರುವ ಪ್ರಯತ್ನ ಅವರು ಮಾಡುತ್ತಿದ್ದರು. ಅನಂತಕುಮಾರ್‌ ಇದ್ದಿದ್ದರೆ ಖಂಡಿತವಾಗಿಯೂ ಪರಿಹಾರ ಸಿಗುತ್ತಿತ್ತು ಎಂದು ಹೇಳಿದರು.

ವೈಯಕ್ತಿಕವಾಗಿ ಯಾರ ಮೇಲೂ ನನಗೆ ದ್ವೇಷ ಇಲ್ಲ. ಮಂತ್ರಿ ಮಾಡಿ ಎಂದು ನಾನು ಯಾರ ಮನೆ ಬಳಿಯೂ ಹೋಗಿಲ್ಲ. 1993ರಿಂದ ಬಿಜೆಪಿಯಲ್ಲಿದ್ದು, ಜಿಲ್ಲಾ ಪಂಚಾಯಿತಿ ಸದಸ್ಯ ಹಾಗೂ ಮೂರು ಬಾರಿ ಶಾಸಕನಾಗಿ ಆಯ್ಕೆ ಆಗಿದ್ದೇನೆ. ಬಿಜೆಪಿ ಯುವಕರ ಪಕ್ಷವಾಗಿದ್ದು, ಯುವಕರಿಗೆ ಆದ್ಯತೆ ನೀಡಿದರೆ ಪಕ್ಷಕ್ಕೆ ಅನುಕೂಲವಾಗಲಿದೆ ಎಂಬುದು ನನ್ನ ಅಭಿಪ್ರಾಯ ಎಂದರು.

ಯಡಿಯೂರಪ್ಪ ಅವರಿಗೆ ಸಮಾನಂತರವಾಗಿ ನಿಲ್ಲುವ ವ್ಯಕ್ತಿತ್ವ ಹೊಂದಿದವರು ಅನಂತಕುಮಾರ್‌. ಯಡಿಯೂರಪ್ಪ ತಂದೆಯಂತೆ ಇದ್ದರೆ, ಅನಂತಕುಮಾರ್‌ ಅಣ್ಣನಂತೆ ಇದ್ದರು. ಯಡಿಯೂರಪ್ಪ ಪರಿಹಾರ ಕೊಡುವ ಸ್ಥಿತಿಯಲ್ಲಿ ಇಲ್ಲ ಎಂದು ತಿಳಿಸಿದರು.

ಯಡಿಯೂರಪ್ಪನವರೇ ನಿಮ್ಮ ಮನೆ ದೇವರು ನಿಮಗೆ ಒಳ್ಳೇದು ಮಾಡಲ್ಲ: ವಿಶ್ವನಾಥ್

ರೀ ಯಡಿಯೂರಪ್ಪನವರೇ...

ಇದಕ್ಕೂ ಮುನ್ನ ಖಾರವಾಗಿ ಟ್ವೀಟ್‌ ಮಾಡಿದ್ದ ಸತೀಶ್‌ ರೆಡ್ಡಿ, ರೀ ಯಡಿಯೂರಪ್ಪನವರೇ ಮಂತ್ರಿಮಂಡಲ ವಿಸ್ತರಣೆಯಲ್ಲಿ ಸಚಿವರ ಆಯ್ಕೆ ಪ್ರಕ್ರಿಯೆಯ ಮಾನದಂಡಗಳೇನು? ನಿಮಗೆ ನಮ್ಮ ರಾಜ್ಯ ಮತ್ತು ರಾಷ್ಟ್ರದ ನಾಯಕರುಗಳಿಗೆ ನಿಷ್ಠಾವಂತ ಯುವ ಕಾರ್ಯಕರ್ತರು ಕಾಣುತ್ತಿಲ್ಲವೆ? ನಮ್ಮ ಕಷ್ಟ ನಷ್ಟಗಳನ್ನು ಆಲಿಸುತ್ತಿದ್ದ ಅನಂತಕುಮಾರ್‌ ಅವರು ಇಲ್ಲದಿರುವಿಕೆ ಎದ್ದು ಕಾಣುತ್ತಿದೆ ಎಂದು ಟ್ವೀಟ್‌ ಮಾಡಿದ್ದರು.

ಸ್ವಲ್ಪ ಸಮಯದ ಬಳಿಕ ಸತೀಶ್‌ ರೆಡ್ಡಿ ಅವರು ‘ರೀ’ ಎಂಬ ಪದವನ್ನು ತೆಗೆದು ಪರಿಷ್ಕರಿಸಿ, ನಾನು ಭಾವುಕನಾಗಿದ್ದ ಹಿನ್ನೆಲೆಯಲ್ಲಿ ರೀ ಯಡಿಯೂರಪ್ಪನವರೇ ಎಂದು ಟ್ವೀಟ್‌ ಮಾಡಿದ್ದೆ. ಆ ಪದವನ್ನು ತೆಗೆದು ಹಾಕಲಾಗಿದೆ. ವೈಯಕ್ತಿಕವಾಗಿ ನನಗೆ ಯಾರ ಮೇಲೂ ದ್ವೇಷ ಇಲ್ಲ ಎಂದು ಸ್ಪಷ್ಟಪಡಿಸಿದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಯಾವುದೇ ಕ್ಷಣದಲ್ಲಾದರೂ ಡಿ.ಕೆ. ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಉದಯ ಕದಲೂರು ಓಪನ್ ಹೇಳಿಕೆ
ಎಸ್ಸಿ ಒಳ ಮೀಸಲಾತಿ ಜಾರಿ ವಿಧೇಯಕಕ್ಕೆ ಸಂಪುಟ ಅಸ್ತು: ಚಾರಿತ್ರಿಕ ಆದೇಶಕ್ಕೆ ಕಾನೂನು ಬಲ