ಗ್ಯಾರಂಟಿಗಾಗಿ ರಸ್ತೆಯಲ್ಲಿ ಓಡಾಡುವವರಿಗೂ ಕಾಂಗ್ರೆಸ್ ಬರೆ: ಶಾಸಕ ಸುನಿಲ್ ಕುಮಾರ್

Published : Aug 24, 2024, 07:25 PM IST
ಗ್ಯಾರಂಟಿಗಾಗಿ ರಸ್ತೆಯಲ್ಲಿ ಓಡಾಡುವವರಿಗೂ ಕಾಂಗ್ರೆಸ್ ಬರೆ: ಶಾಸಕ ಸುನಿಲ್ ಕುಮಾರ್

ಸಾರಾಂಶ

ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ, ಗ್ಯಾರಂಟಿ ಯೋಜನೆಗಳಿಗಾಗಿ ಹಣಕಾಸು ಹೊಂದಾಣಿಕೆಗೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ ಜನಸಾಮಾನ್ಯರ ಮೇಲೆ ಹೊರೆ ಹೊರಿಸಿತ್ತು. 

ಕಾರ್ಕಳ (ಆ.24): ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ, ಗ್ಯಾರಂಟಿ ಯೋಜನೆಗಳಿಗಾಗಿ ಹಣಕಾಸು ಹೊಂದಾಣಿಕೆಗೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ ಜನಸಾಮಾನ್ಯರ ಮೇಲೆ ಹೊರೆ ಹೊರಿಸಿತ್ತು. ಈಗ ರಸ್ತೆಯಲ್ಲಿ ಓಡಾಡುವರಿಂದಲೂ ಸುಂಕ ವಸೂಲಾತಿಗೆ ಇಳಿದಿದ್ದು, ರಾಜ್ಯ ಹೆದ್ದಾರಿಯಲ್ಲಿ ಟೋಲ್ ಸಂಗ್ರಹಕ್ಕೆ ಮುಂದಾಗಿದೆ. ರಸ್ತೆಯಲ್ಲಿ ಓಡಾಡುವವರಿಗೂ ಬರೆ ಎಳೆಯಲು ಕಾಂಗ್ರೆಸ್ ಸರ್ಕಾರ ಮುಂದಾಗಿದೆ ಎಂದು ಶಾಸಕ ವಿ. ಸುನಿಲ್ ಕುಮಾರ್ ಕಿಡಿಕಾರಿದ್ದಾರೆ.

ಬೆಳ್ಮಣ್ ಟೋಲ್ ಸಂಗ್ರಹ ವಿರುದ್ಧ ಉಡುಪಿ ಜಿಲ್ಲಾ ಕಾಂಗ್ರೆಸ್‌ನಿಂದ ಎರಡು ದಿನದ ಹಿಂದೆ ಪ್ರತಿಭಟನೆ ನಡೆದಿತ್ತು. ಕಾಂಗ್ರೆಸ್ ಮುಖಂಡ ಮಾಜಿ ಸಚಿವ ವಿನಯಕುಮಾರ್ ಸೊರಕೆ ನೇತೃತ್ವದಲ್ಲೆ ಪ್ರತಿಭಟನೆ ನಡೆದಿತ್ತು. ಇದನೆಲ್ಲ ಗಮನಿಸುವಾಗ ಕಾಂಗ್ರೆಸ್ ಸರ್ಕಾರ ಸಂಪೂರ್ಣ ಕೋಮಾ ಸ್ಥಿತಿಗೆ ತಲುಪಿದೆ ಎನ್ನುವುದು ಗೊತ್ತಾಗುತ್ತದೆ. ಕಾಂಗ್ರೆಸ್‌ನ ಮಾಜಿ ಜನಪ್ರತಿನಿಧಿಗಳು, ಸ್ಥಳೀಯ ನಾಯಕರು, ಕಾರ್ಯಕರ್ತರು ಎಲ್ಲರು ಗೊಂದಲದಲ್ಲಿದ್ದು, ಯಾರಿಗೆ ಮನವಿ ಕೊಡುವುದು ಎನ್ನುವುದು ಸಹ ತಿಳಿಯದ ಸ್ಥಿತಿ ಈಗ ಕಾಂಗ್ರೆಸಿಗರಿಗೆ ಬಂದಿದೆ. ತಮ್ಮದೇ ಸರ್ಕಾರ ಆಡಳಿತದಲ್ಲಿದೆ ಎನ್ನುವ ಗೊಡವೆಯೂ ಕಾಂಗ್ರೆಸಿಗರಿಗಿಲ್ಲ ಎಂದವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಗ ನಾಗಚೈತನ್ಯ ಮೇಲೆ ಕೋಪಗೊಂಡ ಲಕ್ಷ್ಮೀ ದಗ್ಗುಬಾಟಿ: ಸಮಂತಾ ಜೊತೆಗಿನ ಡಿವೋರ್ಸ್ ಕಾರಣಾನಾ?

ಬಿಜೆಪಿ ಸರ್ಕಾರದ ಅವಧಿಯಲ್ಲಿ ಟೋಲ್ ಸಂಗ್ರಹ ವಿಚಾರ ಪ್ರಸ್ತಾಪವಾಗಿ ಅದಕ್ಕೆ ವಿರೋಧ ವ್ಯಕ್ತವಾದಾಗ ಸ್ಥಳೀಯರ ಅಭಿಪ್ರಾಯ ಪಡೆದು, ವಿಶ್ವಾಸಕ್ಕೆ ತೆಗೆದುಕೊಂಡು ಟೋಲ್ ಸಂಗ್ರಹ ನಿರ್ಧಾರ ವಾಪಸ್ ಪಡೆಯುವಂತೆ ಮಾಡಲಾಗಿತ್ತು. ಟೋಲ್ ಸಂಗ್ರಹಕ್ಕೆ ತಡೆ ತರಲಾಗಿತ್ತು. ಈ ಸರ್ಕಾರ ಈ ಕೂಡಲೇ ಪಡುಬಿದ್ರಿ- ಕಾರ್ಕಳ ನಡುವೆ ರಾಜ್ಯ ಹೆದ್ದಾರಿಯಲ್ಲಿ ಟೋಲ್ ಸಂಗ್ರಹ ನಿರ್ಧಾರ ಕೈ ಬಿಡುವಂತೆ ಅವರು ಆಗ್ರಹಿಸಿದ್ದಾರೆ. ವಿರೋಧದ ನಡುವೆಯೂ ಜಾರಿಗೆ ಮುಂದಾದರೆ ಮುಂದೆ ತೀವ್ರ ಪ್ರತಿರೋಧ ಎದುರಿಸಬೇಕಾದಿತು ಎಂದು ಎಚ್ಚರಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿಸೇರಿಯನ್‌ ಹೆರಿಗೆ ಹೆಚ್ಚಳ ಏಕೆ ಎಂದು ತಿಳಿಯಲು ಆಡಿಟ್‌: ಸಚಿವ ದಿನೇಶ್‌ ಗುಂಡೂರಾವ್
ಪ್ರಧಾನಿಗೆ ಪತ್ರ ಬರೆಯುವುದರಲ್ಲಿ ಸಿದ್ದರಾಮಯ್ಯ, ಡಿಕೆಶಿ ನಿಸ್ಸೀಮರು: ಬಿ.ವೈ.ವಿಜಯೇಂದ್ರ