MLC ಎಲೆಕ್ಷನ್: ನಾಮಪತ್ರ ಸಲ್ಲಿಕೆ ಕೊನೆ ದಿನ ಹತ್ತಿರವಾಗುತ್ತಿದ್ದಂತೆ ಬಿಜೆಪಿ ಅಲರ್ಟ್

Published : Jun 14, 2020, 04:58 PM ISTUpdated : Jun 14, 2020, 05:02 PM IST
MLC ಎಲೆಕ್ಷನ್: ನಾಮಪತ್ರ ಸಲ್ಲಿಕೆ ಕೊನೆ ದಿನ ಹತ್ತಿರವಾಗುತ್ತಿದ್ದಂತೆ ಬಿಜೆಪಿ ಅಲರ್ಟ್

ಸಾರಾಂಶ

ವಿಧಾನಪರಿಷತ್ ಚುನಾವಣೆಗೆ ಇನ್ನೇನು ನಾಲ್ಕು ದಿನಗಳ ಬಾಕಿದೆ. ಈ ಹಿನ್ನೆಲೆಯಲ್ಲಿ ಅಲರ್ಟ್ ಆದ ರಾಜ್ಯ ಬಿಜೆಪಿ ಅಭ್ಯರ್ಥಿಗಳನ್ನ ಫೈನಲ್ ಮಾಡಲು ಮುಹೂರ್ತ ಫಿಕ್ಸ್ ಮಾಡಿದೆ.

ಬೆಂಗಳೂರು, (ಜೂನ್. 14):  ಕರ್ನಾಟಕ ವಿಧಾನಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಸಲು ದಿನಗಣನೆ ಆರಂಭವಾಗಿದ್ದು, ಅಭ್ಯರ್ಥಿಗಳ ಆಯ್ಕೆ ಬಗ್ಗೆ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ಕರೆದಿದೆ.

ಈ ಕುರಿತು ಮಾಹಿತಿ ನೀಡಿರುವ ಸಚಿವ ಕೆ. ಎಸ್. ಈಶ್ವರಪ್ಪ, ಸೋಮವಾರ ಸಂಜೆ 4ಗಂಟೆ ಕೋರ್ ಕಮಿಟಿ ಸಭೆ ನಡೆಯಲಿದೆ. ಪರಿಷತ್ ಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ ಎಂದು ಹೇಳಿದರು. 

ಕಾಂಗ್ರೆಸ್‌ ಮತ್ತು ಜೆಡಿಎಸ್‌ನಿಂದ ಪಕ್ಷಕ್ಕೆ ಬಂದು ಬಿಜೆಪಿ ಅಧಿಕಾರಕ್ಕೆ ಬರಲು ಸಹಾಯ ಮಾಡಿದವರಿಗೆ ಟಿಕೆಟ್ ನೀಡಬೇಕು. ಪಕ್ಷಕ್ಕಾಗಿ ದುಡಿದವರಿಗೂ ಆದ್ಯತೆ ನೀಡಬೇಕಾಗುತ್ತದೆ ಎಂದರು. 

ವಿಧಾನ ಪರಿಷತ್ ಚುನಾವಣೆ ವೇಳೆ ಅನುಸರಿಸಬೇಕಾದ ಮಾರ್ಗಸೂಚಿ ಬಿಡುಗಡೆ

ಅಭ್ಯರ್ಥಿಗಳ ಆಯ್ಕೆ ಪಕ್ಷಕ್ಕಾಗಿ ದುಡಿದವರಿಗೆ, ಸರ್ಕಾರ ಬರಲು ಸಹಕಾರ ನೀಡಿದವರಿಗೆ ಸಮಾಧಾನ ತರಲಿದೆ ಎಂದು ಅಂದುಕೊಂಡಿದ್ದೇವೆ. ಎಲ್ಲರಿಗೂ ಆದ್ಯತೆ ನೀಡಲಾಗುತ್ತದೆ ಮುಂದಿನ ಮೂರು ವರ್ಷವನ್ನು ಸರ್ಕಾರ ಪೂರ್ಣಗೊಳಿಸಲಿದೆ ಎಂದು ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ಕರ್ನಾಟಕ ವಿಧಾನಸಭೆಯಿಂದ ಒಟ್ಟು 7 ಸದಸ್ಯರನ್ನು ವಿಧಾನ ಪರಿಷತ್‌ಗೆ ಆಯ್ಕೆ ಮಾಡಲು ಜೂನ್ 29ರಂದು ಚುನಾವಣೆ ನಡೆಯಲಿದ್ದು, ಜೂನ್ 18 ನಾಮಪತ್ರ ಸಲ್ಲಿಸಲು ಕೊನೆ ದಿನವಾಗಿದೆ.

 ವಿಧಾನಸಭೆಯಲ್ಲಿ ಬಿಜೆಪಿ 116 ಸದಸ್ಯ ಬಲವನ್ನು ಹೊಂದಿದ್ದು, ನಾಲ್ವರು ಸದಸ್ಯರು ಆಯ್ಕೆಯಾಗಲಿದ್ದಾರೆ. ಇನ್ನು ಕಾಂಗ್ರೆಸ್ 2 ಮತ್ತು ಜೆಡಿಎಸ್ ಒಬ್ಬರು ಪರಿಷತ್‌ಗೆ ಆಯ್ಕೆಯಾಗಲಿದೆ.

ನಾಲ್ಕು ಸ್ಥಾನ 40 ಆಕಾಂಕ್ಷಿಗಳು
 ನಾಲ್ಕು ಸ್ಥಾನಗಳಿಗೆ ಬಿಜೆಪಿ 40 ಜನರು ಟಿಕೆಟ್ ಆಕಾಂಕ್ಷಿಗಳಿದ್ದು, ಸೋಮವಾರ ನಡೆಯುವ ಕೋರ್ ಕಮಿಟಿ ಸಭೆಯಲ್ಲಿ ಹೆಸರುಗಳನ್ನು ಫೈನ್ ಮಾಡಿ ಹೈಕಮಾಂಡ್‌ಗೆ ರವಾನಿಸುವ ಸಾಧ್ಯತೆಗಳಿವೆ.  ಇನ್ನು ರಾಜ್ಯ ಕಮಿಟಿ ಕಳುಹಿಸಿದ ಪಟ್ಟಿ ಹೈಕಮಾಂಡ್ ಓಕೆ ಅನ್ನುತ್ತಾ ಅಥವಾ ರಾಜ್ಯಸಭೆಗೆ ಘೋಷಿಸಿದಂತೆ ಪರಿಷತ್‌ ಎಲೆಕ್ಷನ್‌ಗೂ ಅಚ್ಚರಿ ಅಭ್ಯರ್ಥಿಗೆ ಟಿಕೆಟ್ ನೀಡುತ್ತಾ ಎನ್ನುವುದು ಭಾರೀ ಕುತೂಹಲ ಮೂಡಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
ಹಿಂದೂಗಳು ಒಂದಾಗದಿದ್ರೆ ದೇಶ, ಸಂವಿಧಾನ ಉಳಿಯಲ್ಲ: ಶಾಸಕ ಬಸನಗೌಡ ಪಾಟೀಲ ಯತ್ನಾಳ