
ಧಾರವಾಡ, (ಜ.30): ನಾವು ಯಾರನ್ನು ಒದ್ದು ಬಂದಿದ್ದೇವೋ.. ಇಂದು ಅವರ ಜೊತೆಗೆನೇ ಮದುವೆಯಾಗಿದ್ದೇವೆ ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.
ಹೌದು...ಆಡಳಿತರೂಢ ಬಿಜೆಪಿ, ಪರಿಷತ್ ಸಭಾಪತಿಯನ್ನು ಜೆಡಿಎಸ್ಗೆ ಬಿಟ್ಟುಕೊಟ್ಟು ತಾನು ಉಪಸಭಾಪತಿ ಕುರ್ಚಿಯಲ್ಲಿ ಕುಳಿತುಕೊಂಡಿದೆ. ಆದ್ರೆ, ಇಲ್ಲಿ ತಮ್ಮ ಮಾಜಿ ಪಕ್ಷ ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿರುವುದಕ್ಕೆ ವಿಶ್ವನಾಥ್ ಕೊಂಚ ಬೇಸರಗೊಂಡಂತಿದೆ. ಯಾಕಂದ್ರೆ ಈ ಹಿಂದೆ ವಿಶ್ವನಾಥ್ ಅವರು ಜೆಡಿಎಸ್ ಶಾಸಕರಾಗಿದ್ದವರು. ಅಲ್ಲದೇ ಕುಮಾರಸ್ವಾಮಿ ನಡೆಗೆ ಬಹಿರಂಗವಾಗಿಯೇ ಆಕ್ಷೇಪ ವ್ಯಕ್ತಪಡಿಸಿದ್ದರು.
'ಬಿಜೆಪಿ-ಜೆಡಿಎಸ್ ಮೈತ್ರಿ: ದೇವೇಗೌಡ್ರು ನನ್ನ ಸಲುವಾಗಿ ಈ ತೀರ್ಮಾನ ಮಾಡಿದ್ರು'
ಇನ್ನು ಈ ಬಗ್ಗೆ ಧಾರವಾಡದಲ್ಲಿ ಇಂದು (ಶನಿವಾರ) ಸುದ್ದಿಗಾರೊಂದಿಗೆ ಮಾತನಾಡಿದ ಅವರು, ನಾನು ಹಠದಿಂದ ಮಂತ್ರಿ ಆಗಬೇಕು ಎಂದು ಜೆಡಿಎಸ್ ಬಿಟ್ಟು ಬಂದಿಲ್ಲ. 17 ಜನರು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ವಿ. ಇಲ್ಲಿ ಪಕ್ಷ ರಾಜಕಾರಣ ಸತ್ತು ಹೋಗಿದೆ. ಶಾಸಕಾಂಗ ಪಕ್ಷದ ನಾಯಕನ ವಿರುದ್ಧ ನಡೆದ ಷ್ಯಡ್ಯಂತ್ರ ಇದು ಎಂದು ಗುಡುಗಿದರು.
ದೇಶದಲ್ಲಿ ಪ್ರಧಾನಿ ಮೋದಿ ಕುಟುಂಬ ರಾಜಕಾರಣ ನಡೆಯುತ್ತಿದೆ ಅಂತಿದ್ದಾರೆ. ಕುಟುಂಬ ರಾಜಕಾರಣಕ್ಕೆ ಕೊನೆ ಹಾಡಿದ್ದೇ ನಾವು. ಅನಂತಕುಮಾರ್ ನಿಧನದ ನಂತರ ಅವರ ಕುಟುಂಬಕ್ಕೆ ಟಿಕೆಟ್ ಸಿಕ್ಕಿಲ್ಲ. ಇನ್ನು ಅಂಗಡಿ ಕುಟುಂಬಕ್ಕೆ ಟಿಕೆಟ್ ಕೊಡೋದರ ಬಗ್ಗೆ ಕಾದು ನೋಡೋಣ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.