ಕರ್ನಾಟಕದ MLC ಪುತ್ರ ಹಠಾತ್ ನಿಧನ, ಮಗನ ಮುಖ ನೋಡದ ಸ್ಥಿತಿಯಲ್ಲಿ ತಂದೆ

Published : Oct 18, 2020, 01:26 PM ISTUpdated : Oct 19, 2020, 10:20 PM IST
ಕರ್ನಾಟಕದ MLC ಪುತ್ರ ಹಠಾತ್ ನಿಧನ,  ಮಗನ ಮುಖ ನೋಡದ ಸ್ಥಿತಿಯಲ್ಲಿ ತಂದೆ

ಸಾರಾಂಶ

ಕಾಂಗ್ರೆಸ್‌ ಪಕ್ಷದ ಮುಖಂಡ ಹಾಗೂ ವಿಧಾನ ಪರಿಷತ್ ಸದಸ್ಯರೊಬ್ಬರ ಪುತ್ರ ದಿಢೀರ್ ಸಾವನ್ನಪ್ಪಿದ್ದು, ಇಡೀ ಕುಟುಂಬ ಶೋಕ ಸಾಗರದಲ್ಲಿ ಮುಳುಗಿದೆ.

ಶಿವಮೊಗ್ಗ, (ಅ.18): ಕಾಂಗ್ರೆಸ್‌ ಪಕ್ಷದ ಮುಖಂಡ ಹಾಗೂ ವಿಧಾನ ಪರಿಷತ್ ಸದಸ್ಯ ಆರ್.ಪ್ರಸನ್ನ ಕುಮಾರ್ ಅವರ ಪುತ್ರ ಸುಹಾಸ್ (31) ನಿಧನರಾಗಿದ್ದಾರೆ.

ಇಂದು (ಭಾನುವಾರ) ಹೃದಯಾಘಾತದಿಂದ ಮೃತರಾಗಿದ್ದಾರೆ. ಮುಂಜಾನೆ ಎದೆನೋವಿನಿಂದ ನಿತ್ರಾಣರಾಗಿ ಕುಸಿದು ಬಿದ್ದ ಸುಹಾಸ್ ರನ್ನು ಶಿವಮೊಗ್ಗ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಎಂಎಲ್ಸಿ ಪುತ್ರ ಸುಹಾಸ್ ಕೊನೆಯುಸಿರೆಳೆದಿದ್ದಾರೆ. 

ಕೊರೋನಾ ಸೊಂಕಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ಉಪಮುಖ್ಯಮಂತ್ರಿ ಪುತ್ರನ ಸ್ಥಿತಿ ಗಂಭೀರ

ಕಾಂಗ್ರೆಸ್ ಹಾಗೂ ಬಿಜೆಪಿ ಮುಖಂಡರು ಎಂಎಲ್ಸಿ ಪ್ರಸನ್ನ ಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡುತ್ತಿದ್ದಾರೆ. ಸುಹಾಸ್ ಅಂತಿಮ ದರ್ಶನಕ್ಕೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದ್ದು, ಇಡೀ ಕುಟುಂಬ ಶೋಕ ಸಾಗರದಲ್ಲಿ ಮುಳುಗಿದೆ.

ಪ್ರಸನ್ನ ಕುಮಾರ್ ಗೆ ಇಬ್ಬರು ಮಕ್ಕಳು ಸೂರಜ್ ಹಾಗೂ ಸುಹಾಸ್. ಮೂವತ್ತೊಂದು ವರ್ಷದ ಸುಹಾಸ್ ಒಂದು ವರ್ಷದ ಹಿಂದೆಯಷ್ಟೇ ಮದುವೆಯಾಗಿದ್ದರು. ಇನ್ನು ಆರ್.ಪ್ರಸನ್ನ ಕುಮಾರ್,  ಅವರು  ಕೊರೋನಾ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದ ಮಗನ ಮುಖ ನೋಡಲಾದ ಪರಿಸ್ಥಿತಿಯಲ್ಲಿದ್ದಾರೆ.

ಇದನ್ನೂ ನೋಡಿ | 

"

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗೃಹಸಚಿವರು ಏನು ಬೇಕಾದ್ರೂ ಮಾಡಬಹುದು, ಅವರ ಕಣ್ಣುಗಳನ್ನು ನೋಡಿದರೆ ನನಗೆ ಭಯವಾಗುತ್ತೆ: ಮಮತಾ ಬ್ಯಾನರ್ಜಿ
ಅಣ್ಣಾ ಹಜಾರೆ ಮತ್ತೆ ಉಪವಾಸ ಸತ್ಯಾಗ್ರಹ ಘೋಷಣೆ: ಸ್ಥಳ, ದಿನಾಂಕ ನಿಗದಿ, ಕಾರಣವೇನು ಗೊತ್ತಾ?