ಮೋದಿ, ಶಾ ಒಂದೇ ನಾಣ್ಯದ ಎರಡು ಮುಖಗಳು: ಖರ್ಗೆ

Published : Mar 08, 2020, 08:29 AM IST
ಮೋದಿ, ಶಾ ಒಂದೇ ನಾಣ್ಯದ ಎರಡು ಮುಖಗಳು: ಖರ್ಗೆ

ಸಾರಾಂಶ

ರಕ್ತವಿರುವ ತನಕ ಸಿಎಎ, ಎನ್‌ಆರ್‌ಸಿ, ಎನ್‌ಪಿಆರ್‌ ವಿರುದ್ಧ ಹೋರಾಟ| ಮೋದಿ, ಶಾ ಒಂದೇ ನಾಣ್ಯದ ಎರಡು ಮುಖಗಳು

ಚಾಮರಾಜನಗರ[ಮಾ.08]: ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್‌ ಶಾ ಒಂದೇ ನಾಣ್ಯದ ಎರಡು ಮುಖಗಳಿದ್ದ ಹಾಗೆ ಎಂದು ಟೀಕಿಸಿರುವ ಕಾಂಗ್ರೆಸ್‌ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಸುಳ್ಳು ಭರವಸೆಗಳನ್ನು ನೀಡಿ ಆಧಿಕಾರಕ್ಕೆ ಬಂದ ಮೋದಿ ಇದೀಗ ಜನರು ಮರೆಯಬೇಕು ಎಂದು ದೇಶದಲ್ಲಿ ಅಶಾಂತಿ ಸೃಷ್ಟಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ನಗರದಲ್ಲಿ ಶನಿವಾರ ಎನ್‌ಪಿಆರ್‌, ಸಿಎಎ, ಎನ್‌ಆರ್‌ಸಿ ವಿರೋಧಿಸಿ ವಿವಿಧ ಸಂಘಟನೆಗಳು ಹಮ್ಮಿಕೊಂಡಿದ್ದ ‘ಸಂವಿಧಾನ ಸಂರಕ್ಷಣಾ ಸಮಾವೇಶ’ದಲ್ಲಿ ಮಾತನಾಡಿದ ಅವರು, ಕೇಂದ್ರ ಎನ್‌ಡಿಎ ಸರ್ಕಾರದ ವಿರುದ್ಧ ಹರಿಹಾಯ್ದರು. ಅಶಾಂತಿ ಇದ್ದರೆ ಎಲ್ಲರೂ ಭರವಸೆಯನ್ನು ಮರೆತು ಹೋಗುತ್ತಾರೆ ಎಂದು ಮೋದಿ ಮತ್ತು ಅಮಿತ್‌ ಶಾ ಪುಲ್ವಾಮಾ ವಿಷಯ, ಕಾಶ್ಮೀರ ವಿಷಯ ತಂದರು. ಈಗ ಪೌರತ್ವ ವಿಚಾರವನ್ನು ತಂದು ದೇಶದಲ್ಲಿ ಅಶಾಂತಿ ಸೃಷ್ಟಿಸಿದ್ದಾರೆ ಎಂದು ಆರೋಪಿಸಿದರು.

ಪೌರತ್ವ ಕಾಯ್ದೆ ಒಂದು ಬಾರಿ ಅಲ್ಲ, ಏಳು ಬಾರಿ ತಿದ್ದುಪಡಿಯಾಗಿದೆ ಏನೂ ಗಲಾಟೆ ಹಾಗಿಲ್ಲ, ದೇಶದಲ್ಲಿರುವ ಬಡವರಿಗೆ ದೀನದಲಿತರಿಗೆ ತೊಂದರೆಯಾಗುವ ನಿಟ್ಟಿನಲ್ಲಿ ತಿದ್ದುಪಡಿ ಮಾಡಿದ್ದರಿಂದ ಜನ ವಿರೋಧಿಸುತ್ತಿದ್ದಾರೆ. ಬಡವರಿಗೆ ದೀನದಲಿತರಿಗೆ ತೊಂದರೆಯಾಗುತ್ತಿರುವುದರಿಂದ ಅದರ ವಿರುದ್ದ ಹೋರಾಟ ಮಾಡುತ್ತೇವೆ. ದಯಮಾಡಿ ಜಾತಿ, ಧರ್ಮ ಮರೆದು ಒಟ್ಟಾಗಿ ಹೋರಾಟ ಮಾಡಬೇಕಾದ ಅವಶ್ಯಕತೆ ಇದೆ ಎಂದರು.

ಬಿಜೆಪಿ ದೇಶದಲ್ಲಿ ಆಡಳಿತಕ್ಕೆ ಬಂದಾಗ ದೇಶದ ರಕ್ಷಣೆ, ದೇಶ ಪ್ರೇಮದ ಬಗ್ಗೆ ಮಾತನಾಡುತ್ತಾರೆ. ನಾವು ದೇಶದ್ರೋಹಿಗಳಾ? ಸಂವಿಧಾನ ಕೊಟ್ಟಿರುವ ಸ್ವಾತಂತ್ರ್ಯಕ್ಕಾಗಿ ಕೊನೆ ರಕ್ತದ ಹನಿ ಇರುವವರೆಗೂ ಹೋರಾಟ ಮಾಡಿ ಸ್ವಾತಂತ್ರ್ಯ ಉಳಿಸುತ್ತೇನೆ ಎಂದು ಘೋಷಿಸಿದರು.

ಸಂವಿಧಾನದಿಂದ ಅನುಕೂಲವಾಗಬೇಕಾದರೆ ಆಡಳಿತ ನಡೆಸುವವರು ಒಳ್ಳೆಯವರಿರಬೇಕು. ಇಲ್ಲದಿದ್ದರೆ ಸಂವಿಧಾನ ಎಷ್ಟೇ ಒಳ್ಳೇಯದಿದ್ದರೂ ಆಡಳಿತ ನಡೆಸುವವರು ಕೆಟ್ಟವರಿದ್ದರೆ ಸಂವಿಧಾನವು ಜನರ ದೃಷ್ಟಿಯಲ್ಲಿ ಕೆಟ್ಟದಾಗಿ ಕಾಣುತ್ತದೆ. ಮೋದಿಗೆ ಎಷ್ಟೇ ಒಳ್ಳೇಯ ಸಂವಿಧಾನ ಕೊಟ್ಟರೂ ಉತ್ತಮ ಆಡಳಿತ ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗ್ರಾಪಂ ಅಧ್ಯಕ್ಷರೂ ಮತ್ತು ಹಸಿರು ಪೆನ್ನೂ...!
Karnataka News Live: ರಾಜ್ಯದಲ್ಲಿ ಕಾಂಗ್ರೆಸ್‌ನಿಂದ ಉದ್ಯೋಗದ ನವಯುಗ!