ರಾಜಕೀಯ ಮಾಡುವ ಸ್ವಾಮೀಜಿಗಳೇ ಹೆಚ್ಚಾಗಿದ್ದಾರೆ: ಶಾಸಕ ಹಿಟ್ನಾಳ

Published : Jul 04, 2024, 04:23 AM ISTUpdated : Jul 04, 2024, 10:11 AM IST
ರಾಜಕೀಯ ಮಾಡುವ ಸ್ವಾಮೀಜಿಗಳೇ ಹೆಚ್ಚಾಗಿದ್ದಾರೆ: ಶಾಸಕ ಹಿಟ್ನಾಳ

ಸಾರಾಂಶ

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದು, ಅವರೇ ಆ ಸ್ಥಾನದಲ್ಲಿ ಮುಂದುವರಿಯುತ್ತಾರೆ. ಹೀಗಾಗಿ ಈ ಕುರಿತು ಚರ್ಚೆ ಅನಗತ್ಯ. ಈಗಾಗಲೇ ಹೈಕಮಾಂಡ್ ಸಹ ಈ ಕುರಿತು ಪ್ರತಿಕ್ರಿಯೆ ನೀಡಿದೆ. ಅಷ್ಟಕ್ಕೂ ಮುಖ್ಯಮಂತ್ರಿ ಬದಲಾವಣೆ ಕುರಿತು ಪಕ್ಷದ ವರಿಷ್ಠರು ಮಾತನಾಡುತ್ತಾರೆ: ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ 

ಕೊಪ್ಪಳ(ಜು.04): ಡಿ.ಕೆ.ಶಿವಕುಮಾರ್‌ ಅವರು ಮುಖ್ಯಮಂತ್ರಿ ಆಗಬೇಕು ಎಂದು ಒಬ್ಬರು ಒಕ್ಕಲಿಗ ಸ್ವಾಮೀಜಿ ಹೇಳಿರಬಹುದು. ಆದರೆ ಈ ರೀತಿ ಮಾತನಾಡುವ ಬಹಳಷ್ಟು ಸ್ವಾಮೀಜಿಗಳು ಇದ್ದಾರೆ ಎಂದು ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ ಹೇಳಿದರು.

ಡಿ.ಕೆ.ಶಿವಕುಮಾರ್‌ ಮುಖ್ಯಮಂತ್ರಿ ಆಗಬೇಕೆಂಬ ಸ್ವಾಮೀಜಿಯೊಬ್ಬರ ಹೇಳಿಕೆ ಕುರಿತು ಬುಧವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಅವರು, ಹೀಗೆ ಹೇಳುವ ಅನೇಕ ಸ್ವಾಮೀಜಿಗಳು ರಾಜ್ಯದಲ್ಲಿದ್ದಾರೆ. ರಾಜಕೀಯ ಮಾಡುವ ಸ್ವಾಮೀಜಿಗಳೇ ಹೆಚ್ಚಾಗಿದ್ದಾರೆ. ರಾಜಕೀಯ ಮತ್ತು ಧರ್ಮದ ನಡುವೆ ಅಂತರ ಇದ್ದರೆ ಒಳ್ಳೆಯದು ಎಂದರು.

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ಸ್ಥಗಿತಗೊಳ್ಳಲ್ಲ: ಸಚಿವ ಜಮೀರ್‌ ಅಹ್ಮದ್‌

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದು, ಅವರೇ ಆ ಸ್ಥಾನದಲ್ಲಿ ಮುಂದುವರಿಯುತ್ತಾರೆ. ಹೀಗಾಗಿ ಈ ಕುರಿತು ಚರ್ಚೆ ಅನಗತ್ಯ. ಈಗಾಗಲೇ ಹೈಕಮಾಂಡ್ ಸಹ ಈ ಕುರಿತು ಪ್ರತಿಕ್ರಿಯೆ ನೀಡಿದೆ. ಅಷ್ಟಕ್ಕೂ ಮುಖ್ಯಮಂತ್ರಿ ಬದಲಾವಣೆ ಕುರಿತು ಪಕ್ಷದ ವರಿಷ್ಠರು ಮಾತನಾಡುತ್ತಾರೆ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
ಹಿಂದೂಗಳು ಒಂದಾಗದಿದ್ರೆ ದೇಶ, ಸಂವಿಧಾನ ಉಳಿಯಲ್ಲ: ಶಾಸಕ ಬಸನಗೌಡ ಪಾಟೀಲ ಯತ್ನಾಳ