ಧಮ್‌ ಇದ್ದರೆ ಮುಂದೇ ಬನ್ನಿ, ಖುರ್ಚಿ ಬಿಟ್ಟುಕೊಡುವೆ: ಸಂಸದ ಅನಂತಕುಮಾರ ಹೆಗಡೆ

Published : Mar 06, 2024, 08:03 AM IST
ಧಮ್‌ ಇದ್ದರೆ ಮುಂದೇ ಬನ್ನಿ, ಖುರ್ಚಿ ಬಿಟ್ಟುಕೊಡುವೆ: ಸಂಸದ ಅನಂತಕುಮಾರ ಹೆಗಡೆ

ಸಾರಾಂಶ

ಚುನಾವಣೆಗೆ ಸ್ಪರ್ಧಿಸಲು ಯಾರಾದರೂ ಸಶಕ್ತ ಯುವಕರು ಮುಂದೆ ಬಂದರೆ ಇಂದೇ ಖುರ್ಚಿ ಮುಂದೆ ಇಟ್ಟು ಹೋಗುತ್ತೇನೆ. ಯಾರಿಗಾದರೂ ಆ ದಮ್ ಇದ್ದರೆ ಮುಂದೆ ಬನ್ನಿ ಎಂದು ಸಂಸದ ಅನಂತಕುಮಾರ ಹೆಗಡೆ ಹೇಳಿದರು.   

ಭಟ್ಕಳ (ಮಾ.06): ಚುನಾವಣೆಗೆ ಸ್ಪರ್ಧಿಸಲು ಯಾರಾದರೂ ಸಶಕ್ತ ಯುವಕರು ಮುಂದೆ ಬಂದರೆ ಇಂದೇ ಖುರ್ಚಿ ಮುಂದೆ ಇಟ್ಟು ಹೋಗುತ್ತೇನೆ. ಯಾರಿಗಾದರೂ ಆ ದಮ್ ಇದ್ದರೆ ಮುಂದೆ ಬನ್ನಿ ಎಂದು ಸಂಸದ ಅನಂತಕುಮಾರ ಹೆಗಡೆ ಹೇಳಿದರು. ಬೆಳಕೆಯ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಕಿತ್ತೂರು-ಖಾನಾಪುರ ಎಲ್ಲಿದೆ ಎಂದು ನಕಾಶೆಯಲ್ಲಿ ಹುಡುಕಲು ಗೊತ್ತಿಲ್ಲದವರು ಸಹ ರಾಜಕಾರಣದ ಬಗ್ಗೆ ಏನೇನೋ ಮಾತನಾಡುತ್ತಿದ್ದಾರೆ. ಚುನಾವಣೆಯನ್ನು ಆಷಾಢಭೂತಿತನದಿಂದ ಗೆಲ್ಲಲಾಗದು. ಪ್ರಜಾಪ್ರಭುತ್ವದಲ್ಲಿ ಚುನಾವಣೆ ಒಂದು ಯುದ್ಧ ಇದ್ದಂತೆ. ಚುನಾವಣೆಯಲ್ಲಿ ಒಂದೊಂದು ಮತಕ್ಕೂ ಪ್ರಾಮುಖ್ಯತೆ ಇದೆ. 

ಸೋಲಲು ಒಂದೇ ಮತ ಸಾಕು. ನಾಲ್ಕು ಮತ ಹಾಕುವ ಸಾಮರ್ಥ್ಯ ಇಲ್ಲ ಎಂದು ಯಾವುದೇ ಕಾರ್ಯಕರ್ತರನ್ನು, ಮುಖಂಡರನ್ನು ಹೀಯಾಳಿಸಬೇಡಿ. ಅವರವರ ಸಾಮರ್ಥ್ಯ ಅವರವರಲ್ಲಿರುತ್ತದೆ. ಉಡಾಫೆಯ ಮಾತುಗಳೇ ನಮ್ಮನ್ನು ಸೋಲಿಸಿವೆ ಎಂದು ಎಚ್ಚರಿಸಿದರು. ಸಣ್ಣ ಮನಸ್ಸಿನ, ತುಂಡಾದ ಮನಸ್ಸಿನ ವ್ಯಕ್ತಿಗಳು ದೊಡ್ಡವರಾಗಲು, ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಿಲ್ಲ. ಮುಂದಿನ ವಿಧಾನಸಭೆ ಚುನಾವಣೆ ಬಿಜೆಪಿಯದ್ದಾಗಬೇಕು. ನಾನು ರಾಜಕೀಯದಲ್ಲಿ ಶಾಶ್ವತ ಅಲ್ಲ.  ನಾನು ದೇವಸ್ಥಾನದಲ್ಲೇ ಹೇಳುತ್ತೇನೆ. ನಾನು ರಾಜಕಾರಣಿಯಾಗಿ ಹುಟ್ಟಿಯೂ ಇಲ್ಲ, ರಾಜಕಾರಣಿಯಾಗಿ ಸಾಯುವುದಿಲ್ಲ ಎಂದು ಖಡಕ್ ಆಗಿ ಹೇಳಿದ ಅನಂತಕುಮಾರ ಹೆಗಡೆ, ರಾಜಕೀಯ ಬೇಡ, ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದೆ. 

ದಿನಬೆಳಗಾದರೆ ಪ್ರಧಾನಿ ಮೋದಿ ಬಗ್ಗೆ ಸಿದ್ದರಾಮಯ್ಯ ಟೀಕೆ ಏಕೆ?: ಎಚ್‌.ಡಿ.ದೇವೇಗೌಡ

ಆದರೆ ಭಟ್ಕಳ ಸೇರಿದಂತೆ ಎಲ್ಲ ಕಡೆಗಳಿಂದಲೂ ರಾಜಕೀಯದಲ್ಲಿ ಮುಂದುವರಿಯಬೇಕು ಎನ್ನುವ ಒತ್ತಡ ಬಂದಿದ್ದರಿಂದ ಮತ್ತೆ ಸಕ್ರಿಯವಾಗಬೇಕಾಯಿತು ಎಂದು ತಿಳಿಸಿದರು. ಬಿಜೆಪಿಯಿಂದ ಮಾತ್ರ ದೇಶದ ಭದ್ರತೆ, ಸುಭಿಕ್ಷೆ, ಅಭಿವೃದ್ಧಿ ಎಲ್ಲವೂ ಸಾಧ್ಯ. ಬಿಜೆಪಿ ಜನತೆಗೆ ಕೊಟ್ಟ ಭರವಸೆ ಈಡೇರಿಸಿದೆ. ಹೀಗಾಗಿ ದೇಶದ ಅನಿವಾರ್ಯತೆ ಬಿಜೆಪಿಯಾಗಿದೆ. ದೇಶ ಮತ್ತಷ್ಟು ಅಭಿವೃದ್ಧಿ ಆಗಲು ಬಿಜೆಪಿ ಬೇಕೇಬೇಕು. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿಸಿ ಎಂದು ಹೇಳಿದರು. ಸಭೆಯಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಎನ್‌.ಎಸ್. ಹೆಗಡೆ, ಮಾಜಿ ಶಾಸಕ ಸುನೀಲ ನಾಯ್ಕ, ಮಂಡಳಾಧ್ಯಕ್ಷ ಲಕ್ಷ್ಮೀನಾರಾಯಣ ನಾಯ್ಕ, ನಿಕಟಪೂರ್ವ ಅಧ್ಯಕ್ಷ ಸುಬ್ರಾಯ ದೇವಡಿಗ ಮುಂತಾದವರಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
'ಏಯ್, ಹಾಗೆಲ್ಲಾ ನಾಟಿ ಕೋಳಿ ಬಿಡಬಾರದು, ಏನೂ ಆಗೊಲ್ಲ ತಿನ್ನಬೇಕು': ಆರ್. ಅಶೋಕ್‌ಗೆ ಸಿದ್ದರಾಮಯ್ಯ ಕಿವಿಮಾತು!