ಸಂಸದರ ವರ್ತನೆ ಹೇಗಿರಬೇಕೆಂದು ಪಕ್ಷಗಳ ಪ್ರಣಾಳಿಕೆಯಲ್ಲಿ ಇರಲಿ

Kannadaprabha News   | Asianet News
Published : Aug 25, 2021, 09:04 AM IST
ಸಂಸದರ ವರ್ತನೆ ಹೇಗಿರಬೇಕೆಂದು ಪಕ್ಷಗಳ ಪ್ರಣಾಳಿಕೆಯಲ್ಲಿ ಇರಲಿ

ಸಾರಾಂಶ

ಸಂಸತ್‌ನಲ್ಲಿ ಸದಸ್ಯರ ವರ್ತನೆ ಹೇಗಿರಬೇಕು ಎನ್ನುವ ಬಗ್ಗೆ ರಾಜಕೀಯ ಪಕ್ಷಗಳು ನೀತಿ ಸಂಹಿತೆ ರೂಪಿಸಲಿ ನೀತಿ ಸಂಹಿತೆ ರೂಪಿಸಿ ತಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿಕೊಳ್ಳಬೇಕು  ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಸಲಹೆ

 ಬೆಂಗಳೂರು (ಆ.25):  ಸಂಸತ್‌ನಲ್ಲಿ ಸದಸ್ಯರ ವರ್ತನೆ ಹೇಗಿರಬೇಕು ಎನ್ನುವ ಬಗ್ಗೆ ರಾಜಕೀಯ ಪಕ್ಷಗಳು ನೀತಿ ಸಂಹಿತೆ ರೂಪಿಸಿ ತಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿಕೊಳ್ಳಬೇಕು ಎಂದು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಸಲಹೆ ನೀಡಿದ್ದಾರೆ.

ರಾಜಭವನದಲ್ಲಿ ಮಂಗಳವಾರ ಪತ್ರಕರ್ತರ ಜತೆ ಔಪಚಾರಿಕ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯಸಭೆಯಲ್ಲಿ ಇತ್ತೀಚೆಗೆ ನಡೆದ ಕಲಾಪದಲ್ಲಿ ಸದಸ್ಯರ ನಡವಳಿಕೆ ತಲೆತಗ್ಗಿಸುವಂತಹದಾಗಿದೆ. ಘಟನೆಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳಲು ಚರ್ಚೆ ನಡೆಸಲಾಗುತ್ತಿದೆ. ದುರ್ವರ್ತನೆ ತೋರಿದವರ ವಿರುದ್ಧ ಕ್ರಮಕ್ಕೆ ಹಲವು ಮಂದಿ ಮನವಿ ಮಾಡಿದ್ದಾರೆ. ಹೀಗಾಗಿ ಮಾಜಿ ಸಭಾಧ್ಯಕ್ಷರು ಸೇರಿದಂತೆ ಇತರೆ ನಿವೃತ್ತ ಹಿರಿಯ ಅಧಿಕಾರಿಗಳ ಜತೆ ಚರ್ಚೆ ನಡೆಸಲಾಗುತ್ತಿದೆ. ಶೀಘ್ರದಲ್ಲಿಯೇ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.

ಅಧಿವೇಶನಕ್ಕೆ ತಡೆ, ಅನುಚಿತ ವರ್ತನೆಯಿಂದ ನೋವಾಗಿದೆ; ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು!

ಸಂಸದರ ಕಾರ್ಯನಿರ್ವಹಣೆ ಕುರಿತು ರಾಜಕೀಯ ಪಕ್ಷಗಳು ತಿಳಿ ಹೇಳಬೇಕು. ಅಧಿವೇಶನ ಸುಗಮವಾಗಿ ನಡೆಯಲು ಮತ್ತು ಸಂಸದರ ಪಾಲ್ಗೊಳ್ಳುವಿಕೆ ಕುರಿತು ರಾಜಕೀಯ ಪಕ್ಷಗಳು ನೀತಿ ಸಂಹಿತೆ ರೂಪಿಸಬೇಕು. ಚುನಾವಣಾ ಪ್ರಣಾಳಿಕೆಯಲ್ಲಿ ಅದನ್ನು ಘೋಷಿಸಿಕೊಳ್ಳಬೇಕು. ಮತದಾರರು ಯಾವ ಪಕ್ಷಗಳ ಸಂಸದರ ನೀತಿಸಂಹಿತೆ ಉತ್ತಮ ಎನ್ನುವುದನ್ನು ತೀರ್ಮಾನಿಸಿ ಸಂಸದರನ್ನು ಆಯ್ಕೆ ಮಾಡುವ ಅವಕಾಶ ಇರಬೇಕು. ಇದರಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಮತ್ತಷ್ಟುಬಲಗೊಳ್ಳುತ್ತದೆ ಎಂದು ಅಭಿಪ್ರಾಯಪಟ್ಟರು.

ಸಂಸದರ ಪಾಲ್ಗೊಳ್ಳುವಿಕೆ ಸರಿಯಾಗಿದ್ದರೆ ಅಧಿವೇಶನ ಕಲಾಪಗಳನ್ನು 100 ದಿನ ನಡೆಸಬಹುದು. ಕೆಲವು ಸಮಯದಲ್ಲಿ ಕೆಲವೇ ನಿಮಿಷದಲ್ಲಿ ಮಸೂದೆ ಪಾಸ್‌ ಆಗುವುದು ಉತ್ತಮ ಸಂಪ್ರದಾಯವಲ್ಲ. ಮಸೂದೆ ಮಂಡಿಸಿದಾಗ, ಪ್ರತಿಪಕ್ಷದ ಸದಸ್ಯರು ಮಸೂದೆ ಬಗ್ಗೆ ಚರ್ಚಿಸಬೇಕು. ಯಾರೂ ಮಾತನಾಡಲು ಇಚ್ಛಿಸದಿದ್ದರೆ ಏನು ಮಾಡಲಾಗುವುದಿಲ್ಲ. ಹಲವು ವೇಳೆಯಲ್ಲಿ ಪ್ರಶ್ನೋತ್ತರ, ಶೂನ್ಯವೇಳೆ, ಗಮನ ಸೆಳೆಯುವ ಸೂಚನೆ ಸಂದರ್ಭದಲ್ಲಿ ಅವಕಾಶ ನೀಡಿದರೂ ಗದ್ದಲ ಮಾಡಿದರೆ ಏನು ಮಾಡಲಾಗುವುದಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಪುಟಿನ್‌ಗೆ ಇಲ್ಲೇ ಎಲೆಕ್ಷನ್‌ ನಿಲ್ಲೋಕೆ ಟಿಕೆಟ್‌ ಕೊಡ್ತಾರೆ ಅಂದ್ಕೊಂಡಿದ್ದೆ.. ಸಂತೋಷ್‌ ಲಾಡ್‌ ಲೇವಡಿ
ನಾನು ಲಂಚ ಪಡೆದಿದ್ದು ಸಾಬೀತಾದರೆ ರಾಜೀನಾಮೆ: ಗೃಹ ಸಚಿವ ಪರಮೇಶ್ವರ್‌