
ಬಳ್ಳಾರಿ (ಜೂ.1) : ಅತ್ತಿ-ಸೊಸಿ ನಡುವೆ ಜಗಳ ಹಚ್ಚಲು ಉಚಿತ ಘೋಷಣೆ ಮಾಡಿದ್ದಾರೆ. ನಮ್ಮ ಜನರ ಸೋಮಾರಿತನಕ್ಕೆ ಸಾಕ್ಷಿ ಈ ಗ್ಯಾರಂಟಿ ಯೋಜನೆ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಸಂಸದ ದೇವೇಂದ್ರಪ್ಪ
ಮೋದಿ ಬಂದ್ರೂ ಬಿಜೆಪಿ ಗೆಲ್ಲಲಿಲ್ಲ ಯಾಕೆ ಎನ್ನುವ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈ ಗ್ಯಾರಂಟಿ ಹೊಡೆತಕ್ಕ ಯಾರ್ ತಡಿತಾರ್ ರೀ..? ಅತ್ತಿ ನನಗೆ ಬೇಕು ಅಂತಾಳ, ಸೊಸಿ ನನಗ ಅಂತಾಳ. ಬಿಜೆಪಿ ಸೋಲಿನ ಕಾಂಗ್ರೆಸ್ ಗ್ಯಾರಂಟಿ ಕಾರಣ ಎಂದು ಪರೋಕ್ಷವಾಗಿ ಹೇಳಿದರು.
ಫ್ರೀ ಸ್ಕೀಂ ಘೋಷಿಸಿ ಸರ್ಕಾರ ಅತ್ತಿ ಸೊಸಿ ನಡುವೆ ಜಗಳ ತಂದಿಟ್ಟಾರ. ನನ್ನ ಹೆಸರಿನ ಅಕೌಂಟ್ಗೆ ಹಾಕ್ತಾರೆ ಅಂತಾ ಅತ್ತಿ, ಇಲ್ಲಾ ನನ್ನ ಹೆಸರಿಗೇ ಹಾಕೋದು ಅಂತ ಸೊಸಿ. ನನಗೆ ಬಸ್ ಫ್ರೀ ಅಂತಾ ಅತ್ತಿ ನನಗೂ ಬಸ್ ಪ್ರೀ ಅಂತಾ ಸೊಸಿ. ಇಂಥ ಗ್ಯಾರಂಟಿ ಹೊಡತದಿಂದ ನಾವು ಪ್ರಚಾರ ಮಾಡಿನೂ ಸೋತೆವು ಎಂದರು ಅತ್ತೆ ಸೊಸಿ ಫ್ರೀ ಸಿಕ್ತದೆ ಅನ್ನೋ ಕಾರಣಕ್ಕೆ ಕಾಂಗ್ರೆಸ್ಗೆ ಮತ ಹಾಕಿದ್ದಾರೆ. ನಮ್ಮ ಜನರು ಸೋಮಾರಿಗಳು ಬಿಟ್ಟಿ ಸಿಗುತ್ತಂದ್ರ ವೋಟು ಹಾಕ್ತಾರ ಅತ್ತೆ ಸೊಸೆ ಜಗಳ ಹಚ್ಚೋದಕ್ಕೆ, ಸೋಮಾರಿತನಕ್ಕೆ, ಬೆಂಕಿ ಹಚ್ಚೋದಕ್ಕೆ ಈ ಎಲ್ಲಾ ಗ್ಯಾರಂಟಿ ಸ್ಕೀಂ ಮಾಡಿದ್ದಾರೆ ಎನ್ನಬಹುದು
ಪಾಂಡವರ ಇಂದ್ರಪ್ರಸ್ಥ ನೋಡಿ ಕೌರವರು ಉರಿದುಕೊಂಡಿದ್ರು, ಈಗ ಸಂಸತ್ ನೋಡಿ ಕಾಂಗ್ರೆಸ್ಗೆ ಉರಿ: ಸಿಟಿ ರವಿ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.