ನಮ್ಮ ಸರ್ಕಾರದ ದೌರ್ಭಾಗ್ಯವೇ ಇಷ್ಟು, ಏನ್ಮಾಡೋದು? ಸಿಎಂ ಪುತ್ರನ ಬೇಸರದ ಮಾತು

By Suvarna NewsFirst Published Jan 17, 2021, 5:57 PM IST
Highlights

ಸಂಪುಟ ವಿಸ್ತರಣೆ ಬೆನ್ನಲ್ಲೇ ರಾಜ್ಯ ಬಿಜೆಪಿಯಲ್ಲಿ ಅಸಮಧಾನ ಸ್ಫೋಟಗೊಂಡಿದ್ದು, ಈ ಬಗ್ಗೆ ಮುಖ್ಯಮಂತ್ರಿ ಪುತ್ರ ಬೇಸರ ವ್ಯಕ್ತಪಡಿಸಿದ್ದಾರೆ.

ದಾವಣಗೆರೆ, (ಜ.17): ನಮ್ಮ ಸರ್ಕಾರದ ದೌರ್ಭಾಗ್ಯವೇ ಇಷ್ಟು ಏನ್ ಮಾಡೋದು ಎಂದು ಅಸಮಾಧಾನಿತ ಬಿಜೆಪಿ ಶಾಸಕರ ನಡೆಗೆ ಸಂಸದ ಬಿ.ವೈ.ರಾಘವೇಂದ್ರ ಬೇಸರ ವ್ಯಕ್ತಪಡಿಸಿದರು.

ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಸೂರಗೊಂಡನಕೊಪ್ಪದಲ್ಲಿ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ, ನಮ್ಮ ಶಾಸಕರಿಗೆ ಸಚಿವರಾಗಬೇಕು ಎನ್ನುವ ಆಸೆ ಇರುತ್ತದೆ. ಆದ್ರೆ ನಮ್ಮ ಪಕ್ಷಕ್ಕೆ ಪೂರ್ಣ ಬಹುಮತ ಬಂದಿರಲಿಲ್ಲ. ಹೀಗಾಗಿ, ಬೇರೆ ಪಕ್ಷದವರು ರಾಜೀನಾಮೆ ನೀಡಿ ಬಂದಿದ್ದರು. ಅವರು ನಮ್ಮ ಪಕ್ಷಕ್ಕೆ ಬಂದಿದ್ದರಿಂದ ಅಧಿಕಾರಕ್ಕೆ ಬಂದೆವು. ಈಗ ಮಾತು ಕೊಟ್ಟಂತೆ ನಡೆದುಕೊಳ್ಳುವುದು ಅನಿವಾರ್ಯ ಎಂದು ಹೇಳಿದರು.

ಸಿಡಿದೆದ್ದ ರೇಣುಕಾಚಾರ್ಯ: ಶಕ್ತಿ ಪ್ರದರ್ಶನಕ್ಕೆ ಮುಂದಾದ ಅತೃಪ್ತ ಶಾಸಕರು

ನಮ್ಮ ಮನೆಯ ಮಕ್ಕಳು ಹೊಂದಿಕೊಂಡು ಹೋಗಬೇಕಿದೆ. ನಾನು ರೇಣುಕಾಚಾರ್ಯರನ್ನು ಸಮಧಾನಪಡಿಸಲು ಬಂದಿಲ್ಲ. ಸಹಜವಾಗಿ ಹೊನ್ನಾಳಿಗೆ ಬಂದಿದ್ದರಿಂದ ರೇಣುಕಣ್ಣನ ಮನೆಗೆ ಬಂದು ಕಾಫಿ ಕುಡಿದು ಹೋಗುತ್ತೇನೆ. ಅವರು ತಮ್ಮ ನೋವು ವ್ಯಕ್ತಪಡಿಸಿದ್ದಾರೆ. ಎಲ್ಲ ಸರಿಯಾಗುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ಭೇಟಿಯಲ್ಲಿ ಯಾವುದೇ ರಾಜಕೀಯ ಚರ್ಚೆಯಾಗಿಲ್ಲ. ಜೊತೆಗೆ, ರೇಣುಕಾಚಾರ್ಯ ಯಾವತ್ತೂ ಪಕ್ಷ ಹಾಗೂ ಯಡಿಯೂರಪ್ಪನವರ ಪರವಾಗಿ ಗೌರವ ಇಟ್ಟುಕೊಂಡ ಯುವನಾಯಕರು ಎಂದರು.

click me!