
ದಾವಣಗೆರೆ, (ಜ.17): ನಮ್ಮ ಸರ್ಕಾರದ ದೌರ್ಭಾಗ್ಯವೇ ಇಷ್ಟು ಏನ್ ಮಾಡೋದು ಎಂದು ಅಸಮಾಧಾನಿತ ಬಿಜೆಪಿ ಶಾಸಕರ ನಡೆಗೆ ಸಂಸದ ಬಿ.ವೈ.ರಾಘವೇಂದ್ರ ಬೇಸರ ವ್ಯಕ್ತಪಡಿಸಿದರು.
ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಸೂರಗೊಂಡನಕೊಪ್ಪದಲ್ಲಿ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ, ನಮ್ಮ ಶಾಸಕರಿಗೆ ಸಚಿವರಾಗಬೇಕು ಎನ್ನುವ ಆಸೆ ಇರುತ್ತದೆ. ಆದ್ರೆ ನಮ್ಮ ಪಕ್ಷಕ್ಕೆ ಪೂರ್ಣ ಬಹುಮತ ಬಂದಿರಲಿಲ್ಲ. ಹೀಗಾಗಿ, ಬೇರೆ ಪಕ್ಷದವರು ರಾಜೀನಾಮೆ ನೀಡಿ ಬಂದಿದ್ದರು. ಅವರು ನಮ್ಮ ಪಕ್ಷಕ್ಕೆ ಬಂದಿದ್ದರಿಂದ ಅಧಿಕಾರಕ್ಕೆ ಬಂದೆವು. ಈಗ ಮಾತು ಕೊಟ್ಟಂತೆ ನಡೆದುಕೊಳ್ಳುವುದು ಅನಿವಾರ್ಯ ಎಂದು ಹೇಳಿದರು.
ಸಿಡಿದೆದ್ದ ರೇಣುಕಾಚಾರ್ಯ: ಶಕ್ತಿ ಪ್ರದರ್ಶನಕ್ಕೆ ಮುಂದಾದ ಅತೃಪ್ತ ಶಾಸಕರು
ನಮ್ಮ ಮನೆಯ ಮಕ್ಕಳು ಹೊಂದಿಕೊಂಡು ಹೋಗಬೇಕಿದೆ. ನಾನು ರೇಣುಕಾಚಾರ್ಯರನ್ನು ಸಮಧಾನಪಡಿಸಲು ಬಂದಿಲ್ಲ. ಸಹಜವಾಗಿ ಹೊನ್ನಾಳಿಗೆ ಬಂದಿದ್ದರಿಂದ ರೇಣುಕಣ್ಣನ ಮನೆಗೆ ಬಂದು ಕಾಫಿ ಕುಡಿದು ಹೋಗುತ್ತೇನೆ. ಅವರು ತಮ್ಮ ನೋವು ವ್ಯಕ್ತಪಡಿಸಿದ್ದಾರೆ. ಎಲ್ಲ ಸರಿಯಾಗುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈ ಭೇಟಿಯಲ್ಲಿ ಯಾವುದೇ ರಾಜಕೀಯ ಚರ್ಚೆಯಾಗಿಲ್ಲ. ಜೊತೆಗೆ, ರೇಣುಕಾಚಾರ್ಯ ಯಾವತ್ತೂ ಪಕ್ಷ ಹಾಗೂ ಯಡಿಯೂರಪ್ಪನವರ ಪರವಾಗಿ ಗೌರವ ಇಟ್ಟುಕೊಂಡ ಯುವನಾಯಕರು ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.