
ಚಿಕ್ಕಬಳ್ಳಾಪುರ[ಜ. 25] ಪ್ರಿಯಾಂಕಾ ರಾಜಕೀಯ ಪ್ರವೇಶದಿಂದ ರಾಹುಲ್ ಗಾಂಧಿಗೆ ಶಕ್ತಿ ಬಂದಿದೆ. ಬಿಜೆಪಿ ಯವರಿಗೆ ಒಬ್ಬರೇ ಮೋದಿ ಆದರೆ ಕಾಂಗ್ರೆಸ್ ಗೆ ರಾಹುಲ್ ಗಾಂಧಿ ಜೊತೆ ಪ್ರಿಯಾಂಕಾ ಇದ್ದಾರೆ ಎಂದು ಸಂಸದ ವೀರಪ್ಪ ಮೊಯ್ಲಿ ಬಣ್ಣಿಸಿದ್ದಾರೆ.
ಚಿಕ್ಕಬಳ್ಳಾಪುರ ನಗರಸಭೆಯಲ್ಲಿ ಮಾತನಾಡಿದ ಮೊಯ್ಲಿ, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಬಚ್ಚೇಗೌಡ ಸ್ಪರ್ಧೆ ವಿಚಾರದ ಬಗ್ಗೆಯೂ ಮಾತನಾಡಿದ್ದಾರೆ. ಹತ್ತು ವರ್ಷ ದಿಂದ ಸಂಸತ್ ಸದಸ್ಯನಾಗಿ ಸಾಕಷ್ಟು ಕೆಲಸ ಮಾಡಿದ್ದೇನೆ. ಮಂತ್ರಿಯಾಗಿದ್ದಾಗ ಬಚ್ಚೇಗೌಡರು ಕ್ಷೇತ್ರಕ್ಕೆ ಕೊಟ್ಟ ಕೊಡುಗೆ ಏನು..? ನನ್ನ ಕೊಡುಗೆ ಏನು? ಇದೆಲ್ಲವನ್ನು ಜನ ಚುನಾವಣೆಯಲ್ಲಿ ತೀರ್ಮಾನಿಸಲಿದ್ದಾರೆ ಎಂದು ಮೊಯ್ಲಿ ಹೇಳಿದರು.
ಕಾಂಗ್ರೆಸ್ಸನ್ನು ಮುಗಿಸಲೆಂದೇ ಸಿದ್ದರಾಮಯ್ಯ ಬಂದಿದ್ದಾರೆಂದ ಹಿರಿಯ ಕೈ ನಾಯಕ
ಹಲವು ಸಮೀಕ್ಷೆ ಪ್ರಕಾರ ದಿನದಿಂದ ದಿನಕ್ಕೆ ಬಿಜೆಪಿ ವೀಕ್ ಆಗುತ್ತಿದೆ. ಮುಂದೆ ಸರ್ಕಾರ ರಚಿಸುವ ಸಾಮರ್ಥ್ಯ ಬಿಜೆಪಿಗೆ ಇಲ್ಲ. ದಿನ ಕಳೆದಂತೆ ಬಿಜೆಪಿ ಪಕ್ಷ ಮತ್ತಷ್ಟು ವೀಕ್ ಆಗುತ್ತೆ. ಪ್ರಿಯಾಂಕಾ ಆಗಮನದಿಂದ ಬಿಜೆಪಿ ಮತ್ತಷ್ಟು ಶಕ್ತಿ ಕಳೆದುಕೊಂಡಿದೆ. ರಾಜ್ಯದಲ್ಲಿ ಯಡಿಯೂರಪ್ಪ 20 ಸೀಟು ಅಲ್ಲ 5 ಸೀಟ್ ಗೆದ್ರೆ ಹೆಚ್ಚು ಎಂದು ವ್ಯಂಗ್ಯವಾಡಿದರು.
ಜನಾರ್ದನ ಪೂಜಾರಿ ಯವರು ಬಹಳ ಹಿರಿಯ ನಾಯಕರು. ಹೇಳಿಕೆ ಕೊಡುವಾಗ ಜಾಗೃತೆ ವಹಿಸಿದರೆ ಒಳ್ಳೆಯದು. ಪಕ್ಷದ ಹಿತದೃಷ್ಟಿಯಿಂದ ನಮ್ಮ ನಾಯಕರ ಮೇಲೆ ಟೀಕೆ ಸರಿ ಅಲ್ಲ. ಇದು ಕಾಂಗ್ರೆಸ್ ಪಕ್ಷಕ್ಕೆ ಹಿತ ತರುವುದಿಲ್ಲ ಎಂದು ಜನಾರ್ದನ ಪೂಜಾರಿ ಅವರಿಗೆ ಸಲಹೆ ನೀಡಿದರು. ಸಿದ್ದರಾಮಯ್ಯ ಕಾಂಗ್ರೆಸ್ಗೆ ಬಂದಿರುವುದೇ ಕಾಂಗ್ರೆಸ್ ಮುಗಿಸಲು ಎಂದು ಜನಾರ್ದನ ಪೂಜಾರಿ ಹೇಳಿಕೆ ನೀಡಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.