'ವೆದರ್ ಚೆನ್ನಾಗಿದೆ ನಡೆದುಕೊಂಡೇ ಹೋಗ್ಲಿ' ಮುಡಾ ಹಗರಣ ವಿರುದ್ಧ ಬಿಜೆಪಿ ಮೈಸೂರು ಪಾದಯಾತ್ರೆಗೆ ಪ್ರಿಯಾಂಕ್ ಖರ್ಗೆ ಲೇವಡಿ

Published : Jul 25, 2024, 01:30 PM ISTUpdated : Jul 25, 2024, 02:18 PM IST
'ವೆದರ್ ಚೆನ್ನಾಗಿದೆ ನಡೆದುಕೊಂಡೇ ಹೋಗ್ಲಿ' ಮುಡಾ ಹಗರಣ ವಿರುದ್ಧ ಬಿಜೆಪಿ ಮೈಸೂರು ಪಾದಯಾತ್ರೆಗೆ ಪ್ರಿಯಾಂಕ್ ಖರ್ಗೆ ಲೇವಡಿ

ಸಾರಾಂಶ

ಬಿಜೆಪಿಯವರು ಸಾರ್ವಜನಿಕರಿಗೆ ದಾಖಲೆ ಕೊಟ್ಟು ಮಾತಾಡಲಿ. ಸುಖಾಸುಮ್ಮನೆ ಆರೋಪ ಮಾಡುವುದು ಸರಿಯಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ವಿಧಾನಸೌಧ (ಜು.25): ಬಿಜೆಪಿಯವರು ಸಾರ್ವಜನಿಕರಿಗೆ ದಾಖಲೆ ಕೊಟ್ಟು ಮಾತಾಡಲಿ. ಸುಖಾಸುಮ್ಮನೆ ಆರೋಪ ಮಾಡುವುದು ಸರಿಯಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ಮುಡಾ ಹಗರಣ ವಿರುದ್ಧ ಬಿಜೆಪಿ ನಾಯಕರು ಮೈಸೂರಿಗೆ ಪಾದಯಾತ್ರೆ ಹೊರಟಿರುವ ವಿಚಾರ ಸಂಬಂಧ ಇಂದು ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಯೊಂದಿಗೆ ಮಾತನಾಡಿದ ಸಚಿವರು, ಬಿಜೆಪಿಯವರು ಮೈಸೂರಿಗೆ ಹೋಗಲಿ ಯಾರು ಬೇಡ ಎಂದರು. ಬಹಳ ಸಂತೋಷ್ ಹೋಗಲಿ, ವೆದರ್ ತುಂಬಾ ಚೆನ್ನಾಗಿದೆ. ನಡೆದುಕೊಂಡೇ ಹೋಗಲಿ ಎಂದು ಟಾಂಗ್ ನೀಡಿದರು.

ಸಿಎಂ ಸಿದ್ದರಾಮಯ್ಯರ ಒಂದು ಕೂದಲೂ ಕಿತ್ಕೊಳ್ಳೋಕಾಗೊಲ್ಲ; ಕೇಂದ್ರದ ನಾಯಕರಿಗೆ ಪ್ರದೀಪ್ ಈಶ್ವರ್ ಸವಾಲು!

ದೇವರಾಜ್ ಟ್ರಕ್ ಟರ್ಮಿನಲ್, ಅತಿವೃಷ್ಟಿ, ಇಡಿ ಪ್ರಕರಣ ಇತ್ತು. ಇವೆಲ್ಲ ಚರ್ಚೆ ಮಾಡದೇ ಮುಡಾವನ್ನೇ ಮುಂದಿಟ್ಟುಕೊಂಡು ಪ್ರತಿಭಟನೆ ಮಾಡ್ತಿದ್ದಾರೆ. ಏನೇನು ದಾಖಲೆಗಳಿವೆಯೋ ಕೊಡಲಿ, ಬೇಡ ಅಂದೋರು ಯಾರು? ಬಿಜೆಪಿ ಜೆಡಿಎಸ್ ದಾಖಲೆ ಇಟ್ಟುಕೊಂಡು ಮಾತಾಡಲಿ  ಕೇಂದ್ರದ ಬಜೆಟ್‌ನಿಂದ ಕರ್ನಾಟಕಕ್ಕೆ ಅನ್ಯಾಯ ಆಗಿದೆ. ಇದರ ಬಗ್ಗೆ ಮಾತನಾಡಲು ಬಿಜೆಪಿಯವರು ತಯಾರಿಲ್ಲ. ಭೋವಿ ನಿಗಮ, ಬಾಸ್ಕೋ ಕೇಸ್ ಬಗ್ಗೆ ಚರ್ಚಿಸಲು ತಯಾರಿಲ್ಲ. ಅವರು ಹಾಕಿದ ತಾಳಕ್ಕೆ ಕುಣಿಯಲು ನಾವು ರೆಡಿಯಿಲ್ಲ ಎಂದರು.

ಮುಡಾ ಹಗರಣದ ವಿರುದ್ಧ ಹೋರಾಟಕ್ಕೆ ಬಿಜೆಪಿಗೆ ಕಾಂಗ್ರೆಸ್ಸಿಂದಲೇ ಒತ್ತಡ: ವಿಜಯೇಂದ್ರ

ಇನ್ನು ನೀಟ್ ವಿಚಾರ ಸಂಬಂಧ ಪ್ರತಿಕ್ರಿಯೆ ನೀಡಿದ ಸಚಿವರು, ನಮ್ಮ ರಾಜ್ಯ ಯಾವಾಗಲೂ ಪ್ರಗತಿಪರ ರಾಜ್ಯ. ನೀಟ್ ಬರೋ ಮೊದಲೇ ನಾವು ಸಿಇಟಿ ಮಾಡಿದ್ದೆವು. ಗುಜರಾತ್ ವಿದ್ಯಾರ್ಥಿನಿ ಒಬ್ಬಳು ಬೆಳಗಾವಿಗೆ ಬಂದು ನೀಟ್ ಪರೀಕ್ಷೆ ಬರೆಯುತ್ತಾಳೆ. ಅವಳಿಗೆ 704 ಮಾರ್ಕ್ಸ್ ಬರುತ್ತೆ. ಅದರೆ ಅವಳು ನೋಡಿದ್ರೆ ಪಿಯುಸಿ ಸಹ ಪಾಸ್ ಆಗಿಲ್ಲ. ನಮ್ಮ ಮಕ್ಕಳು ಭವಿಷ್ಯವನ್ನು ಅವರ ಕೈಯಲ್ಲಿ ಕೊಟ್ಟು ಹಾಳು ಮಾಡಲ್ಲ. ಕರ್ನಾಟಕದಲ್ಲೇ ಹೆಚ್ಚಿನ ಮೆಡಿಕಲ್ ಕಾಲೇಜು ಇರೋದು. ಹೀಗಾಗಿ ನಾವು ನೀಟ್ ವಿರುದ್ಧ ರೆಸಲ್ಯೂಷನ್ ಪಾಸ್ ಮಾಡಿದ್ದೇವೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಬೆಳಗಾವಿಯ 31 ಕೃಷ್ಣಮೃಗ ಸಾವಿಗೆ ಸಿಬ್ಬಂದಿ ನಿರ್ಲಕ್ಷ್ಯ ಕಾರಣವಲ್ಲ: ಸಚಿವ ಈಶ್ವರ್ ಖಂಡ್ರೆ
ಸಿಎಂ ರೇಸಲ್ಲಿ ಡಿಕೆಶಿ ಒಬ್ಬರೇ ಇಲ್ಲ, ಎಚ್‌ಕೆ, ಪರಂ, ಎಂಬಿಪಾ ಕೂಡ ಅರ್ಹ ಇದ್ದಾರೆ: ಕೆ.ಎನ್‌.ರಾಜಣ್ಣ