
ಬೆಂಗಳೂರು (ಜು.25): ಮುಡಾ ಹಗರಣ ವಿರುದ್ಧ ಮೈಸೂರಿಗೆ ಪಾದಯಾತ್ರೆ ಮಾಡುವ ತೀರ್ಮಾನ ಮಾಡಿದ್ದೇವೆ. 28ಕ್ಕೆ ಎನ್ಡಿಎ ಸಭೆ ನಡೆಸುತ್ತೇವೆ. ಆ ಸಭೆಯಲ್ಲಿ ಯಾವಾಗ ಪಾದಯಾತ್ರೆ ಮಾಡಬೇಕು, ಅದರ ರೂಪರೇಷಗಳೇನು ಎಂಬ ಬಗ್ಗೆ ತೀರ್ಮಾನ ಮಾಡಲಾಗುತ್ತದೆ. ಅಗತ್ಯಬಿದ್ದ ರಾಜಭವನಕ್ಕೂ ನಾವು ಭೇಟಿ ನೀಡುತ್ತೇವೆ ಎಂದು ಪರಿಷತ್ ಸದಸ್ಯ ಸಿಟಿ ರವಿ ತಿಳಿಸಿದರು.
ಮುಡಾ ಹಗರಣ ವಿಚಾರವಾಗಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಡಾ ಹಗರಣ ತನಿಖೆ ಮಾಡಲು ನಿವೃತ್ತ ನ್ಯಾಯಾಧೀಶರಿಗೆ ಕೊಟ್ಟಿದ್ದಾರೆ. ಸಿಎಂ ವಿರುದ್ಧ ಅದ್ಹೇಗೆ ತನಿಖೆ ಮಾಡಿ ವರದಿ ಕೊಡ್ತಾರೆ? ಸಿದ್ದರಾಮಯ್ಯ ನೇಮಕ ಮಾಡಿರೋದು ಇದೊಂದು ರೀತಿ ಕುರಿ ಕಾಯೋಕೆ ತೋಳವನ್ನು ನೇಮಕ ಮಾಡಿದಂತಾಗಿದೆ. ಇದು ಸರಿಯಲ್ಲ, ಹಾಲಿ ಹೈಕೋರ್ಟ್ ಅಥವಾ ಸುಪ್ರೀಂ ಕೋರ್ಟ್ ನ್ಯಾಯಾಧೀಶರಿಂದಲೇ ಹಗರಣದ ತನಿಖೆ ನಡೆಯಬೇಕು ಎಂದು ಆಗ್ರಹಿಸಿದರು.
ಮುಡಾ ಹಗರಣದ ವಿರುದ್ಧ ಹೋರಾಟಕ್ಕೆ ಬಿಜೆಪಿಗೆ ಕಾಂಗ್ರೆಸ್ಸಿಂದಲೇ ಒತ್ತಡ: ವಿಜಯೇಂದ್ರ
ನಾವು ಮುಡಾ ಹಗರಣ ವಿಚಾರವಾಗಿ ಎರಡೂ ಸದನದಲ್ಲಿ ಸಭಾಧ್ಯಕ್ಷ, ಸಭಾಪತಿ ಇಬ್ಬರಿಗೂ ಮನವರಿಕೆ ಕೇಳಿದ್ದೇವೆ. ನಮ್ಮ ಚರ್ಚೆಗೆ ಅವಕಾಶ ಕೊಡದೇ ಬಿ ರಿಪೋರ್ಟ್ ಕೊಟ್ಟುಕೊಂಡಿದ್ದಾರೆ. ಚರ್ಚೆ ಅವಕಾಶ ಕೊಡದೇ ಮಿಸ್ಟರ್ ಕ್ಲೀನ್ ಚಿಟ್ ಎಂದಿದ್ದಾರೆ.
ಸೋಮವಾರ ಬಹುತೇಕ ಮೈಸೂರಿಗೆ ಪಾದಯಾತ್ರೆ ನಡೆಯುವುದು ಖಚಿತವಾಗಿದೆ. ಬಿಜೆಪಿ ಜೆಡಿಎಸ್ ಶಾಸಕರಿಂದ ಬೆಂಗಳೂರಿನಿಂದ ಮೈಸೂರಿನವರೆಗೆ ಪಾದಯಾತ್ರೆ ನಡೆಸಲು ನಿರ್ಧಾರ ಮಾಡಲಾಗಿದೆ. ಒಂದು ವಾರಗಳ ಕಾಲ ನಡೆಯುವ ಪಾದಯಾತ್ರೆ ಮೂಲಕ ಮೈಸೂರಿಗೆ ತಲುಪಲಿರುವ ನಾಯಕರು. ಮೈಸೂರು ತಲುಪಿದ ನಂತರ ಮುಡಾ ಕಚೇರಿಗೆ ಮುತ್ತಿಗೆ ಮತ್ತು ಅಲ್ಲಿಂದ ಮುಂದಿನ ಹೋರಾಟದ ಬಗ್ಗೆ ಚರ್ಚೆ ನಡೆಸುತ್ತಿರವು ಮೈತ್ರಿ ನಾಯಕರು. ಭಾನುವಾರ ಮತ್ತೊಂದು ಸುತ್ತಿನ ಸಭೆ ನಡೆಯಲಿದ್ದು, ಸಭೆಯಲ್ಲಿ ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ಸಹ ಭಾಗಿಯಾಗಲಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.