ಅತ್ತ ಸಿಎಂ ರಾಜೀನಾಮೆ ಮಾತು: ಇತ್ತ ಸಂಪುಟದಲ್ಲಿ ಮುನಿರತ್ನಗೆ ಅವಕಾಶ ಸಿಗುತ್ತೆ ಎಂದ ಡಿಸಿಎಂ

Published : Jun 06, 2021, 06:32 PM ISTUpdated : Jun 06, 2021, 06:40 PM IST
ಅತ್ತ ಸಿಎಂ ರಾಜೀನಾಮೆ ಮಾತು: ಇತ್ತ ಸಂಪುಟದಲ್ಲಿ ಮುನಿರತ್ನಗೆ ಅವಕಾಶ ಸಿಗುತ್ತೆ ಎಂದ ಡಿಸಿಎಂ

ಸಾರಾಂಶ

* ಲಗ್ಗೆರೆಯಲ್ಲಿ ಒಂದು ಲಕ್ಷ ಫುಡ್‌ ಕಿಟ್‌ ವಿತರಣೆಗೆ ಡಿಸಿಎಂ ಚಾಲನೆ * ಸಂಪುಟದಲ್ಲಿ ಮುನಿರತ್ನಗೆ ಅವಕಾಶ ಸಿಗುತ್ತೆ ಎಂದ ಡಿಸಿಎಂ * ಅತ್ತ ಸಿಎಂ ರಾಜೀನಾಮೆ ಮಾತು ಬೆನ್ನಲ್ಲೇ ಸಂಪುಟದಲ್ಲಿ ಮುನಿರತ್ನಗೆ ಅವಕಾಶ ಸಿಗುತ್ತೆ ಎಂದ ಡಿಸಿಎಂ

ಬೆಂಗಳೂರು, (ಜೂನ್.06): ರಾಜ್ಯದಲ್ಲಿ ಸಿಎಂ ಬಿಎಸ್ ಯಡಿಯೂರಪ್ಪನನವರ ನಾಯಕತ್ವ ಬದಲಾವಣೆ ಮತ್ತೆ ಮುನ್ನೆಲೆಗೆ ಬಂದಿದ್ದು, ಹೈಕಮಾಂಡ್ ಹೇಳಿದ್ರೆ ರಾಜೀನಾಮೆ ನೀಡುವೆ ಎಂದು ಸ್ವತಃ ಸಿಎಂ ಸ್ಪಷ್ಟಪಡಿದ್ದಾರೆ. ಇದರ ಮಧ್ಯೆ ಸಂಪುಟದಲ್ಲಿ ಮುನಿರತ್ನಗೆ ಅವಕಾಶ ಸಿಗುತ್ತೆ  ಎಂದು ಡಿಸಿಎಂ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಅಚ್ಚರಿ ಹೇಳಿಕೆ ಕೊಟ್ಟಿದ್ದಾರೆ.

ಕೋವಿಡ್‌ ಸಂಕಷ್ಟದಲ್ಲಿರುವ ಜನರಿಗೆ ಶಾಸಕ ಮುನಿರತ್ನ ಆಯೋಜಿಸಿದ್ದ ಒಂದು ಲಕ್ಷ ಆಹಾರ ಕಿಟ್‌ ವಿತರಣೆ ಮಾಡುವ ಕಾರ್ಯಕ್ರಮಕ್ಕೆ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಭಾನುವಾರ ಲಗ್ಗೆರೆಯಲ್ಲಿ ಚಾಲನೆ ನೀಡಿದರು. 

'ರಾಜೀನಾಮೆ ನೀಡಲು ಯಡಿಯೂರಪ್ಪಗೆ RSS ಮನವೊಲಿಸಿದೆ'

ಅಕ್ಕಿ, ಬೇಳೆ, ಅಡುಗೆ ಎಣ್ಣೆ ಸೇರಿದಂತೆ ವಿವಿಧ ಆಹಾರ ಪದಾರ್ಥಗಳಿದ್ದ ಕಿಟ್‌ಗಳನ್ನು ಹಂಚುವುದಕ್ಕೆ ಸಾಂಕೇತಿಕವಾಗಿ ಚಾಲನೆ ನೀಡಿದ ನಂತರ ಮಾಧ್ಯಮಗಳ ಜತೆ ಮಾತನಾಡಿದ ಅವರು, ಉಪ ಚುನಾವಣೆಯಲ್ಲಿ ಉತ್ತಮ ಗೆಲುವು ಸಾಧಿಸಿದ ಶಾಸಕ ಮುನಿರತ್ನ ಅವರಿಗೆ ಸಂಪುಟ ಸೇರುವ ಅವಕಾಶ ಸಿಗುತ್ತದೆ. ಈ ಬಗ್ಗೆ ಈಗಾಗಲೇ ಮುಖ್ಯಮಂತ್ರಿಗಳು ಸ್ಪಷ್ಟ ಭರವಸೆ ನೀಡಿದ್ದಾರೆ. ಅವರು ತಪ್ಪದೆ ಮಾತು ಉಳಿಸಿಕೊಳ್ಳುತ್ತಾರೆ. ಈ ಬಗ್ಗೆ ಸಂಶಯ ಬೇಡ ಎಂದು ಸ್ಪಷ್ಟಪಡಿಸಿದರು.

ಮುನಿರತ್ನ ಕೆಲಸ ಶ್ಲಾಘನೀಯ. ಒಂದು ಲಕ್ಷ ರೇಷನ್‌ ಕಿಟ್‌ ವಿತರಣೆ ಅಂದರೆ ಸಣ್ಣ ಸಂಗತಿ ಅಲ್ಲ. ಯಾರೇ ಬಂದರೂ ರೇಷನ್‌ ಕೊಡಲಾಗುತ್ತಿದೆ. ಇದು ಖಂಡಿತಾ ಒಳ್ಳೆಯ ಕೆಲಸ ಎಂದರು. 

ನಗರದಲ್ಲಿ ಯಾರೂ ಹಸಿವಿಂದ ಇರಬಾರದು. ಎಲ್ಲರಿಗೂ ಆಹಾರ ಸಿಗಬೇಕು. ಈ ನಿಟ್ಟಿನಲ್ಲಿ ಮುನಿರತ್ನ ಅರ್ಥಪೂರ್ಣ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಎಲ್ಲರೂ ದೈಹಿಕ ಅಂತರ ಪಾಲಿಸುತ್ತಾ ಬಂದು ಕಿಟ್‌ಗಳನ್ನು ಸ್ವೀಕರಿಸುತ್ತಿದ್ದಾರೆಂದು ಡಿಸಿಎಂ ಹೇಳಿದರು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮೇಕೆದಾಟು, ಭದ್ರಾ, ಕೃಷ್ಣಾ ಯೋಜನೆಗಳಲ್ಲಿ ಕೇಂದ್ರ ಸರ್ಕಾರ ವಿಳಂಬ: ಡಿ.ಕೆ.ಶಿವಕುಮಾರ್ ಆಕ್ರೋಶ
ಗೃಹ ಲಕ್ಷ್ಮೀ ಅಡಿ 1.24 ಕೋಟಿ ಸ್ತ್ರೀಯರಿಗೆ ₹1.54 ಕೋಟಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್