
ಶಿವಮೊಗ್ಗ (ಅ.25): ಉತ್ತರ ಕರ್ನಾಟಕ ಜಿಲ್ಲೆಗಳು ಹಾಗೂ ಬೆಂಗಳೂರಿನಲ್ಲಿ ಕೂಡ ನೆರೆ ಹಾವಳಿ ಉಂಟಾಗಿದೆ. ಕೊರೊನಾ ಮತ್ತು ನೆರೆ ಹಾವಳಿ ಎರಡು ಸಂಕಷ್ಟದ ನಡುವೆ ಕೆಲಸ ಮಾಡ ಬೇಕಿದ್ದು ಆದಷ್ಟು ಬೇಗ ಈ ಸಂಕಷ್ಟಗಳು ದೂರಾಗಲಿ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದರು.
ಶಿವಮೊಗ್ಗದಲ್ಲಿಂದು ಮಾತನಾಡಿದ ಮುಖ್ಯಮಂತ್ರಿ ಬಿ ಎಸ್ ವೈ ಎರಡು ಕಡೆಗಳಲ್ಲಿ ನೆರೆ ವೀಕ್ಷಿಸಿ ಸೂಕ್ತ ಪರಿಹಾರ ನೀಡಲಾಗುತ್ತಿದೆ ಎಂದು ಹೇಳಿದರು.
ಚುನಾವಣೆಗೆ ವಿಚಾರ ಪ್ರಸ್ತಾಪ
ಆರ್ ಆರ್ ನಗರ ಮತ್ತು ಶಿರಾ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುತ್ತದೆ ಎಂದು ಭವಿಷ್ಯ ನುಡಿದ ಬಿ ಎಸ್ ವೈ ವಿಪಕ್ಷ ನಾಯಕ ರಿಗೆ ಎಲ್ಲಾ ಉಪ ಚುನಾವಣೆಯಲ್ಲಿ ಗೆಲ್ಲುವ ಮಾತು ಹೇಳಿದ್ದೆ. ಅದರಂತೆ ಎರಡು ಚುನಾವಣೆಯಲ್ಲಿ ಬಿಜೆಪಿ ಗೆದ್ದೆ ಗೆಲ್ಲುತ್ತದೆ ಎಂದರು.
ಬೆಳಗಾವಿ ಲೋಕಸಭಾ ಬೈ ಎಲೆಕ್ಷನ್: ಬಿಜೆಪಿಯಿಂದ ಸ್ಪರ್ಧಿಸಲು ಇಂಗಿತ ವ್ಯಕ್ತಪಡಿಸಿದ ಕಾಂಗ್ರೆಸ್ ನಾಯಕ ...
ಶಾಲೆ ಆರಂಭ ಯಾವಾಗ..?
ಶಾಲಾ ಕಾಲೇಜು ಆರಂಭದ ಬಗ್ಗೆ ಈಗಾಗಲೇ ಹಲವು ಚರ್ಚೆಗಳು ನಡೆದಿದ್ದು, ನ . 17 ಕ್ಕೆ ದಿನಾಂಕ ನಿಗದಿ ಮಾಡಲಾಗಿದೆ. ಆದರದೆ ಇದು ಬಲವಂತ ಅಲ್ಲ ಎಂದರು. ತಜ್ಞರ ಅಭಿಪ್ರಾಯ ಮೇರೆಗೆ ಕಾಲೇಜು ಆರಂಭ ಆಗಲಿದೆ ಎಂದರು.
ನವೆಂಬರ್ ಮೂರರಂದು ರಾಜ್ಯದ ಎರಡು ಕ್ಷೇತ್ರಗಳಲ್ಲಿ ಉಪ ಚುನಾವಣೆ ನಡೆಯಲಿದ್ದು 10ರಂದು ಫಲಿತಾಂಶ ಪ್ರಕಟವಾಗಲಿದೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.