
ಕಲಬುರಗಿ, (ಜು.24): ಸಿಎಂ ಬಿಎಸ್ ಯಡಿಯಯೂರಪ್ಪ ಬದಲಾವಣೆ ಖಚಿತ ಎನ್ನಲಾಗುತ್ತಿದ್ದಂತೆಯೇ ಮುಂದಿನ ಮುಖ್ಯಮಂತ್ರಿ ಸ್ಥಾನಕ್ಕೆ ಸಚಿವ ಮುರುಗೇಶ್ ನಿರಾಣಿ ಹೆಸರು ಕೇಳಿಬರುತ್ತಿದೆ. ಈ ಈಗಾಗಲೇ ಅವರು ದೆಹಲಿ, ವಾರಾಣಾಸಿ ಭೇಟಿ ಮಾಡಿರುವುದು ಭಾರೀ ಚರ್ಚೆಗೆ ಗ್ರಾಸವಾಗಿದೆ.
ಇದರ ಮಧ್ಯೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ ನಿರಾಣಿ ಅವರು, ಮಾಜಿ ಸಂಸದ ಪಕ್ಷದ ಹಿರಿಯ ನಾಯಕ ಡಾ. ಬಸವರಾಜ ಪಾಟೀಲ್ ಸೇಡಂ ಅವರೊಂದಿಗೆ ಗೌಪ್ಯ ಮಾತುಕತೆ ನಡೆಸಿರುವುದು ಮತ್ತಷ್ಟು ಕುತೂಹಲಕ್ಕೆ ಕಾರಣವಾಗಿದೆ.
ಸಿಎಂ ರೇಸ್ನಲ್ಲಿರೋ ಮುರುಗೇಶ್ ನಿರಾಣಿಯ ಮನದ ಮಾತು
ಗುರುಪೂರ್ಣಿಮೆ ಹಿನ್ನೆಲೆಯಲ್ಲಿ ಸನ್ಮಾನಿಸಿ ಪಾದಗಳಿಗೆ ನಮಸ್ಕಾರ ಸಲ್ಲಿಸಿ, ಸಿಹಿ ತಿನ್ನಿಸಿ ಆಶೀರ್ವಾದ ಪಡೆದುಕೊಂಡರು. ಬಳಿಕ ಜೊತೆಗಿದ್ದ ಎಲ್ಲರನ್ನು ಹೊರಗೆ ಕಳುಹಿಸಿ ನಿರಾಣಿ ಹಾಗೂ ಸೇಡಂ ಮಾತುಕತೆ ನಡೆಸಿದರು. ನಾಯಕತ್ವ ಬದಲಾವಣೆ ಚರ್ಚೆ ಹಿನ್ನೆಲೆಯಲ್ಲಿ ಈ ಭೇಟಿ ಮಹತ್ವ ಪಡೆದಿದೆ.
ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ನಿರಾಣಿ, ಗುರು ಪೂರ್ಣಿಮೆ ಹಿನ್ನೆಲೆಯಲ್ಲಿ ಗುರುಗಳಿಗೆ ಸನ್ಮಾನಿಸಲಾಗುತ್ತಿದೆ. ಇದರಲ್ಲಿ ಹೊಸದೇನು ಇಲ್ಲ ಎಂದು ಸ್ಪಷ್ಟಪಡಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.