ಮುಸ್ಲಿಂ ಸಮುದಾಯದವರು ಸಿದ್ದು ನಂಬಿ ಬಂದವರು: ಮಾಜಿ ಸಚಿವ ಇಕ್ಬಾಲ್ ಅನ್ಸಾರಿ

Published : Oct 08, 2023, 10:46 AM IST
ಮುಸ್ಲಿಂ ಸಮುದಾಯದವರು ಸಿದ್ದು ನಂಬಿ ಬಂದವರು: ಮಾಜಿ ಸಚಿವ ಇಕ್ಬಾಲ್ ಅನ್ಸಾರಿ

ಸಾರಾಂಶ

ಮುಸ್ಲಿಂ ಸಮುದಾಯದವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ನಂಬಿಕೊಂಡು ಬಂದವರು. ಸಮುದಾಯ ಅವರ ಮೇಲೆ ವಿಶ್ವಾಸ ಇಟ್ಟುಕೊಂಡಿದೆ ಎಂದು ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಅಭಿಪ್ರಾಯಪಟ್ಟಿದ್ದಾರೆ.

ಗಂಗಾವತಿ (ಅ.08): ಮುಸ್ಲಿಂ ಸಮುದಾಯದವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ನಂಬಿಕೊಂಡು ಬಂದವರು. ಸಮುದಾಯ ಅವರ ಮೇಲೆ ವಿಶ್ವಾಸ ಇಟ್ಟುಕೊಂಡಿದೆ ಎಂದು ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಅಭಿಪ್ರಾಯಪಟ್ಟಿದ್ದಾರೆ. ತಮ್ಮ ನಿವಾಸದಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಮುಸ್ಲಿಂ ಸಮುದಾಯದ ನಾಯಕರಾಗಿದ್ದಾರೆ ಎಂದು ಹೇಳಿದರು. ರಾಜ್ಯದಲ್ಲಿ ಸಿದ್ದರಾಮಯ್ಯಗೆ ಮುಸ್ಲಿಂ ಸಮುದಾಯದವರು ಶೇ.88ರಷ್ಟು ಬೆಂಬಲ ವ್ಯಕ್ತಪಡಿಸಿದ್ದಾರೆ. 

ಅವರು ಸಮುದಾಯದ ನಾಯಕರಾಗಿದ್ದಾರೆ. ಅವರು ಅಭಿವೃದ್ಧಿ ಕಡೆಗೆ ಚಿಂತನೆ ಮಾಡುವ ನಾಯಕರು ಎಂದು ಪ್ರಶಂಸಿದರು. ಈಗ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ. ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಅಧಿಕಾರಕ್ಕೆ ಬಂದು ಮೂರೇ ತಿಂಗಳಲ್ಲಿ ಮಹಿಳೆಯರಿಗೆ, ಹಿಂದುಳಿದ ವರ್ಗದ ಜನರಿಗೆ ಯೋಜನೆ ಜಾರಿಗೆ ತಂದಿರುವ ನಿದರ್ಶನಗಳಿವೆ ಎಂದರು. ಬರುವ ಲೋಕಸಭಾ ಚುನಾವಣೆಯಲ್ಲಿ ಮತ್ತೇ ರಾಜ್ಯದಲ್ಲಿ ಕಾಂಗ್ರೆಸ್ ಹೆಚ್ಚಿನ ಸ್ಥಾನಗಳಲ್ಲಿ ಸಂಸದರು ಆಯ್ಕೆಯಾಗುತ್ತಾರೆ. ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎಂದರು.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ನನ್ನನ್ನು ರಾಜಕೀಯವಾಗಿ ಸೋಲಿಸಿದರೆ ಅನ್ಸಾರಿ ಇತಿಹಾಸ ಮುಗಿಯುತ್ತದೆ ಎಂದು ಪಕ್ಷದ ಕೆಲ ವಿರೋಧಿಗಳು ಅರಿತುಕೊಂಡಿದ್ದರು. ತಾವು ಸೋತರೂ ರಾಜಕೀಯವಾಗಿ ನನ್ನ ಜೀವನ ಇರುವವರಿಗೂ ಮುನ್ನಡೆಯುತ್ತದೆ ಎಂದು ವಿರೋಧಿಗಳಿಗೆ ಸವಾಲು ಹಾಕಿದರು. ರಾಜಕೀಯ ಎಂದರೆ ಕೇವಲ ಅಧಿಕಾರ, ಹಣವಲ್ಲ, ಜನ ಸೇವೆ ಮಾಡುತ್ತಾ ಬಂದಿದ್ದೇನೆ. ಅಧಿಕಾರ ಇರುತ್ತೇ, ಹೋಗುತ್ತದೆ. ಅದಕ್ಕೆ ನಾನು ತಲೆ ಕೆಡಿಸಿಕೊಳ್ಳುವವನಲ್ಲ ಎಂದರು.

ಶಾಮನೂರು ಸತ್ಯವನ್ನೇ ಹೇಳಿದ್ದಾರೆ, ರಾಜ್ಯ ಸರ್ಕಾರ ಚಿಂತಿಸಲಿ: ಜೋಶಿ

ಗಂಗಾವತಿ ನಗರದಲ್ಲಿ ಕೋಮು-ಸೌಹಾರ್ದ ಮುಖ್ಯ. ಎಲ್ಲರೂ ಶಾಂತಿ ಕಾಪಾಡಬೇಕು ಎಂದರು. ಈ ಸಂದರ್ಭದಲ್ಲಿ ಜಿಪಂ ಮಾಜಿ ಸದಸ್ಯ ಅಮರೇಶ ಗೋನಾಳ್, ವಿಠಾಲಾಪುರ ಯಮನಪ್ಪ, ಕೃಷ್ಣಪ್ಪನಾಯಕ, ಎಸ್.ಬಿ. ಖಾದ್ರಿ, ನಗರಸಭಾ ಸದಸ್ಯ ಮನೋಹರಸ್ವಾಮಿ ಹಿರೇಮಠ, ವಿಷ್ಣುತೀರ್ಥ ಜೋಷಿ, ವಿಶ್ವನಾಥ ಪಾಟೀಲ್ ಕೇಸರಹಟ್ಟಿ ಸೇರಿದಂತೆ ಹಲವರು ಇದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ದಯಮಾಡಿ ಅರ್ಥ ಮಾಡಿಕೊಳ್ಳಿ ತಪ್ಪು ತಿಳಿಯಬೇಡಿ: ಸೋದರನ ಪೋಸ್ಟ್‌ಗೆ ಹೆಬ್ಬಾಳ್ಕರ್ ಪ್ರತಿಕ್ರಿಯೆ
ಬೆಳಗಾವಿಯ 31 ಕೃಷ್ಣಮೃಗ ಸಾವಿಗೆ ಸಿಬ್ಬಂದಿ ನಿರ್ಲಕ್ಷ್ಯ ಕಾರಣವಲ್ಲ: ಸಚಿವ ಈಶ್ವರ್ ಖಂಡ್ರೆ