ಸಿದ್ದರಾಮಯ್ಯ ಸ್ಪರ್ಧೆ: ಕೋಲಾರದಲ್ಲಿ ಮುಸ್ಲಿಮರು, ಒಕ್ಕಲಿಗರೇ ನಿರ್ಣಾಯಕರು..!

Published : Jan 10, 2023, 12:21 PM IST
ಸಿದ್ದರಾಮಯ್ಯ ಸ್ಪರ್ಧೆ: ಕೋಲಾರದಲ್ಲಿ ಮುಸ್ಲಿಮರು, ಒಕ್ಕಲಿಗರೇ ನಿರ್ಣಾಯಕರು..!

ಸಾರಾಂಶ

2.3 ಲಕ್ಷ ಮತದಾರರಲ್ಲಿ ಮುಸ್ಲಿಮರು 40, ಒಕ್ಕಲಿಗರು 40 ಸಾವಿರ, ಕುರುಬರು 20 ಸಾವಿರ, ಬಲಿಜಿಗರು ಸುಮಾರು 10 ಸಾವಿರ ಮತದಾರರು. 

ಕೋಲಾರ(ಜ.10): ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕೋಲಾರದಿಂದ ಸ್ಪರ್ಧಿಸಲು ಉತ್ಸುಕನಾಗಿರುವುದಾಗಿ ಬಹಿರಂಗವಾಗಿಯೇ ಘೋಷಿಸಿದ ಬೆನ್ನಲ್ಲೇ ಇದೀಗ ರಾಜಕೀಯ ಪಂಡಿತರ ಗಮನ ಕ್ಷೇತ್ರದ ಜಾತಿ ಲೆಕ್ಕಾಚಾರಗಳ ಕುರಿತು ತಿರುಗಿದೆ. ಒಕ್ಕಲಿಗರು ಮತ್ತು ಅಲ್ಪಸಂಖ್ಯಾತ ಮತದಾರರು ಸರಿಸಮಾನ ಸಂಖ್ಯೆಯಲ್ಲಿರುವ ಈ ಕ್ಷೇತ್ರದಲ್ಲಿ ಯಾರ ಬೆನ್ನಿಗೆ ಗಟ್ಟಿಯಾಗಿ ನಿಲ್ಲಲಿದ್ದಾರೆಂಬುದರ ಮೇಲೆ ಸೋಲು-ಗೆಲುವುಗಳು ನಿರ್ಧಾರವಾಗಲಿದೆ.

ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 2.31 ಲಕ್ಷ ಮತದಾರರಿದ್ದಾರೆ. ಇದರಲ್ಲಿ 40 ಸಾವಿರ ಒಕ್ಕಲಿಗ ಮತದಾರರಾಗಿದ್ದರೆ, ಅಷ್ಟೇ ಪ್ರಮಾಣದಲ್ಲಿ ಅಂದರೆ ಸುಮಾರು 40 ಸಾವಿರ ಅಲ್ಪಸಂಖ್ಯಾತ ಮತದಾರರೂ ಇದ್ದಾರೆ. ಉಳಿದಂತೆ ಸಿದ್ದರಾಮಯ್ಯ ಪ್ರತಿನಿಧಿಸುವ ಕುರುಬ ಸಮಾಜದ 20 ಸಾವಿರ ಮತ್ತು ಬಲಿಜಿಗ ಹಾಗೂ ಇತರೆ ಸಮುದಾಯಗಳ ತಲಾ 10 ಸಾವಿರ ಮತಗಳಿವೆ.

ಸಿದ್ದರಾಮಯ್ಯ ನನಗೆ ಪ್ರತಿಸ್ಪರ್ಧಿಯೇ ಅಲ್ಲ: ವರ್ತೂರು ಪ್ರಕಾಶ್‌

ಜೆಡಿಎಸ್‌ನ ಕೆ.ಶ್ರೀನಿವಾಸಗೌಡ ಕ್ಷೇತ್ರದ ಹಾಲಿ ಶಾಸಕ. ಕಳೆದ ಚುನಾವಣೆಯಲ್ಲಿ ಅವರು 82,788 ಮತಗಳನ್ನು ಗಳಿಸಿದ್ದರು. ಇನ್ನು ಕಾಂಗ್ರೆಸ್‌ನಿಂದ ಮುಸ್ಲಿಂ ಅಭ್ಯರ್ಥಿ ಕಣಕ್ಕಿಳಿದಿದ್ದರೂ ಕೇವಲ 38,537 ಮಂದಿಯಷ್ಟೇ ಬೆಂಬಲಿಸಿದ್ದರು. ಇನ್ನು ಒಂದು ಕಾಲದ ಸಿದ್ದರಾಮಯ್ಯ ಅವರ ಶಿಷ್ಯ ವರ್ತೂರು ಪ್ರಕಾಶ್‌ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ 35,544 ಮತಗಳನ್ನು ಗಳಿಸಿದ್ದರು. ಬಿಜೆಪಿ ಅಭ್ಯರ್ಥಿ ಆರ್‌.ವೆಂಕಟಾಚಲಪತಿ ಅವರು ಗಳಿಸಿದ್ದು ಕೇವಲ 12,458 ಮತ. ಸದ್ಯ ಹಾಲಿ ಶಾಸಕ ಶ್ರೀನಿವಾಸಗೌಡ ಅವರು ಜೆಡಿಎಸ್‌ ತೊರೆದು ಕಾಂಗ್ರೆಸ್‌ ಜತೆಗೆ ಗುರುತಿಸಿಕೊಂಡಿದ್ದು, ಸಿದ್ದರಾಮಯ್ಯ ಕಣಕ್ಕಿಳಿದರೆ ಕ್ಷೇತ್ರ ಬಿಟ್ಟುಕೊಡುವುದಾಗಿ ಈಗಾಗಲೇ ಘೋಷಿಸಿದ್ದಾರೆ.

ಒಂದು ಕಡೆ ಹಾಲಿ ಶಾಸಕ ಶ್ರೀನಿವಾಸಗೌಡ ಅವರು ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿರುವುದು ಮತ್ತು ಸಿದ್ದರಾಮಯ್ಯ ಅವರ ಪ್ರವೇಶದಿಂದಾಗಿ ಕೋಲಾರ ವಿಧಾನಸಭಾ ಕ್ಷೇತ್ರದ ರಾಜಕೀಯ ಚಿತ್ರಣವೇ ಬದಲಾಗಲಿದ್ದು, ಮುಸ್ಲಿಮರು ಮತ್ತು ಒಕ್ಕಲಿಗರು ಯಾರನ್ನು ಬೆಂಬಲಿಸಲಿದ್ದಾರೆ ಎನ್ನುವುದರ ಮೇಲೆ ಅಭ್ಯರ್ಥಿಗಳ, ಸೋಲು ಗೆಲುವು ನಿರ್ಧಾರವಾಗುವ ನಿರೀಕ್ಷೆ ಇದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ರೈಲ್ವೆ ಮೂಲಸೌಕರ್ಯ ಅಭಿವೃದ್ಧಿಪಡಿಸಲು ಮೋದಿಯಿಂದ ಬದ್ಧತೆಯ ಕಾರ್ಯ: ಸಂಸದ ಬಿ.ವೈ.ರಾಘವೇಂದ್ರ
ಹೈಕಮಾಂಡ್‌ ನಿರ್ಧಾರವೇ ಅಂತಿಮ: ಸಿಎಂ ಬದಲು ವಿಚಾರಕ್ಕೆ ಸಿದ್ದರಾಮಯ್ಯ ಪ್ರತಿಕ್ರಿಯೆ