ನನ್ನ, ಎಚ್‌.ಡಿ.ರೇವಣ್ಣ ಕುಟುಂಬ ಬೇರೆ ಬೇರೆ: ಎಚ್‌.ಡಿ.ಕುಮಾರಸ್ವಾಮಿ

Published : Apr 30, 2024, 10:22 AM IST
ನನ್ನ, ಎಚ್‌.ಡಿ.ರೇವಣ್ಣ ಕುಟುಂಬ ಬೇರೆ ಬೇರೆ: ಎಚ್‌.ಡಿ.ಕುಮಾರಸ್ವಾಮಿ

ಸಾರಾಂಶ

ಎಚ್‌.ಡಿ.ರೇವಣ್ಣ ಕುಟುಂಬ ಮತ್ತು ನನ್ನ ಕುಟುಂಬ ಅನೇಕ ವರ್ಷಗಳಿಂದ ಪ್ರತ್ಯೇಕವಾಗಿ ವಾಸಿಸುತ್ತಿದೆ. ಅವರು ಏನೇ ಮಾಡಿದರೂ ಅದಕ್ಕೆ ನಾನು ಜವಾಬ್ದಾರಿಯೂ ಅಲ್ಲ, ಪ್ರತಿಕ್ರಿಯಿಸಬೇಕಾಗಿಯೂ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು.

ಶಿವಮೊಗ್ಗ (ಏ.30): ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸಂಬಂಧಿಸಿದ್ದು ಎನ್ನಲಾದ ಪೆನ್‌ ಡ್ರೈವ್‌ ಪ್ರಕರಣದಲ್ಲಿ ನಮ್ಮ ಕುಟುಂಬವನ್ನು ಎಳೆತರುವುದು ಸರಿಯಲ್ಲ. ಎಚ್‌.ಡಿ.ರೇವಣ್ಣ ಕುಟುಂಬ ಮತ್ತು ನನ್ನ ಕುಟುಂಬ ಅನೇಕ ವರ್ಷಗಳಿಂದ ಪ್ರತ್ಯೇಕವಾಗಿ ವಾಸಿಸುತ್ತಿದೆ. ಅವರು ಏನೇ ಮಾಡಿದರೂ ಅದಕ್ಕೆ ನಾನು ಜವಾಬ್ದಾರಿಯೂ ಅಲ್ಲ, ಪ್ರತಿಕ್ರಿಯಿಸಬೇಕಾಗಿಯೂ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಇದು ಒಬ್ಬ ವ್ಯಕ್ತಿಗೆ ಸಂಬಂಧಿಸಿದ್ದು. ಈ ವಿಷಯದಲ್ಲಿ ಕುಮಾರಸ್ವಾಮಿ ಹೆಸರು ಎಳೆತರುವುದು ಸರಿಯಲ್ಲ. ನನ್ನ ಮತ್ತು ದೇವೇಗೌಡರಿಗೆ ಸಂಬಂಧಿಸಿದ್ದಾಗಿದ್ದರೆ ನಮ್ಮ ಕುಟುಂಬ ಎಂದು ನಾನು ಉತ್ತರಿಸಬಹುದಿತ್ತು. ಇದು ನನಗೆ ಅಥವಾ ನಮ್ಮ ಕುಟುಂಬಕ್ಕೆ ಮಾತ್ರವಲ್ಲ ಇಡೀ ಸಮಾಜಕ್ಕೆ ಮುಜುಗರ ತರುವ ವಿಷಯ ಎಂದು ಹೇಳಿದರು.

ಈ ವಿಷಯಕ್ಕೆ ಸಂಬಂಧಿಸಿದಂತೆ ಈಗಾಗಲೇ ಸರ್ಕಾರ ಎಸ್ಐಟಿ ರಚಿಸಿದೆ. ಇದರ ತನಿಖಾ ವರದಿ ಬರಲಿ. ಆ ಬಳಿಕ ನೋಡೋಣ. ಈ ನೆಲದ ಕಾನೂನು ತನ್ನದೇ ಆದ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತದೆ. ಇದಕ್ಕೆ ಎಲ್ಲರೂ ತಲೆಬಾಗಬೇಕು. ಉಪ್ಪು ತಿಂದವರು ನೀರು ಕುಡಿಯಲೇಬೇಕು ಎಂದು ನಾನೀಗಲೇ ಹೇಳಿದ್ದೇನೆ. ಈ ವಿಷಯದಲ್ಲಿ ಯಾರನ್ನೂ ರಕ್ಷಿಸುವುದಾಗಲಿ, ಯಾವ ರೀತಿಯಲ್ಲೂ ವಹಿಸಿಕೊಳ್ಳುವ ಪ್ರಶ್ನೆಯಾಗಲಿ ಇಲ್ಲ ಎಂದರು. 

ಪ್ರಜ್ವಲ್ ಪ್ರಕರಣವನ್ನು ಪ್ರಧಾನಿ ಮೋದಿ, ಬಿಜೆಪಿ ಹೊಣೆ ಹೊರಬೇಕೆಂಬುದು ಹಾಸ್ಯಾಸ್ಪದ: ಚೇತನ್ ಅಹಿಂಸಾ

ಇದೇ ವೇಳೆ ಇದರ ಹಿಂದೆ ರಾಜಕೀಯ ಷಡ್ಯಂತ್ರವಿದೆಯೇ ಎಂಬ ಪ್ರಶ್ನೆಗೆ, ಇರಬಹುದು. ಚುನಾವಣೆಗೆ ಮೂರು ದಿನ ಇರುವಾಗ ಈ ರೀತಿ ಪೆನ್‌ ಡ್ರೈವ್‌ ಹಂಚಲು ಕಾರಣ ಯಾರು? ಯಾಕಾಗಿ ಹಂಚಿದರು ಎಂದು ಪ್ರಶ್ನಿಸಿದರು. ಪ್ರಜ್ವಲ್ ವಿದೇಶಕ್ಕೆ ಹೋಗಿದ್ದಾರೆಂಬ ವಿಷಯ ಕುರಿತು, ನನಗೆ ಹೇಗೆ ಮಾಹಿತಿ ಇರಲು ಸಾಧ್ಯ? ಸರ್ಕಾರಕ್ಕೆ ಗೊತ್ತಿರಬೇಕು. ಸರ್ಕಾರ ಈ ವಿಷಯದಲ್ಲಿ ಮಾಹಿತಿ ನೀಡಬೇಕು. ಅವನೇನು ನಿತ್ಯ ಎಲ್ಲಿಗೆ ಹೋಗುತ್ತಾನೆ ಎಂದು ನನಗೆ ಹೇಳಿ ಹೋಗುತ್ತಾನೇನು ಎಂದು ಖಾರವಾಗಿ ಪ್ರಶ್ನಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ನೆಹರೂ ಕಾಲದಲ್ಲೇ ಮೊದಲ ಮತಗಳ್ಳತನ ನಡೆದಿದ್ದು; ಎರಡು ಮತ ಪಡೆದು ಪ್ರಧಾನಿಯಾದರು' ಸಂಸತ್ತಿನಲ್ಲಿ ಕಾಂಗ್ರೆಸ್ ವಿರುದ್ಧ ಶಾ ವಾಗ್ದಾಳಿ
2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!