'ನನ್ನ ತಂದೆ ಡಿಸಿಎಂ, ಮಂತ್ರಿ ಸ್ಥಾನಕ್ಕೆ ಒತ್ತಡ ಹೇರಿಲ್ಲ : ನನಗಿನ್ನೂ ಸಾಕಷ್ಟು ಜವಾಬ್ದಾರಿ ಇದೆ'

Suvarna News   | Asianet News
Published : Aug 12, 2021, 04:03 PM IST
'ನನ್ನ ತಂದೆ ಡಿಸಿಎಂ, ಮಂತ್ರಿ ಸ್ಥಾನಕ್ಕೆ ಒತ್ತಡ  ಹೇರಿಲ್ಲ : ನನಗಿನ್ನೂ ಸಾಕಷ್ಟು ಜವಾಬ್ದಾರಿ ಇದೆ'

ಸಾರಾಂಶ

ನಾನು ರಾಜ್ಯ ಭಾಜಪದ ಉಪಾಧ್ಯಕ್ಷರಾಗಿ ಕೆಲಸ ಮಾಡುತ್ತಿದ್ದೇನೆ. ನಾನು ಹುದ್ದೆಯನ್ನ ಹುಡುಕಿಕೊಂಡು ಹೋಗುವುದಿಲ್ಲ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿಕೆ

ಕಲಬುರಗಿ (ಆ.12): ನಾನು ರಾಜ್ಯ ಭಾಜಪದ ಉಪಾಧ್ಯಕ್ಷರಾಗಿ ಕೆಲಸ ಮಾಡುತ್ತಿದ್ದೇನೆ. ನಾನು ಹುದ್ದೆಯನ್ನ ಹುಡುಕಿಕೊಂಡು ಹೋಗುವುದಿಲ್ಲ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದರು.

ಕಲಬುರಗಿಯಲ್ಲಿಂದು ಮಾತನಾಡಿದ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ ವೈ  ವಿಜಯೇಂದ್ರ ನಾನು ಹುದ್ದೆಯನ್ನ ಹುಡುಕಿಕೊಂಡು ಹೋಗುವುದಿಲ್ಲ. ನನ್ನ ತಂದೆ ಯಡಿಯೂರಪ್ಪನವರು ರಾಜ್ಯದಲ್ಲಿ ಸೈಕಲ್ ಮೇಲೆ ಓಡಾಡಿ ಪಕ್ಷ ಕಟ್ಟಿದ್ದಾರೆ. ರಾಜ್ಯದ ಜನ ಅವರ ಹೋರಾಟ ಗುರುತಿಸಿ ಪಕ್ಷಕ್ಕೆ ಅಧಿಕಾರ ಕೊಟ್ಟಿದ್ದಾರೆ ಎಂದರು.

ಪಕ್ಷದ ವರಿಷ್ಟರು ಯಾವುದೇ ಸ್ಥಾನಮಾನ ಕೊಟ್ಟರು ಅದನ್ನ ಯಶಸ್ವಿಯಾಗಿ ನಿಭಾಯಿಸಿಕೊಂಡು ಹೋಗುತ್ತೇನೆ. ಸಿಎಂ ಬೊಮ್ಮಾಯಿ‌ ಸಣ್ಣಪುಟ್ಟ ಭಿನ್ನಾಭಿಪ್ರಾಯ ಬಗೆಹರಿಸಿಕೊಂಡು ಹೋಗುತ್ತಾರೆ. ಆನಂದ್ ಸಿಂಗ್ ಸೇರಿದಂತೆ 17 ಜನ ಕಾಂಗ್ರೆಸ್ ಜೆಡಿಎಸ್ ತ್ಯಜಿಸಿ ಬಂದಿದ್ದಾರೆ. ಅವರ ಬಗ್ಗೆ ಸರ್ಕಾರಕ್ಕೆ ಹಾಗೂ ಯಡಿಯೂರಪ್ಪರಿಗೆ ಗೌರವವಿದೆ. ಅವರನ್ನ ಗೌರವಯುತವಾಗಿ ನಡೆಸಿಕೊಂಡು ಹೋಗಲಾಗುವುದು ಎಂದರು.

ವಿಜಯೇಂದ್ರ VS ಸಿದ್ದರಾಮಯ್ಯ: ಮಹಾ ಸಂಗ್ರಾಮಕ್ಕೆ ಸಾಕ್ಷಿಯಾಗುತ್ತಾ ವರುಣಾ.?

ನಾನು ಸಚಿವ ಸ್ಥಾನ ಅಥಾವ ಡಿಸಿಎಂ ಹುದ್ದೆಗೆ ಆಕಾಂಕ್ಷಿಯಾಗಿರಲಿಲ್ಲ. ಪ್ರಾಮಾಣಿಕವಾಗಿ ಹೇಳುತ್ತೇನೆ, ನಮ್ಮ ತಂದೆ ನನ್ನ ಸಲುವಾಗಿ ಯಾವುದೇ ಹುದ್ದೆಗೆ ಬೇಡಿಕೆ ಇಟ್ಟಿಲ್ಲ.  ನನಗಿನ್ನು 35 ವರ್ಷ ವಯಸ್ಸು ಆಗಿದೆ, ನಾನು ಸಾಕಷ್ಟು ಬೆಳೆಯಬೇಕಾಗಿದೆ. ಪಕ್ಷವನ್ನ ತಳಮಟ್ಟದಿಂದ ಬೆಳೆಸಬೇಕಾಗಿದೆ ಎಂದರು.
 
 ಬಿಜೆಪಿ ಗಂಭೀರವಾಗಿ ತೆಗೆದುಕೊಂಡಿದೆ: ನಿನ್ನೆಯಷ್ಟೆ ಬಿಬಿಎಂಪಿ, ಗುಲ್ಬರ್ಗಾ ಮಹಾನಗರ ಪಾಲಿಕೆ, ಹುಬ್ಬಳ್ಳಿ-ಧಾರವಾಡ ಚುನಾವಣೆ ಘೋಷಣೆಯಾಗಿದೆ. ಪ್ರತಿಯೊಂದು ವಾರ್ಡ್‌ನಲ್ಲಿ ಸೂಕ್ತ ಅಭ್ಯರ್ಥಿಯನ್ನ ಆಯ್ಕೆ ಮಾಡಿ ಎಲ್ಲೆಡೆ ಕಮಲ ಅರಳಿಸಲಾಗುವುದು. ಈ ಚುನಾವಣೆ ಬಿಜೆಪಿ ಗಂಭೀರವಾಗಿ ತೆಗೆದುಕೊಂಡಿದೆ. ಬರುವಂತಹ ಸಿಂದಗಿ, ಹಾನಗಲ್ ಉಪಚುನಾಣೆಯಲ್ಲಿ ಭಾಜಪ ಯಶಸ್ವಿಯಾಗುತ್ತದೆ ಎಂದು ವಿಜಯೇಂದ್ರ ಹೇಳಿದರು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿದ್ದರಾಮಯ್ಯ ಆಡಳಿತ ಕೇವಲ ಟೀಕೆಯಲ್ಲಿ ಮುಳುಗಿದೆ: ಕೇಂದ್ರ ಸಚಿವ ವಿ.ಸೋಮಣ್ಣ ಆರೋಪ
ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಮಧ್ಯೆ ಖುರ್ಚಿ ಕಾದಾಟ ಇಲ್ಲ: ಬಸವರಾಜ ರಾಯರೆಡ್ಡಿ