ಲೋಕಸಭಾ ಚುನಾವಣೆಯಲ್ಲಿ ನನ್ನ ಗೆಲುವು ನಿಶ್ಚಿತ: ಕೆ.ಎಸ್‌.ಈಶ್ವರಪ್ಪ

Published : Apr 10, 2024, 09:56 PM IST
ಲೋಕಸಭಾ ಚುನಾವಣೆಯಲ್ಲಿ ನನ್ನ ಗೆಲುವು ನಿಶ್ಚಿತ: ಕೆ.ಎಸ್‌.ಈಶ್ವರಪ್ಪ

ಸಾರಾಂಶ

ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ನನ್ನ ಗೆಲುವು ಖಚಿತ, ಚುನಾವಣೆ ಬಳಿಕ ಕುಟುಂಬದ ರಾಜಕಾರಣ ಮುಕ್ತಾಯಗೊಳ್ಳಲಿದೆ ಎಂದು ಲೋಕಸಭಾ ಚುನಾವಣೆ ಪಕ್ಷೇತರ ಅಭ್ಯರ್ಥಿ, ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಭವಿಷ್ಯ ನುಡಿದರು.   

ಭದ್ರಾವತಿ (ಏ.10): ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ನನ್ನ ಗೆಲುವು ಖಚಿತ, ಚುನಾವಣೆ ಬಳಿಕ ಕುಟುಂಬದ ರಾಜಕಾರಣ ಮುಕ್ತಾಯಗೊಳ್ಳಲಿದೆ ಎಂದು ಲೋಕಸಭಾ ಚುನಾವಣೆ ಪಕ್ಷೇತರ ಅಭ್ಯರ್ಥಿ, ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಭವಿಷ್ಯ ನುಡಿದರು. ನಗರದ ಚನ್ನಗಿರಿ ರಸ್ತೆಯಲ್ಲಿ ಸೋಮವಾರ ರಾಷ್ಟ್ರ ಭಕ್ತರ ಬಳಗದ ನೂತನ ಚುನಾವಣಾ ಕಾರ್ಯಾಲಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಮ್ಮ ಹೋರಾಟ ಪಕ್ಷದ ವಿರುದ್ಧವಲ್ಲ. ಪಕ್ಷದಲ್ಲಿ ಕೆಲವರು ನಡೆಸುತ್ತಿರುವುದು ಷಡ್ಯಂತ್ರಗಳ ವಿರುದ್ಧ. ದೇಶದಲ್ಲಿ ಮೋದಿ ಪುನಃ ಪ್ರಧಾನಿಯಾಗಬೇಕೆಂಬುದು ನನ್ನ ಉದ್ದೇಶವಾಗಿದೆ ಎಂದರು.

ಪ್ರಸ್ತುತ ಬಿಜೆಪಿಯಲ್ಲಿ ದಲಿತರು, ಹಿಂದುಳಿದವರು ಸೇರಿದಂತೆ ಯಾವ ನಾಯಕರನ್ನು ಸಹ ಬೆಳೆಯಲು ಬಿಡಲಿಲ್ಲ. ಅಲ್ಲದೆ ಪಕ್ಷದಲ್ಲಿನ ನಿಷ್ಠಾವಂತ ಕೆಲ ನಾಯಕರನ್ನು ಸಹ ತುಳಿಯುವ ಮೂಲಕ ಪಕ್ಷವನ್ನು ತಮ್ಮ ಹಿಡಿತದಲ್ಲಿ ಇಟ್ಟುಕೊಳ್ಳಲು ನಾಯಕರೊಬ್ಬರು ಯತ್ನಿಸುತ್ತಿದ್ದಾರೆ ಎಂದು ಹೇಳಿದರು.

ಕಳೆದ ಚುನಾವಣೆಯಲ್ಲಿ ದೇವೇಗೌಡರು ಅಭ್ಯರ್ಥಿಯಾದ್ದರಿಂದ ನನಗೆ ನೋವಾಗಿದ್ದು ಸತ್ಯ: ಮುದ್ದಹನುಮೇಗೌಡ

ನನ್ನ ಸ್ಪರ್ಧೆ ಖಚಿತವಾಗಿದ್ದು, ನಾನು ವಿಧಾನಸಭೆ ಅಥವಾ ಲೋಕಸಭೆಗೆ ಆಯ್ಕೆಯಾದರೂ ಅಭಿವೃದ್ಧಿ ಕೆಲಸಗಳನ್ನು ಹೇಗೆ ಕೈಗೊಳ್ಳುವುದು ಎಂಬುದು ಗೊತ್ತಿದೆ. ಶಿವಮೊಗ್ಗ ನಗರ ಕ್ಷೇತ್ರದಲ್ಲಿ ಜನರು ನನ್ನನ್ನು ನಿರಂತರವಾಗಿ ಆಯ್ಕೆ ಮಾಡಿಕೊಂಡು ಬಂದಿದ್ದಾರೆ. ಇದಕ್ಕೆ ಕಾರಣ ನಾನು ಎಲ್ಲಾ ಧರ್ಮದ, ಜಾತಿ, ಜನಾಂಗದವರ ಪರವಾಗಿದ್ದು, ಸಾಕಷ್ಟು ಅಭಿವೃದ್ಧಿ ಕೆಲಸ ಕೈಗೊಂಡಿದ್ದೇನೆ. ಹೀಗಾಗಿ ಈ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವಿದೆ ಎಂದರು.

ಮಾಜಿ ಸಚಿವ ಗೂಳಿಹಟ್ಟಿ ಶೇಖರ್‌ ಮಾತನಾಡಿ, ಈಶ್ವರಪ್ಪನವರು ಕೇವಲ ಹಿಂದುತ್ವದ ನಾಯಕರಲ್ಲ, ಜನಮೆಚ್ಚುವ ನಾಯಕರು, ಎಲ್ಲಾ ಧರ್ಮ, ಜಾತಿ ಜನಾಂದವರ ಪರವಾಗಿರುವವರು. ಇವರ ನಿಲುವನ್ನು ಪಕ್ಷದ ಅನೇಕ ನಾಯಕರು ಸಹ ಬೆಂಬಲಿಸಿದ್ದಾರೆ. ಇಂತಹ ಧೀಮಂತ ನಾಯಕರ ಗೆಲುವಿಗಾಗಿ ಶ್ರಮಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು.

ಲೋಕಸಭಾ ಚುನಾವಣೆಯಲ್ಲಿ ಗೆಲ್ಲಿಸಿದರೆ ತುಮಕೂರನ್ನು ಮಾದರಿ ಜಿಲ್ಲೆಯಾಗಿಸುವೆ: ವಿ.ಸೋಮಣ್ಣ

ಬಿಜೆಪಿ ತಾಲೂಕು ಮಂಡಲ ಮಾಜಿ ಅಧ್ಯಕ್ಷ ಎಂ.ಪ್ರಭಾಕರ್, ಡಾ.ತೇಜಸ್, ಮಂಜ್ಯಾನಾಯ್ಕ್, ಬಾಬು, ಬಸವರಾಜ್, ರಾಘವೇಂದ್ರ, ಕರಿಬಸಪ್ಪ, ಮಂಡಲಕೊಪ್ಪ ಗಂಗಾಧರ್, ಬಿ.ವಿ ಚಂದನ್ ರಾವ್, ನಿಂಗೋಜಿ ರಾವ್, ಸಂತೋಷ್ ಸೇರಿದಂತೆ ಹಲವರು ಹಾಜರಿದ್ದರು. ಮುಖಂಡರಾದ ಬಿ.ಎಸ್‌ ನಾರಾಯಣಪ್ಪ ಪ್ರಾಸ್ತಾವಿಕ ನುಡಿಗಳನ್ನಾಡಿದರು. ವಿಜಯ್ ಸಿದ್ಧಾರ್ಥ್ ನಿರೂಪಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ವಿಧಾನಸಭೆಯಲ್ಲಿ ಸಿಎಂ ಕುರ್ಚಿಯದ್ದೇ ಗುದ್ದಾಟ: ಬೈರತಿ 'ಕಿಂಗ್ ಅಲೈವ್' ಅಂದಿದ್ದು ಯಾಕೆ? ಆರ್ ಅಶೋಕ್, ಬೈರತಿ ವಾಕ್ಸಮರ!
ವಿಧಾನಸಭೆಯಲ್ಲಿ 'ಉತ್ತರ ಕರ್ನಾಟಕ' ವಿವಾದ: ಶಿವಲಿಂಗೇಗೌಡರ ಮಾತುಗಳಿಗೆ ಗರಂ ಆದ ಯತ್ನಾಳ್, ಗ್ಯಾರಂಟಿ, ಗುಂಡಿ ವಿಚಾರಕ್ಕೆ ಜಟಾಪಟಿ!