ಜನರ ಆಶೀರ್ವಾದದಿಂದ ಸಿಎಂ ಆಗಿ ದಸರಾದಲ್ಲಿ ಪಾಲ್ಗೊಳ್ಳುತ್ತಿರುವುದು ನನ್ನ ಸೌಭಾಗ್ಯ: ಸಿದ್ದರಾಮಯ್ಯ

Published : Oct 03, 2025, 09:20 AM IST
cm siddaramaiah

ಸಾರಾಂಶ

ದಸರಾ ಜನರ ಹಬ್ಬ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಿದಾಗ ಮಾತ್ರ ದಸರಾ ಆಯೋಜನೆ ಯಶಸ್ವಿಯಾಗುತ್ತದೆ. ಮೈಸೂರು ದಸರಾಕ್ಕೆ ಪ್ರವಾಸಿಗರನ್ನು ಸ್ವಾಗತಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮೈಸೂರು (ಅ.03): ದಸರಾ ಜನರ ಹಬ್ಬ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಿದಾಗ ಮಾತ್ರ ದಸರಾ ಆಯೋಜನೆ ಯಶಸ್ವಿಯಾಗುತ್ತದೆ. ಮೈಸೂರು ದಸರಾಕ್ಕೆ ಪ್ರವಾಸಿಗರನ್ನು ಸ್ವಾಗತಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೈಸೂರು ಅರಮನೆ ಬಲರಾಮ ದ್ವಾರದಲ್ಲಿ ಕೋಟೆ ಆಂಜನೇಯಸ್ವಾಮಿ ದೇವಸ್ಥಾನ ಮುಂಭಾಗದಲ್ಲಿ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿ ಜಂಬೂಸವಾರಿಗೆ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಈ ಬಾರಿ ದಸರಾ ಹಬ್ಬವು ಹನ್ನೊಂದು ದಿನಗಳ ಕಾಲ ನಡೆದಿದ್ದು, ನಾಡಿನ ಜನತೆಗೆ ದಸರಾ ಮಹೋತ್ಸವದ ಶುಭಾಶಯಗಳನ್ನು ಕೋರುತ್ತೇನೆ. ಮೈಸೂರು ದಸರಾ ವಿಶ್ವವಿಖ್ಯಾತವಾಗಿದ್ದು, ಹೆಚ್ಚಿನ ಪ್ರವಾಸಿಗರನ್ನು ಸ್ವಾಗತಿಸುವುದಾಗಿ ಹೇಳಿದರು. ನಾನು ಎರಡು ಬಾರಿ ಮುಖ್ಯಮಂತ್ರಿಯಾಗಿ, ಎಲ್ಲಾ ದಸರಾ ಉತ್ಸವಗಳಲ್ಲಿ ಭಾಗಿಯಾಗಿದ್ದೇನೆ. ಜನರ ಆಶೀರ್ವಾದದಿಂದ ಮುಖ್ಯಮಂತ್ರಿಯಾಗಿ 8 ಬಾರಿ ದಸರಾದಲ್ಲಿ ಪಾಲ್ಗೊಳ್ಳುವ ಅವಕಾಶ ದೊರೆತಿದ್ದು, ಅತ್ಯಂತ ಸಂತೋಷವನ್ನು ತಂದಿದೆ ಎಂದರು.

ದಸರಾ ಯಶಸ್ವಿ ಆಯೋಜನೆ

ದಸರಾ ಜನರ ಹಬ್ಬ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಿದಾಗ ಮಾತ್ರ ದಸರಾ ಆಯೋಜನೆ ಯಶಸ್ವಿಯಾಗುತ್ತದೆ. ದಸರಾ ಉತ್ಸವವನ್ನು ಉದ್ಘಾಟಿಸಿದ ಸಾಹಿತಿ ಬಾನು ಮುಷ್ತಾಕ್ ಅವರಿಗೆ ಅಭಿನಂದಿಸಿದ ಮುಖ್ಯಮಂತ್ರಿಗಳು, ದಸರಾ ಉತ್ಸವ ಯಾವುದೇ ಅಡಚಣೆಗಳಿಲ್ಲದೇ ಯಶಸ್ವಿಯಾಗಿ ನಡೆದಿರುವುದು ಸಂತಸ ತಂದಿದೆ. ಇದಕ್ಕಾಗಿ ಶ್ರಮಿಸಿದ ಸಚಿವರು, ಶಾಸಕರು ಹಾಗೂ ಅಧಿಕಾರಿಗಳನ್ನು ಅಭಿನಂದಿಸುತ್ತೇನೆ ಎಂದರು.

ನಂದಿಧ್ವಜಕ್ಕೆ ಪೂಜೆ ಸಲ್ಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಡುಗಾಯಿ ಒಡೆದರು. ಈ ವೇಳೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಡಾ.ಎಚ್.ಸಿ. ಮಹದೇವಪ್ಪ, ಶಿವರಾಜ್ ತಂಗಡಗಿ, ಡಾ. ಸುಧಾಕರ್, ಶಾಸಕರಾದ ತನ್ವೀರ್ ಸೇಠ್, ನರೇಂದ್ರಸ್ವಾಮಿ, ಡಿ. ರವಿಶಂಕರ್, ಕೆ. ಹರೀಶ್ ಗೌಡ, ಸಿ. ಪುಟ್ಟರಂಗಶೆಟ್ಟಿ, ಎ.ಆರ್. ಕೃಷ್ಣಮೂರ್ತಿ, ಡಾ.ಡಿ. ತಿಮ್ಮಯ್ಯ, ಕೆ. ಶಿವಕುಮಾರ್, ಸಿ.ಎನ್. ಮಂಜೇಗೌಡ ಮೊದಲಾದವರು ಇದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅಂಗನವಾಡಿ, ಆಶಾ ನೌಕರರ ಗೌರವಧನ ಹೆಚ್ಚಿಸಿ: ಸಂಸದ ಡಾ.ಕೆ.ಸುಧಾಕರ್‌ ಮನವಿ
ಬಂಗಾರಪ್ಪ ಅವರ ಹೆಸರಿಗೆ ತಕ್ಕ ರೀತಿ ಮಧು ಮಾತನಾಡಲಿ: ಆರಗ ಜ್ಞಾನೇಂದ್ರ ತಿರುಗೇಟು