ಪ್ರತಾಪ್ ಸಿಂಹಗೆ ಕೊರೋನಾ ದೃಢ: ಸ್ವಾಮೀಜಿ, ಸಚಿವರಿಗೆ, ಅಧಿಕಾರಿಗಳಿಗೆ ಆತಂಕ

Published : May 11, 2021, 09:47 PM ISTUpdated : May 12, 2021, 08:14 AM IST
ಪ್ರತಾಪ್ ಸಿಂಹಗೆ ಕೊರೋನಾ ದೃಢ: ಸ್ವಾಮೀಜಿ, ಸಚಿವರಿಗೆ, ಅಧಿಕಾರಿಗಳಿಗೆ ಆತಂಕ

ಸಾರಾಂಶ

* ಸಂಸದ ಪ್ರತಾಪ್ ಸಿಂಹಗೆ ಕೊರೊನಾ ಪಾಸಿಟಿವ್ ದೃಢ * ಸಂಪರ್ಕಕ್ಕೆ ಬಂದಿರುವವರು ಕ್ವಾರಂಟೈನ್ ಆಗಿ ಎಂದು ಮನವಿ *  ಸ್ವಾಮೀಜಿ, ಸಚಿವರಿಗೆ, ಅಧಿಕಾರಿಗಳಿಗೆ ಆತಂಕ

ಮೈಸೂರು, (ಮೇ.11): ಬಿಜೆಪಿ ಸಂಸದ ಪ್ರತಾಪ್ ಸಿಂಹಗೆ ಕೊರೋನಾ ಸೋಂಕು ದೃಢಪಟ್ಟಿದೆ. ಈ ಬಗ್ಗೆ ಪ್ರತಾಪ್ ಸಿಂಹ ಇಂದು (ಮಂಗಳವಾರ) ತಮ್ಮ ಟ್ವಿಟರ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

 ಮೈಸೂರು-ಕೊಡಗು ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಕಳೆದ ಕೆಲವು ದಿನಗಳಿಂದ ತಮ್ಮ ಕ್ಷೇತ್ರದಲ್ಲಿ ಕೊರೋನಾ ನಿಯಂತ್ರಣಕ್ಕೆ ಓಡಾಟ ನಡೆಸಿದ್ದರು. ಇದೀಗ, ಪ್ರತಾಪ್‌ ಸಿಂಹಗೆ ಕೊರೋನಾ ಪಾಸಿಟಿವ್ ಆಗಿದ್ದು, ತಮ್ಮ ಜೊತೆ ಸಂಪರ್ಕಕ್ಕೆ ಬಂದಿರುವವರು ಕ್ವಾರಂಟೈನ್ ಆಗಿ ಎಂದು ಮನವಿ ಮಾಡಿದ್ದಾರೆ.

ಆಕ್ಸಿಜನ್‌ಗಾಗಿ ವಿರಸ: ಆಮ್ಲಜನಕ ಕೋಟಾ ನಿಗದಿಗೆ ಸಿಎಂಗೆ ಪ್ರತಾಪ್‌ ಸಿಂಹ ಮನವಿ 

ಕೊರೋನಾ ನಿಯಂತ್ರಣಕ್ಕೆ ಪ್ರತಾಪ್ ಸಿಂಹ ಅವರು ಹಲವು ಕಡೆ ಹಲವರ ಜೊತೆ ಕ್ಷೇತ್ರದಾದ್ಯಂತ ಸುತ್ತಾಡಿದ್ದಾರೆ. ಇಂದು (ಮಂಗಳವಾರ) ಅವರ ಕೊರೋನಾ ವರದಿ ಬರುವುದಕ್ಕಿಂತ ಮೊದಲು ಉಸ್ತುವಾರಿ ಸಚಿವ ಎಸ್‌.ಟಿ.ಸೋಮಶೇಖರ್ ನೇತೃತ್ವದಲ್ಲಿ ಅಧಿಕಾರಿಗಳ ಸಭೆ ನಡೆಸಿದ್ದಾರೆ.

 ಅಲ್ಲದೇ  ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ ಎಸ್ ಟಿ ಸೋಮಶೇಖರ್ ರವರೊಂದಿಗೆ ನಿನ್ನೆ (ಸೋಮವಾರ) ಮೈಸೂರಿನ ಗಣಪತಿ ಸಚ್ಚಿದಾನಂದ ಆಶ್ರಮಕ್ಕೆ ಭೇಟಿ ನೀಡಿ  ಪರಮಪೂಜ್ಯ ಶ್ರೀ ಗಳ ಆಶೀರ್ವಾದ ಪಡೆದಿದ್ದನ್ನು ಇಲ್ಲಿ ಸ್ಮರಿಸಬಹುದು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

CM-DCM ಬ್ರೇಕ್‌ಫಾಸ್ಟ್ ಮೀಟಿಂಗ್ ಬಳಿಕ ಸಿದ್ದರಾಮಯ್ಯ ಪುತ್ರ ಶಾಕಿಂಗ್ ಹೇಳಿಕೆ
ಸಿಎಂ ಸಿದ್ದರಾಮಯ್ಯಗೆ ಸುಪ್ರೀಂಕೋರ್ಟ್‌ ನೋಟೀಸ್: ವರುಣಾ ಕ್ಷೇತ್ರದ ಆಯ್ಕೆ ಪ್ರಶ್ನಿಸಿದ್ದ ಅರ್ಜಿ ವಿಚಾರಣೆ