
ಮೈಸೂರು, (ಮೇ.26): ಚುನಾವಣೆ ವೇಳೆ ಸೂಕ್ತ ಆದಾಯ ಪ್ರಮಾಣ ಪತ್ರ ಸಲ್ಲಿಸದ ಹಿನ್ನೆಲೆ ಮೈಸೂರು ಮಹಾನಗರ ಪಾಲಿಕೆಯ 36 ನೇ ವಾರ್ಡ್ ಸದಸ್ಯೆ ಹಾಗೂ ಹಾಲಿ ಮೇಯರ್ ರುಕ್ಮಿಣಿ ಮಾದೇಗೌಡ ಅವರ ಪಾಲಿಕೆ ಸದಸ್ಯತ್ವ ರದ್ದು ಮಾಡಿ ಹೈಕೋರ್ಟ್ ಆದೇಶ ಹೊರಡಿಸಿದೆ.
ಮೈಸೂರು ಮಹಾನಗರ ಪಾಲಿಕೆಯ ಮೇಯರ್ ಆಗಿರುವ ರುಕ್ಮಿಣಿ ಮಾದೇಗೌಡ ಅವರ ಮಹಾನಗರ ಪಾಲಿಕೆ ಸದಸ್ಯತ್ವ ರದ್ದು ಮಾಡಿ ಹೈಕೋರ್ಟ್ ಆದೇಶ ನೀಡಿದೆ. ಈ ಮೂಲಕ ಹೈ ಕೋರ್ಟ್ ಜಿಲ್ಲಾ ನ್ಯಾಯಾಲಯದ ಆದೇಶವನ್ನೇ ಎತ್ತಿ ಹಿಡಿದಿದೆ.
ಮೊದಲ ದಿನವೇ ಮೈಸೂರು ಮೇಯರ್ಗೆ ಸಂಕಷ್ಟ : ಕಳೆದುಕೊಳ್ತಾರಾ ಪಟ್ಟ..?
ಇನ್ನು ರುಕ್ಮಿಣಿ ಮಾದೇಗೌಡ ವಿರುದ್ಧ ಸೋಲು ಕಂಡಿರುವ ರಜನಿ ಅಣ್ಣಯ್ಯಗೆ ಗೆಲುವು ಎಂದು ಕನ್ಸಿಡರ್ ಮಾಡಲು ಸಾಧ್ಯವಿಲ್ಲ, ನೇರವಾಗಿ ಮತ್ತೆ ಚುನಾವಣೆ ಹೋಗಬೇಕೆಂದು ಹೈಕೋರ್ಟ್ ತೀರ್ಪು ನೀಡಿದೆ.
ಪಾಲಿಕೆ ಸದಸ್ಯತ್ವ ರದ್ದಾಗಿರುವುದರಿಂದ ಮೇಯರ್ ಸ್ಥಾನಕ್ಕೂ ಕಂಟಕ ಎದುರಾಗಿದ್ದು, ಹೈ ಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೊರೆ ಹೋಗುವ ಎಲ್ಲಾ ಸಾಧ್ಯತೆಗಳಿವೆ. ಆದ್ರೆ, ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸುವವರೆಗೂ ಅವರಿಗೆ ಮೇಯರ್ ಅಧಿಕಾರವಿರುವುದಿಲ್ಲ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.