ನನ್ನನ್ನೇಕೆ ಸೋಲಿಸಬೇಕು? ಕಾರಣ ಕೊಡಿ: ಸಿದ್ದುಗೆ ಪ್ರತಾಪ್‌ ಸವಾಲು

Published : Sep 03, 2023, 12:52 PM IST
ನನ್ನನ್ನೇಕೆ ಸೋಲಿಸಬೇಕು? ಕಾರಣ ಕೊಡಿ: ಸಿದ್ದುಗೆ ಪ್ರತಾಪ್‌ ಸವಾಲು

ಸಾರಾಂಶ

ಕೆಲಸ ಮಾಡಿದವನನ್ನು ಸೋಲಿಸಬೇಕು ಅಂತ ಕೈ ಮುಗಿದು ಮುಖ್ಯ​ಮಂತ್ರಿ ಕೇಳಿದರೆ ಜನ ಒಪ್ಪುತ್ತಾರಾ? ಸಿದ್ದರಾಮಯ್ಯರಿಗೆ ಬಡವರ ಮಕ್ಕಳ ಉದ್ಧಾರವಾಗಬಾರದು. ಬಡವರ ಮಕ್ಕಳು ಬೆಳೆ​ಯ​ಬಾ​ರ​ದು. ಅವರು, ಅವರ ಮಕ್ಕಳು ಮಾತ್ರ ರಾಜಕಾರಣ ಮಾಡುತ್ತಿ​ರ​ಬೇ​ಕು ಅಷ್ಟೆ ಎಂದು ಕಿಡಿಕಾರಿದ ಪ್ರತಾಪ್‌ ಸಿಂಹ. 

ಮೈಸೂರು(ಸೆ.03):  ‘ನನ್ನನ್ನು ಜನ ಯಾಕೆ ಸೋಲಿಸಬೇಕು ಅಂತ ಮುಖ್ಯ​ಮಂತ್ರಿ ಐದತ್ತು ಕಾರಣಗಳನ್ನು ಕೊಡಲಿ. ಯಾವ ಕಾರಣಕ್ಕೆ ಮೈಸೂರು ಜನ ಪ್ರತಾಪ್‌ ಸಿಂಹನನ್ನು ಸೋಲಿಸಬೇಕು ಹೇಳಿ?’ ಎಂದು ಮುಖ್ಯ​ಮಂತ್ರಿ​ಗೆ ಬಿಜೆಪಿ ಸಂಸದ ಪ್ರತಾಪ್‌ ಸಿಂಹ ಸವಾಲು ಹಾಕಿದ್ದಾರೆ.

ಪ್ರತಾಪ್‌ ಸಿಂಹನನ್ನು ಈ ಬಾರಿ ಸೋಲಿಸಿ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಮೈಸೂರಿನಲ್ಲಿ ಶನಿವಾರ ಪ್ರತಿಕ್ರಿಯಿಸಿದ ಸಂಸದ, ರಾಷ್ಟ್ರೀಯ ಹೆದ್ದಾರಿ ಮಾಡಿ​ಸಿದ್ದು ನನ್ನ ತಪ್ಪಾ? ಗ್ರೇಟರ್‌ ಮೈಸೂರು ಮಾಡಲು ಹೊರಟ್ಟಿದ್ದು, ವಿಮಾನ ನಿಲ್ದಾಣ ಅಭಿವೃದ್ಧಿ ಮಾಡಲು ಹೊರಟ್ಟಿದ್ದು ತಪ್ಪಾ? ಚಾಮುಂಡಿ ಬೆಟ್ಟದ ಅಭಿವೃದ್ಧಿ ಮಾಡುತ್ತಿರುವುದು ತಪ್ಪಾ? ಯಾವ ಕಾರಣಕ್ಕೆ ಮೈಸೂರು ಜನ ಪ್ರತಾಪ್‌ ಸಿಂಹನನ್ನು ಸೋಲಿಸಬೇಕು ಹೇಳಿ ಎಂದು ತಿರು​ಗೇಟು ನೀಡಿ​ದ​ರು.

ಯುವನಿಧಿ ಯೋಜನೆ ಯಾವಾಗ ಜಾರಿಯಾಗುತ್ತೆ ಗೊತ್ತಾ?: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

ಮುಖ್ಯ​ಮಂತ್ರಿ ಯಾವ ಬಡಾವಣೆಯಲ್ಲಿ ನಿಂತು ನನ್ನ ಸೋಲಿಸಿ ಅಂತ ಹೇಳಿದ್ದಾರೆಂಬುದು ನೋಡಿದೆ. ಮೈಸೂರಿನ ಕುವೆಂಪುನಗರದಲ್ಲೋ, ಸರಸ್ವತಿಪುರಂನಲ್ಲೋ, ಸಿದ್ದಾರ್ಥ ಬಡಾವಣೆಯಲ್ಲೋ ಬಂದು ಮುಖ್ಯ​ಮಂತ್ರಿ ಈ ರೀತಿ ಹೇಳಲು ಆಗಲ್ಲ. ಉದಯಗಿರಿಯಲ್ಲಿ ತಮ್ಮ ಬಾಂಧವರ ಮುಂದೆ ಹೋಗಿ ಕೈ ಮುಗಿದು ನನ್ನ ಸೋಲಿಸಲು ಸಿದ್ದ​ರಾ​ಮ​ಯ್ಯ ಕರೆ ಕೊಟ್ಟಿದ್ದಾರೆ. ತಮ್ಮ ಬಾಂಧವರ ಉದ್ಧಾರಕ್ಕೆ ಮಾತ್ರ ಸಿದ್ದರಾಮಯ್ಯ ಇರೋದು ಎಂಬುದು ನನಗೆ ಗೊತ್ತು. ತಮ್ಮ ಬಾಂಧವರ ಮುಂದೆ ಕೈಮುಗಿದು ನನ್ನ ಸೋಲಿಸಿ ಅಂತ ಕೇಳುವ ದೈನಾಸಿ ಸ್ಥಿತಿ ಮುಖ್ಯ​ಮಂತ್ರಿಗೆ ಬರಬಾರದಿತ್ತು ಎಂದು ವ್ಯಂಗ್ಯವಾಡಿದರು.

ನಾವು ಯಾವತ್ತೂ ನಿಮಗೆ ಸುಳ್ಳು ಹೇಳಲ್ಲ, ಸುಳ್ಳು ಭರವಸೆ ನೀಡಲ್ಲ: ರಾಹುಲ್ ಗಾಂಧಿ

ಕೆಲಸ ಮಾಡಿದವನನ್ನು ಸೋಲಿಸಬೇಕು ಅಂತ ಕೈ ಮುಗಿದು ಮುಖ್ಯ​ಮಂತ್ರಿ ಕೇಳಿದರೆ ಜನ ಒಪ್ಪುತ್ತಾರಾ? ಸಿದ್ದರಾಮಯ್ಯರಿಗೆ ಬಡವರ ಮಕ್ಕಳ ಉದ್ಧಾರವಾಗಬಾರದು. ಬಡವರ ಮಕ್ಕಳು ಬೆಳೆ​ಯ​ಬಾ​ರ​ದು. ಅವರು, ಅವರ ಮಕ್ಕಳು ಮಾತ್ರ ರಾಜಕಾರಣ ಮಾಡುತ್ತಿ​ರ​ಬೇ​ಕು ಅಷ್ಟೆ ಎಂದು ಕಿಡಿಕಾರಿದರು.

ಮಹಿಷಾ ದಸರಾ ಆರಂಭ ಮಾಡಿ ಮೈಸೂರಿನ ಸ್ವಾಸ್ಥ್ಯ ಕೆಡಿಸಿದ್ದು, ಟಿಪ್ಪು ಜಯಂತಿ ಮಾಡಿ ರಾಜ್ಯದ ಸೌಹಾರ್ದತೆ ಕೆಡಿಸಿದ್ದು ಸಿದ್ದರಾಮಯ್ಯ ತಾನೇ? ಟಿಪ್ಪು ಜಯಂತಿ ಹಿನ್ನೆಲೆಯಲ್ಲಿ ಸಾಲು ಸಾಲು ಹಿಂದೂ ಕಾರ್ಯಕರ್ತರ ಕೊಲೆಯಾಯಿತು. ಇದಕ್ಕೆ ಯಾರು ಕಾರಣ ಎಂದು ಅವರು ಪ್ರಶ್ನಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಯಾವುದೇ ಕ್ಷಣದಲ್ಲಾದರೂ ಡಿ.ಕೆ. ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಉದಯ ಕದಲೂರು ಓಪನ್ ಹೇಳಿಕೆ
ಎಸ್ಸಿ ಒಳ ಮೀಸಲಾತಿ ಜಾರಿ ವಿಧೇಯಕಕ್ಕೆ ಸಂಪುಟ ಅಸ್ತು: ಚಾರಿತ್ರಿಕ ಆದೇಶಕ್ಕೆ ಕಾನೂನು ಬಲ