
ಮೈಸೂರು(ಅ.25): ಲೋಕಸಭಾ ಚುನಾವಣೆಗೂ, ರಾಜ್ಯಾಧ್ಯಕ್ಷರ ನೇಮಕಕ್ಕೂ ಸಂಬಂಧ ಇಲ್ಲ. ಬಿಜೆಪಿ ಸಂಘಟನೆ ದೃಷ್ಟಿಯಿಂದಷ್ಟೆ ರಾಜ್ಯಾಧ್ಯಕ್ಷರು ಬೇಕು ಎಂದು ಸಂಸದ ಪ್ರತಾಪ ಸಿಂಹ ಹೇಳಿದರು.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿ ರಾಜ್ಯಾಧ್ಯಕ್ಷರು ಯಾರಾಗಬೇಕು? ಯಾವಾಗ ಮಾಡಬೇಕು? ಇದನ್ನು ನಮ್ಮ ಹೈಕಮಾಂಡ್ ನಿರ್ಧರಿಸುತ್ತದೆ. ಅದನ್ನು ಹೇಳಲು, ನಾನು ಬಹಳ ಕಿರಿಯ. ನಾನು ಪಕ್ಷಕ್ಕೆ ಬಂದು ಈಗ 10 ವರ್ಷ ಆಗುತ್ತಿದೆ ಅಷ್ಟೆ. ನಾನು ಪಕ್ಷದ ನೇಮಕ ವಿಚಾರದಲ್ಲಿ ಏನೂ ಹೇಳಲು ಆಗುವುದಿಲ್ಲ ಎಂದರು.
ಪ್ರತಾಪ ಸಿಂಹ ಗೆದ್ದರೆ ನಾನು ಊರು ಬಿಟ್ಟು ಹೋಗುತ್ತೇನೆ: ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್
ಪಕ್ಷದ ಕಾರ್ಯಕರ್ತರು ರಾಜ್ಯ ರಾಜಕಾರಣಕ್ಕೆ ಬನ್ನಿ ಎಂದು ಶೋಭಾ ಕರಂದ್ಲಾಜೆ ಅವರನ್ನು ಕರೆಯುತ್ತಿದ್ದರು. ನಾನು ಅದೇ ದಾಟಿಯಲ್ಲೇ ಶುಭಾಶಯ ಕೋರಿದ್ದೇನೆ. ನಾವೆಲ್ಲ ಗೆಲ್ಲುವುದು ಪ್ರಧಾನಿ ಮೋದಿ ಅವರ ಹೆಸರಿನಿಂದ, ಮೋದಿ ನಮ್ಮ ದೇವರು. ಲೋಕಸಭಾ ಚುನಾವಣೆ ಮೋದಿ ಹೆಸರಿನಲ್ಲೇ ನಡೆಯುತ್ತದೆ ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.