ಸಂಸದೆ ಸುಮಲತಾ ಅಂಬರೀಶ್ ವಿರುದ್ಧ ಗಂಭೀರ ಆರೋಪ ಮಾಡಿದ ಪ್ರತಾಪ್ ಸಿಂಹ

Published : Nov 14, 2020, 03:19 PM ISTUpdated : Nov 14, 2020, 03:30 PM IST
ಸಂಸದೆ ಸುಮಲತಾ ಅಂಬರೀಶ್ ವಿರುದ್ಧ ಗಂಭೀರ ಆರೋಪ ಮಾಡಿದ ಪ್ರತಾಪ್ ಸಿಂಹ

ಸಾರಾಂಶ

ಸಂಸದೆ ಸುಮಲತಾ ಅಂಬರೀಶ್ ಅವರ ಕಾರ್ಯ ವೈಖರಿ ಬಗ್ಗೆ ಮೈಸೂರು ಸಂಸದ ಪ್ರತಾಪ್ ಸಿಂಗ್ ಟೀಕಿಸಿ ಮಾತನಾಡರುವ ದೃಶ್ಯವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.  

ಮೈಸೂರು, (ನ.14):  ಮೈಸೂರು ಸಂಸದ ಪ್ರತಾಪ್‌ ಸಿಂಹ ಅವರು ಮಂಡ್ಯ ಸಂಸದೆ ಸುಮಲತಾ ವಿರುದ್ಧ ಏನೂ ಕೆಲಸ ಮಾಡಲ್ಲ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಂಸದ ಪ್ರತಾಪ್ ಸಿಂಹ, ಅಧಿಕಾರಿಯೊಬ್ಬರ ಜೊತೆ ಫೋನ್‌ನಲ್ಲಿ ಮಾತನಾಡುತ್ತಾ, ‘ದೇವೇಗೌಡರ ಕುಟುಂಬದವರನ್ನು ಸೋಲಿಸಲು ಸುಮಲತಾ ಅವರನ್ನು ಗೆಲ್ಲಿಸಿದ್ದಾರಷ್ಟೇ. ಮಂಡ್ಯದಲ್ಲಿ ಒಂದು ಕೆಲಸ ಮಾಡುವುದಕ್ಕೂ ಬಿಡುತ್ತಿಲ್ಲ. ಮಂಡ್ಯದ ಯಾವುದೇ ಕೆಲಸ ಇದ್ದರೂ ನನಗೆ ಹೇಳಿ. ಆ ಯಮ್ಮಾ ಏನೂ ಕೆಲಸ ಮಾಡುವುದಿಲ್ಲ ಎಂದು ಟೀಕಿಸಿದ್ದಾರೆ.

ಕರ್ನಾಟಕ ಬಿಜೆಪಿ ಉಸ್ತುವಾರಿ ಬದಲಾವಣೆ 

ಮಂಡ್ಯ ತಾಲೂಕಿನ ಯಲಿಯೂರು ಗ್ರಾಮಸ್ಥರ ಅಹವಾಲು ಸ್ವೀಕರಿಸಲು ಪ್ರತಾಪ್ ಸಿಂಹ ಬಂದಿದ್ದರು. ಈ ವೇಳೆ ಬೆಂಗಳೂರು-ಮೈಸೂರು ದಶಪಥ ಕಾಮಗಾರಿಯ ಬಗ್ಗೆ ಅಧಿಕಾರಿಯ ಜೊತೆ ಫೋನ್‌ನಲ್ಲಿ ಮಾತನಾಡಿದ್ದಾರೆ. ಆ ಅಧಿಕಾರಿ ಸುಮಲತಾ ವಿರುದ್ಧ ದೂರು ಹೇಳಿದಾಗ ಪ್ರತಾಪ್‌ ಸಿಂಹ ಸುಮಲತಾ ಕಾರ್ಯ ವೈಖರಿ ಬಗ್ಗೆ ಕಿಡಿಕಾರಿದ್ದಾರೆ ಎನ್ನಲಾಗಿದೆ. 

ಸದ್ಯ ಪ್ರತಾಪ್‌ ಸಿಂಹ ಸುಮಲತಾ ವಿರುದ್ಧ ಆ ಯಮ್ಮಾ ಕೆಲಸ ಮಾಡಲ್ಲ ಎಂದು ಆರೋಪಿಸಿರೋ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಸುಮಲತಾ ಬೆಂಬಲಿಗರು ಪ್ರತಾಪ್‌ ಸಿಂಹ ವಿರುದ್ಧ ಕಿಡಿಕಾರಿದರೆ, ಇನ್ನೂ ಹಲವರು ಪ್ರತಾಪ್‌ ಸಿಂಹ ಸರಿಯಾಗಿಯೇ ಹೇಳಿದ್ದಾರೆ ಎಂದು ಸಮರ್ಥಿಸಿಕೊಂಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗ್ರಾಪಂ ಅಧ್ಯಕ್ಷರೂ ಮತ್ತು ಹಸಿರು ಪೆನ್ನೂ...!
Karnataka News Live: ರಾಜ್ಯದಲ್ಲಿ ಕಾಂಗ್ರೆಸ್‌ನಿಂದ ಉದ್ಯೋಗದ ನವಯುಗ!