ದೇಶದ ಪ್ರಧಾನಿ ಮೋದಿ ಚುನಾವಣಾ ಪ್ರಚಾರಕ್ಕೆ ಸೀಮಿತ: ಸಚಿವ ಚಲುವರಾಯಸ್ವಾಮಿ ಟೀಕೆ

Published : Nov 16, 2025, 10:28 AM IST
N Chaluvarayaswamy

ಸಾರಾಂಶ

ಈಗಿನ ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲಾ ರಾಜ್ಯಗಳ ಚುನಾವಣಾ ಪ್ರಚಾರಕ್ಕೆ ಸೀಮಿತಗೊಂಡಿದ್ದಾರೆ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಟೀಕಿಸಿದರು.

ನಾಗಮಂಗಲ (ನ.16): ಈ ಹಿಂದೆ ಪ್ರಧಾನಿಯಾಗಿದ್ದವರು ದೇಶದ ಜನರ ಕಷ್ಟಗಳನ್ನು ಆಲಿಸಲು ಹಾಗೂ ಅಭಿವೃದ್ಧಿಗೆ ಸಮಯ ನೀಡುತ್ತಿದ್ದರು. ಆದರೆ, ಈಗಿನ ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲಾ ರಾಜ್ಯಗಳ ಚುನಾವಣಾ ಪ್ರಚಾರಕ್ಕೆ ಸೀಮಿತಗೊಂಡಿದ್ದಾರೆ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಟೀಕಿಸಿದರು. ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಪ್ರಧಾನಿ ಸ್ಥಾನ ಎಂಬುದನ್ನು ಈ ಹಿಂದೆ ಯಾರೂ ಕೂಡ ಚುನಾವಣೆ ಪ್ರಚಾರಕ್ಕೆ ತೆಗೆದುಕೊಂಡು ಹೋಗುತ್ತಿರಲಿಲ್ಲ. ಆದರೆ, ನರೇಂದ್ರ ಮೋದಿ ಅವರು ಆ ಸ್ಥಾನವನ್ನು ಎಲ್ಲಾ ರಾಜ್ಯಗಳ ಚುನಾವಣಾ ಪ್ರಚಾರಕ್ಕೆ ಮೀಸಲಿರಿಸಿರುವುದು ದೇಶದ ದುರಂತ ಎಂದರು.

ಬಿಹಾರ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ರಾಜ್ಯದ ಬಿಜೆಪಿಯವರು ಇಲ್ಲಿ ಯಾಕೆ ಸಂಭ್ರಮಾಚರಣೆ ಮಾಡುತ್ತಿದ್ದಾರೋ ಗೊತ್ತಿಲ್ಲ. ಸ್ವಾತಂತ್ರ್ಯ ಬಂದಾಗಿನಿಂದ ಬಿಜೆಪಿ ಮತ್ತು ಜೆಡಿಎಸ್ ಸ್ವತಂತ್ರವಾಗಿ 113 ಸ್ಥಾನಗಳನ್ನು ಪಡೆದಿಲ್ಲ. ದೇಶದಲ್ಲಿ ತಮಿಳುನಾಡು, ಕೇರಳ, ಪಶ್ಚಿಮ ಬಂಗಾಳ, ಆಂಧ್ರಪ್ರದೇಶದಲ್ಲಿ ಬಿಜೆಪಿ ಏನಾಗಿದೆ ಎಂಬುದನ್ನು ಒಂದು ಬಾರಿ ನೆನಪು ಮಾಡಿಕೊಳ್ಳಲಿ ಎಂದು ತಿಳಿಸಿದರು.

ಬಿಹಾರ ರಾಜ್ಯದಲ್ಲಿ ನಿತೀಶ್‌ಕುಮಾರ್ ಜೊತೆ ಸೇರಿಕೊಂಡು ಗೆದ್ದು ಪಟಾಕಿ ಹೊಡೆಯುವುದಲ್ಲ. ಕರ್ನಾಟಕದಲ್ಲಿ 2028ಕ್ಕೆ ವಿಪಕ್ಷ ನಾಯಕ ಆರ್.ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಚುನಾವಣೆಯಲ್ಲಿ ಗೆದ್ದು ಪಟಾಕಿ ಹೊಡೆಯಲಿ. ಆದರೆ, ರಾಜ್ಯದಲ್ಲಿ 2028ಕ್ಕೂ ಕಾಂಗ್ರೆಸ್ ಸರ್ಕಾರ ಬರುವುದು ನೂರಕ್ಕೆ ನೂರು ಸತ್ಯ ಎಂದು ಭವಿಷ್ಯ ನುಡಿದರು. ಬಿಹಾರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿಗೆ ಪರಿಸ್ಥಿತಿ ಚೆನ್ನಾಗಿಲ್ಲ. ಹಾಗಾಗಿ ಬಿಜೆಪಿಯವರು ನಿತೀಶ್‌ಕುಮಾರ್ ಜತೆಗೂಡಿ ಗೆದ್ದಿದ್ದಾರೆ.

ದಬ್ಬಾಳಿಕೆಯ ಚುನಾವಣೆ

ಮತಗಳ್ಳತನ ಎಂಬ ಸತ್ಯವನ್ನು ನಾವು ದೇಶದ ಜನತೆ ಮುಂದೆ ಹೇಳಿದ್ದೇವೆ. ಮತಗಳ್ಳತನದ ವಿರುದ್ಧ ಪ್ರತಿಭಟನೆ ನಡೆದ ತಕ್ಷಣ ಫಲಿತಾಂಶ ನಮ್ಮ ಪರ ಬರುತ್ತದೆ ಎಂಬ ಭ್ರಮೆ ನಮಗಿಲ್ಲ ಎಂದರು. ದೇಶದಲ್ಲಿ ಬಿಜೆಪಿ ದಬ್ಬಾಳಿಕೆ ನಡೆಸಿ ಚುನಾವಣೆ ಮಾಡುವುದರಲ್ಲಿ ಪರಿಣಿತರು. ಆ ರೀತಿಯಲ್ಲಿ ಮ್ಯಾಜಿಕ್ ನಂಬರ್ ಸಮೀಪ ಸ್ಥಾನಗಳಿರುವಂತಹ ರಾಜ್ಯಗಳಲ್ಲಿ ಅಂತಹ ದಬ್ಬಾಳಿಕೆಯ ಚುನಾವಣೆ ನಡೆಸುತ್ತಾರೆ. ಪ್ರಧಾನ ಮಂತ್ರಿಗಳಿಗೆ ದೇಶದ ಅಭಿವೃದ್ಧಿ ಮತ್ತು ಜನರ ಬದುಕು ಮುಖ್ಯವಲ್ಲ. ಅವರಿಗೆ ಚುನಾವಣೆಯೇ ಮುಖ್ಯವಾಗಿದೆ ಎಂದು ಕಿಡಿಕಾರಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

India Latest News Live: ಅಕ್ರಮ ಸಂಬಂಧದ ಹಾದಿ ಹಿಡಿದ ಅಮ್ಮ - ಆಕೆಯ ಇಬ್ಬರು ಪುಟ್ಟ ಮಕ್ಕಳ ಮೋರಿಗೆಸೆದ ಪ್ರಿಯಕರ
63 ಪರ್ಸೆಂಟ್‌ ಭ್ರಷ್ಟಾಚಾರ ಬಿಜೆಪಿ ಕಾಲದ್ದು, ಅಶೋಕ್‌ಗೆ ಅರ್ಥವಾಗೇ ಇಲ್ಲ: ಸಿಎಂ