
ಬೆಳಗಾವಿ(ಜೂ.08): ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರು ಜೆಡಿಎಸ್ ಅಭ್ಯರ್ಥಿ ಪರವಾಗಿದ್ದರು ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆರೋಪಕ್ಕೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತೀವ್ರ ಕಿಡಿಕಾರಿದ್ದಾರೆ.
ಕಟೀಲ್ ಬಿಜೆಪಿ ರಾಜ್ಯಾಧ್ಯಕ್ಷ ಆಗುವುದಕ್ಕೂ ಲಾಯಕ್ ಅಲ್ಲ, ಅವರು ಪ್ರಬುದ್ಧ ರಾಜಕಾರಣಿಯೂ ಅಲ್ಲ ಎಂದು ಆರೋಪಿಸಿದ್ದಾರೆ. ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿ ಅಧ್ಯಕ್ಷ ಕಟೀಲ್ ರಾಜಕೀಯವಾಗಿ ನಮ್ಮ ವಿರೋಧಿ. ಅವರು ಹೇಳಿದ್ದೆಲ್ಲ ಸತ್ಯ ಎಂದು ನಾವು ನಂಬಬೇಕಾ? ಕಟೀಲ್ ಆಧಾರರಹಿತ ಆರೋಪ ಮಾಡುತ್ತಾರೆ, ಸುಳ್ಳು ಹೇಳುತ್ತಾರೆ. ಅವರು ಬಿಜೆಪಿ ಅಧ್ಯಕ್ಷ ಆಗಲೂ ಲಾಯಕ್ ಅಲ್ಲ. ಬಾಯಿಗೆ ಏನೇನು ಬರುತ್ತೋ ಅದನ್ನೇ ಮಾತನಾಡುತ್ತಾರೆ. ಅವರ ಮಾತು ಗಂಭೀರವಾಗಿ ಪರಿಗಣಿಸಬೇಕಿಲ್ಲ. ಏಕೆಂದರೆ ಕಟೀಲ್ ಪ್ರಬುದ್ಧ ರಾಜಕಾರಣಿಯೂ ಅಲ್ಲ ಎಂದರು.
ಸಿದ್ದು- ಬಿಎಸ್ವೈ ಭೇಟಿ ವಿಡಿಯೋ ಬಹಿರಂಗ ಯಾವ ಸಂದೇಶಕ್ಕಾಗಿ?: ಎಚ್ಡಿಕೆ
ನಮ್ಮ ಪಕ್ಷದಲ್ಲಿ ಎಲ್ಲರೂ ಒಪ್ಪಿಕೊಂಡೇ ಎರಡನೇ ಅಭ್ಯರ್ಥಿ ಹಾಕಲಾಗಿದೆ. ಖರ್ಗೆ ಅವರು ಜೆಡಿಎಸ್ ಅಭ್ಯರ್ಥಿ ಬೆಂಬಲಿಸಿದ್ದಾರೆಂಬುದೆಲ್ಲ ಸುಳ್ಳು ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.