
ಚನ್ನರಾಯಪಟ್ಟಣ (ಮಾ.09): ಲೋಕಾಯುಕ್ತ ದಾಳಿ ನಂತರ ತಲೆಮರೆಸಿಕೊಂಡಿದ್ದ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರಿಗೆ ಬೇಲ್ ಸಿಕ್ಕಿದ ಮೇಲೆ ಸಾರ್ವಜನಿಕ ಮೆರವಣಿಗೆ ಮಾಡಿದ್ದು ಸರಿಯಲ್ಲ. ಇದು ನಮಗೂ ಮುಜುಗರ ತಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು. ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಡಾಳು ವಿರೂಪಾಕ್ಷಪ್ಪನ ಪ್ರಕರಣಕ್ಕೆ ಪಕ್ಷ ಎಂದಿಗೂ ರಕ್ಷಣೆ ನೀಡುವುದಿಲ್ಲ. ಇಂತಹ ಯಾವುದೇ ಭ್ರಷ್ಟಾಚಾರದ ಆರೋಪ ಸಹಿಸುವುದಿಲ್ಲ. ಈಗಾಗಲೇ ಅವರಿಗೆ ನೋಟಿಸ್ ನೀಡಲಾಗಿದೆ ಎಂದ ಅವರು, ಮಾಡಾಳ್ಗೆ ಜಾಮೀನು ಸಿಕ್ಕಿರುವುದು ಕಾನೂನಾತ್ಮಕ ವಿಚಾರ. ನಾನು ಅದರ ಬಗ್ಗೆ ಮಾತನಾಡುವುದಿಲ್ಲ ಎಂದರು.
ಬಿಜೆಪಿ ಗೆಲುವಿನ ಅಶ್ವಮೇಧ ಕುದುರೆ ನಿಲ್ಲಿಸಿ ತೋರಿಸಲಿ: ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರಿಗೆ ತಾಕತ್ತಿದ್ದರೆ ಬಿಜೆಪಿ ಗೆಲುವಿನ ಅಶ್ವಮೇಧ ಕುದುರೆಯನ್ನು ನಿಲ್ಲಿಸಿ ತೋರಿಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸವಾಲು ಹಾಕಿದರು. ಬಿಡದಿಯ ತಿಮ್ಮಪ್ಪನ ಕೆರೆ ಮೈದಾನದಲ್ಲಿ ವಿಜಯ ಸಂಕಲ್ಪ ರಥಯಾತ್ರೆ ಬಹಿರಂಗ ಸಮಾವೇಶದಲ್ಲಿ ಮಾತನಾಡಿದ ಅವರು, ಮೂರು ರಾಜ್ಯಗಳಲ್ಲಿ ಬಿಜೆಪಿ ಗೆದ್ದಿದೆ. ಕರ್ನಾಟಕದಲ್ಲಿಯೂ ಗೆದ್ದು ಅಧಿಕಾರಕ್ಕೆ ಬರಲಿದೆ. ಮಾಜಿ ಸಿಎಂ ಕುಮಾರಸ್ವಾಮಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಿರುದ್ಯೋಗಿಗಳಾಗಲಿದ್ದಾರೆ. ರಾಮನಗರ ಜಿಲ್ಲೆ ಜೆಡಿಎಸ್ ಭದ್ರಕೋಟೆಯಾಗಿ ಉಳಿದಿಲ್ಲ.
ನಾನು ಬೋನ್ನಲ್ಲಿದ್ದರೂ ಹುಲಿನೇ, ಜೈಲ್ನಲ್ಲಿದ್ದರೂ ಹುಲಿನೇ: ಜನಾರ್ದನ ರೆಡ್ಡಿ
ಆ ಪಕ್ಷ ಚನ್ನಪಟ್ಟಣದಲ್ಲಿ ಧೂಳಿಪಟವಾದರೆ, ಮಾಗಡಿಯಲ್ಲಿ ಅರಬ್ಬಿ ಸಮುದ್ರ ಸೇರುತ್ತದೆ. ಮೊದಲು ದಳಪತಿಗಳು ಮಾಗಡಿ ಮತ್ತು ಚನ್ನಪಟ್ಟಣ ನಿಮ್ಮದಲ್ಲ ಅನ್ನುತ್ತಿದ್ದರು. ಈಗ ನಾನು ಹೇಳುತ್ತಿದ್ದೇನೆ. ಈ ಮೂರು ಕ್ಷೇತ್ರಗಳು ನಿಮ್ಮದಲ್ಲ, ಇಲ್ಲೆಲ್ಲ ಬಿಜೆಪಿ ಧ್ವಜ ಹಾರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇಂದಿರಾ ಗಾಂಧಿ ಕಾಲದಲ್ಲಿ ಒಂದು ಲೈಟ್ ಕಂಬ ನಿಲ್ಲಿಸಿದರು ಕಾಂಗ್ರೆಸ್ ಗೆಲ್ಲುತ್ತದೆ ಎನ್ನುತ್ತಿದ್ದರು. ಈಗ ಕಾಲಘಟ್ಟಬದಲಾಗಿದ್ದು, ಇಂದಿರಾ ಕಾಂಗ್ರೆಸ್ ಉಳಿದಿಲ್ಲ. ಕಾಂಗ್ರೆಸ್ ಯುವ ನಾಯಕ ರಾಹುಲ್ ಗಾಂಧಿ ವೈನಾಡಿಗೆ ಪಲಾಯನ ಮಾಡಿದರೆ, ಅನೇಕ ನಾಯಕರು ಸೋಲು ಕಂಡಿದ್ದಾರೆ. ಈಗ ಪರಿವರ್ತನೆ ಮೂಲಕ ಕಾಂಗ್ರೆಸ್ ಮುಕ್ತ ಭಾರತ ಆಗುತ್ತಿದೆ ಎಂದು ಹೇಳಿದರು.
ಜೋಡೆತ್ತಲ್ಲ ಕಳ್ಳ ಮಳ್ಳ: ಕಂದಾಯ ಸಚಿವ ಆರ್.ಅಶೋಕ್ ಮಾತನಾಡಿ, ಕುಮಾರಸ್ವಾಮಿ ಮತ್ತು ಡಿ.ಕೆ.ಶಿವಕುಮಾರ್ ಜೋಡೆತ್ತಲ್ಲ ಕಳ್ಳ ಮಳ್ಳ. ಅವರ ಮೈತ್ರಿ ಸರ್ಕಾರ 10 ತಿಂಗಳಿಗೆ ನೆಗೆದು ಬಿತ್ತು. ಅವರಿಗೆ ಸರ್ಕಾರ ಮಾಡುವ ಯೋಗ್ಯತೆ ಇಲ್ಲ. ಜೆಡಿಎಸ್ 123 ಸ್ಥಾನ ಗೆಲ್ಲುವುದಾಗಿ ಹೇಳುತ್ತಿದ್ದಾರೆ. ಅಷ್ಟುಸ್ಥಾನಗಳನ್ನು ಜೆಡಿಎಸ್ ಗೆಲ್ಲುತ್ತದೆ ಎಂದು ಯಾರಾದರು ಎದೆ ಮುಟ್ಟಿಕೊಂಡು ಹೇಳಲಿ ನೋಡೋಣ. ಲಾಟರಿ ಸರ್ಕಾರದಲ್ಲಿ ಕುಮಾರಸ್ವಾಮಿ ಲಾಟರಿ ಸಿಎಂ ಆಗಿದ್ದವರು. ಅವರನ್ನು ಜನರು ಗಂಭೀರವಾಗಿ ತೆಗೆದುಕೊಳ್ಳಬಾರದು. ಮೈಸೂರು - ಬೆಂಗಳೂರು ದಶಪಥ ಹೆದ್ದಾರಿಯಲ್ಲಿ ಸಂಸದ ಪ್ರತಾಪ್ಸಿಂಹ ಶ್ರಮ ಬಹಳಷ್ಟಿದೆ. ಇಲ್ಲಿನ ಸಂಸದರು ಶಾಸಕರು ಜಗಳ ಮಾಡುವುದನ್ನು ಬಿಟ್ಟರೆ ಬೇರೇನೂ ಮಾಡಿಲ್ಲ ಎಂದು ಟೀಕಿಸಿದರು.
ಕಾಂಗ್ರೆಸ್ 120 ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಫೈನಲ್: ಉಳಿದ 30 ಸ್ಥಾನಗಳು ಪಕ್ಷಾಂತರಿಗಳಿಗೆ ವೇಟಿಂಗ್!
ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಡಿ: ಜಿಲ್ಲಾ ಉಸ್ತುವಾರಿ ಸಚಿವ ಅಶ್ವತ್ಥ ನಾರಾಯಣ ಮಾತನಾಡಿ, ನಾನು ರಾಮನಗರ ಜಿಲ್ಲೆಗೆ ಮಾಗಡಿ ತಾಲೂಕಿಗೆ ಸೇರಿದವನು. ಈ ಜಿಲ್ಲೆಯಲ್ಲಿ ನಮ್ಮ ಸರ್ಕಾರದ ಒಬ್ಬ ಪ್ರತಿನಿಧಿ ಇರಲಿಲ್ಲ. ಹೀಗಾಗಿ ನನಗೆ ಜಿಲ್ಲೆಯ ಉಸ್ತುವಾರಿ ನೀಡಿದರು. ಜಿಲ್ಲೆಯ ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿದೆ. ಜಿಲ್ಲೆಯ ಪ್ರತಿ ಮನೆಗೆ ಕುಡಿಯುವ ನೀರು, ರಸ್ತೆಗಳ ಸಮಗ್ರ ಅಭಿವೃದ್ಧಿ, ಆರೋಗ್ಯ ಕ್ಷೇತ್ರದಲ್ಲಿ ಕ್ರಾಂತಿ ಮಾಡಿದ್ದೇವೆ. ಬಿಡದಿ ಅಭಿವೃದ್ಧಿಗಾಗಿಯೇ 100 ಕೋಟಿ ನೀಡಲಾಗಿದೆ. ನಮ್ಮ ರಾಮನಗರ ಮತ್ತಷ್ಟುಅಭಿವೃದ್ಧಿ ಆಗಬೇಕಿದೆ. ಇದಕ್ಕೆ ನೀವೆಲ್ಲ ಶಕ್ತಿ ತುಂಬಬೇಕು. ನಮಗೆ ಬಿಜೆಪಿ ಅಭ್ಯರ್ಥಿಗಳನ್ನು ಶಾಸಕರನ್ನಾಗಿ ಮಾಡಿಕೊಡಿ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.