ರಾಹುಲ್‌ ಕಾಲಿಟ್ಟಲ್ಲೆಲ್ಲಾ ಕಾಂಗ್ರೆಸ್‌ ಧೂಳಿಪಟ: ಕಟೀಲ್‌

Published : Nov 04, 2022, 09:20 AM IST
ರಾಹುಲ್‌ ಕಾಲಿಟ್ಟಲ್ಲೆಲ್ಲಾ ಕಾಂಗ್ರೆಸ್‌ ಧೂಳಿಪಟ: ಕಟೀಲ್‌

ಸಾರಾಂಶ

ರಾಹುಲ್‌ ಇಲ್ಲಿ ಪ್ರಯತ್ನ ಮಾಡುವುದಕ್ಕಿಂತ ಅಮೇಥಿಯಲ್ಲಿ ಸ್ವಲ್ಪ ಪ್ರಯತ್ನ ಮಾಡೋದು ಒಳ್ಳೆಯದು. ಅದರಿಂದ ಅವರ ಕುರ್ಚಿ ಇನ್ನಷ್ಟಾದರೂ ಗಟ್ಟಿಯಾಗುತ್ತದೆ: ಕಟೀಲ್‌

ಹಾಸನ(ನ.04): ರಾಹುಲ್‌ ಗಾಂ​ಧಿ ಅವರು ಕಾಲಿಟ್ಟಕಡೆಯಲ್ಲೆಲ್ಲಾ ಕಾಂಗ್ರೆಸ್‌ ಪಕ್ಷ ಸೋಲು ಅನುಭವಿಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ವ್ಯಂಗ್ಯವಾಡಿದ್ದಾರೆ.

ಭಾರತ್‌ ಜೋಡೋ ಯಾತ್ರೆಯಿಂದ ಕರ್ನಾಟಕದಲ್ಲಿ 130-150 ಸೀಟ್‌ ಗೆಲ್ಲುತ್ತೇವೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಕಟೀಲ್‌, ಕೊಳ್ಳೆಗಾಲದಿಂದ ಯಾತ್ರೆ ಪ್ರಾರಂಭ ಮಾಡಿದರು. ಅಲ್ಲಿ ಏನೂ ಪರಿಣಾಮ ಆಗಲಿಲ್ಲ. ವಿಜಯಪುರದಲ್ಲಿ ನಗರ ಪಾಲಿಕೆಯನ್ನು ಬಿಜೆಪಿ ಹಿಡಿದಿದೆ. ಮೊನ್ನೆ ನಡೆದಿರುವ ಎಲ್ಲಾ ಚುನಾವಣೆಗಳಲ್ಲಿ ಎಲ್ಲಾ ಫಲಿತಾಂಶ ಬಿಜೆಪಿ ಪರವಾಗಿಯೇ ಇದೆ. ರಾಹುಲ್‌ ಕಾಲಿಟ್ಟಕಡೆಯಲ್ಲೆಲ್ಲಾ ಕಾಂಗ್ರೆಸ್‌ ಸೋಲುತ್ತಿದೆ ಅಂತ ತಿಳಿಸಿದ್ದಾರೆ. 

ತಾಯಿ-ಮಗ ಇಬ್ಬರೂ ಎಣ್ಣೆ ಹೊಡೆದು ಮಾತನಾಡ್ತಾರೆ: ಭವಾನಿ, ಪ್ರಜ್ವಲ್‌ ರೇವಣ್ಣ ವಿರುದ್ಧ ಪ್ರೀತಂಗೌಡ ವಾಗ್ದಾಳಿ

ರಾಹುಲ್‌ ಇಲ್ಲಿ ಪ್ರಯತ್ನ ಮಾಡುವುದಕ್ಕಿಂತ ಅಮೇಥಿಯಲ್ಲಿ ಸ್ವಲ್ಪ ಪ್ರಯತ್ನ ಮಾಡೋದು ಒಳ್ಳೆಯದು. ಅದರಿಂದ ಅವರ ಕುರ್ಚಿ ಇನ್ನಷ್ಟಾದರೂ ಗಟ್ಟಿಯಾಗುತ್ತದೆ. ಕರ್ನಾಟಕದಲ್ಲಿ ಅವರಿಗೆ ಏನೂ ಲಾಭವಿಲ್ಲ. ಇದು ಸಿದ್ದರಾಮಯ್ಯಗೂ ಗೊತ್ತಿದೆ. ಸುಮ್ಮನೆ ಸುದ್ದಿಯಲ್ಲಿರಬೇಕೆಂದು ಸಿದ್ದರಾಮಯ್ಯ ಏನೇನೋ ಹೇಳಿಕೆ ಕೊಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ