
ಮಂಗಳೂರು, (ಜ.15): ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಬಹಿರಂಗವಾಗಿಯೇ ಹೇಳಿಕೆ ಕೊಡುತ್ತಿರುವ ಶಾಸಕರುಗಳಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿಕೆ ಪರೋಕ್ಷ ಎಚ್ಚರಿಕೆ ಕೊಟ್ಟಿದ್ದಾರೆ.
ಸಚಿವ ಸಂಪುಟ ವಿಸ್ತರಣೆ ಬಳಿಕ ಬಿಜೆಪಿಯ ಕೆಲವರು ಅಸಮಾಧಾನ ಹೊರಹಾಕುತ್ತಿರುವ ಹಿನ್ನೆಲೆ ಮಂಗಳೂರಿನಲ್ಲಿ ಮಾತನಾಡಿದ ಅವರು, ಯಾವುದೇ ಅಸಮಾಧಾನಗಳಿದ್ದರೆ, ಪಕ್ಷದ ಹೈಕಮಾಂಡ್ ಗೆ ಹೇಳಬಹುದು. ಮಾರ್ಗದಲ್ಲಿ ನಿಂತು ಮಾತನಾಡೋದು ಪಕ್ಷದಲ್ಲಿ ಅಶಿಸ್ತು ಎನಿಸಿಕೊಳ್ಳುತ್ತದೆ. ಮೇಲಿನವರು ಎಲ್ಲಾ ಗಮನಿಸುತ್ತಿದ್ದಾರೆ ಎಂದರು.
ಯತ್ನಾಳ್ಗೆ ಬಿಗ್ ಶಾಕ್ ಕೊಟ್ಟ ಬಿಎಸ್ವೈ, ನನಗೇನಾದ್ರೂ ಆದ್ರೆ ಸರ್ಕಾರವೇ ಹೊಣೆ ಎಂದ ಶಾಸಕ
ಪಾರ್ಟಿಯ ನಿಯಂತ್ರಣದಲ್ಲಿ ಮಾತನಾಡಬೇಕು, ಮಾರ್ಗದಲ್ಲಿ ನಿಂತು ಅಪಸ್ವರ ತೆಗೆಯೋ ಅವಶ್ಯಕತೆ ಇಲ್ಲ. ಯಾರೋ ಒಬ್ಬರು ಸಚಿವ ಸ್ಥಾನ ಸಿಗದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದರೆ, ಅದು ನೋವು ಮತ್ತು ಭಾವನೆ ಅಷ್ಟೆ. ಅದನ್ನು ಮಾತನಾಡೋ ರೀತಿಯಲ್ಲಿ ಮಾತನಾಡಿ, ತೋರ್ಪಡಿಸುವ ರೀತಿಯಲ್ಲಿ ತೋರ್ಪಡಿಸಿ ಎಂದು ಖಡಕ್ ಸಂದೇಶ ರವಾನಿಸಿದರು.
ಯತ್ನಾಳ್ ಬಗ್ಗೆ ಕೇಂದ್ರದ ಶಿಸ್ತು ಸಮಿತಿ ಗಮನಕ್ಕೆ ತರಲಾಗಿದೆ. ಸಿ. ಡಿ ಬಗ್ಗೆ ಮುಖ್ಯಮಂತ್ರಿಗಳೇ ತೋರಿಸಿ ಅಂದಿದ್ದಾರೆ, ತೋರಿಸಲಿ, ಬಾಯಿಗೆ ಬಂದ ಹಾಗೆ ಮಾತನಾಡುವುದು ಸರಿಯಲ್ಲ. ನಮ್ಮ ಪಕ್ಷದ ವಿಚಾರಗಳು ಸಿದ್ದರಾಮಯ್ಯನವರಿಗೆ ಅಗತ್ಯವಿಲ್ಲ ಎಂದು ಕಿಡಿಕಾರಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.