
ಬೆಂಗಳೂರು, (ಅ.14); ಬಿಎಸ್ವೈ ಹಾಗೂ ನಳೀನ್ ಕುಮಾರ್ ಕಟೀಲ್ ನಡುವೆ ಎಲ್ಲವೂ ಸರಿ ಇಲ್ಲ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ.
ಬಿ.ಎಸ್. ಯಡಿಯೂರಪ್ಪ ಅವರನ್ನುಸೈಡ್ ಲೈನ್ ಮಾಡಲು ಎಲ್ಲಾ ರೀತಿ ಪ್ರಯತ್ನಗಳು ನಡೆಯುತ್ತಿವೆ ಎನ್ನುವ ಬಿಎಸ್ವೈ ಬೆಂಬಲಿಗರ ಮಾತುಗಳು ಎಲ್ಲೋ ಒಂದು ಕಡೆ ನಿಜವೇನೋ ಅನ್ನಿಸುತ್ತಿವೆ. ಯಾಕಂದ್ರೆ ಯಡಿಯೂರಪ್ಪ ಅವರನ್ನು ಹೈಕಮಾಂಡ್ ಮೊದಲಿನ ರೀತಿಯಲ್ಲಿ ಟ್ರೀಟ್ ಮಾಡುತ್ತಿಲ್ಲ.
ಬಿಜೆಪಿ ಕಚೇರಿಗೆ ಲಿಂಗಾಯತರಿಗೆ ಪ್ರವೇಶ ನಿರಾಕರಣೆ ಆರೋಪ
ಇದಕ್ಕೆ ಪೂರಕವೆಂಬಂತೆ ಮೂವರು ಡಿಸಿಎಂಗಳನ್ನು ಮಾಡಿದ್ದು ಸೇರಿದಂತೆ ರಾಜ್ಯ ಬಿಜೆಪಿ ಘಟಕದಲ್ಲಿ ಪದಾಧಿಕಾರಿಗಳಲ್ಲಿ ಬದಲಾವಣೆ ಮಾಡಿದೆ. ಅಷ್ಟೇ ಅಲ್ಲದೇ ನಿಗಮ ಮಂಡಳಿ ನೇಮಕ ವಿಚಾರದಲ್ಲಿ ಇತ್ತೀಚೆಗೆ ನಡೆದ ಬಿಜೆಪಿ ಸಭೆಯಲ್ಲಿ ಬಿಎಸ್ವೈ ಹಾಗೂ ನಳೀನ್ ಕುಮಾರ್ ಕಟೀಲ್ ನಡುವೆ ವಾಗ್ವಾದಗಳು ನಡೆದಿವೆ ಎನ್ನುವುದನ್ನು ಇನ್ಸೈಡ್ ಮೂಲಗಳು ತಿಳಿಸಿವೆ.
ಇದೀಗ ಮಲ್ಲೇಶ್ವರಂ ನಲ್ಲಿರುವ ಬಿಜೆಪಿ ಕೇಂದ್ರ ಕಚೇರಿ ಜಗನ್ನಾಥ ಭವನದಿಂದ ಬಿಎಸ್ವೈ ಬೆಂಬಲಿಗನ ಮೇಲೆ ಹಲ್ಲೆ ನಡೆಸಿ ಕೊರಳ ಪಟ್ಟಿ ಹಿಡಿದು ಕಚೇರಿಯಿಂದಲೇ ಹೊರ ಹಾಕಿರುವ ಘಟನೆ ಇದೀಗ ತಡವಾಗಿ ಬೆಳಕಿಗೆ ಬಂದಿದೆ.
ಕಳೆದ ವಾರ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಕೆಲಸ ಮಾಡುವ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಬೆಂಬಲಿಗ ಕಾರ್ಯಕರ್ತರು ಹಾಗೂ ಮುರಳೀಧರ್ ರಾವ್ ಅವರ ಸಿಬ್ಬಂದಿಗಳ ನಡುವೆ ಕ್ಷುಲ್ಲಕ ಕಾರಣಕ್ಕೆ ಕಿತ್ತಾಟ ಶುರುವಾಗಿದ್ದು, ಅದು ತಾರಕಕ್ಕೇರಿದೆ.
ಕೊನೆಗೆ ರಾಜ್ಯದ ಪ್ರಮುಖ ಬಿಜೆಪಿ ನಾಯಕರ ಎದುರೇ ಬಿಎಸ್ವೈ ಬೆಂಬಲಿಗ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿರುವ ಮುರಳೀಧರ್ ರಾವ್ ಸಿಬ್ಬಂದಿಗಳು ಆತನಿಗೆ ಕಪಾಳಮೋಕ್ಷ ಮಾಡಿ ಮತ್ತೆ ಕಚೇರಿಗೆ ಬರದಂತೆ ಧಮಕಿ ಹಾಕಿ ಕಳುಹಿಸಿದ್ದಾರೆ ಎಂದು ತಿಳಿದುಬಂದಿದೆ.
ಇದಲ್ಲದೆ, ಬಿಜೆಪಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಅಡುಗೆ ಭಟ್ಟ, ಕಂಪ್ಯೂಟರ್ ಅಪರೇಟರ್, ಪೋಟೋಗ್ರಾಫರ್, ವಿಡಿಯೋಗ್ರಾಫರ್, ಕಚೇರಿ ಸೂಪರ್ ವೈಸರ್, ರಿಸೆಪ್ಷನಿಸ್ಟ್ ಸೇರಿದಂತೆ ಯಡಿಯೂರಪ್ಪ ಬೆಂಬಲಿಗರಾದ ಒಟ್ಟು 9 ನೌಕರರಿಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಟೀಮ್ ಗೇಟ್ ಪಾಸ್ ನೀಡಿದೆ.
ಸಿಎಂ ಬಿಎಸ್ವೈ ಮೇಲಿನ ಸಿಟ್ಟಿನಿಂದಾಗಿಯೇ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದವರನ್ನು ಕೆಲಸದಿಂದ ವಜಾ ಮಾಡಿದ್ದಾರೆ ಎನ್ನುವ ಆರೋಪಗಳು ಕೇಳಿಬರುತ್ತಿವೆ.
ಅಕ್ಟೋಬರ್ 14ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ:
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.