ಶಾಸಕರು ಸಚಿವ ಸ್ಥಾನ ಅಪೇಕ್ಷೆ ಪಡೋದ್ರಲ್ಲಿ ಯಾವುದೇ ತಪ್ಪಿಲ್ಲ: ಕಟೀಲ್‌

Suvarna News   | Asianet News
Published : Nov 28, 2020, 01:59 PM IST
ಶಾಸಕರು ಸಚಿವ ಸ್ಥಾನ ಅಪೇಕ್ಷೆ ಪಡೋದ್ರಲ್ಲಿ ಯಾವುದೇ ತಪ್ಪಿಲ್ಲ: ಕಟೀಲ್‌

ಸಾರಾಂಶ

ರಾಜಕಾರಣದಲ್ಲಿ ಅಪೇಕ್ಷೆ ಮತ್ತು ಗುರಿ ಇರಲೇ ಬೇಕು| ಸಚಿವ ಸ್ಥಾನ ಕೊಡೋದು ಮುಖ್ಯಮಂತ್ರಿ ಮತ್ತು ರಾಷ್ಟ್ರೀಯ ನಾಯಕರಿಗೆ ಬಿಟ್ಟಿದ್ದು| ನಮ್ಮಲ್ಲಿ ಯಾವುದೇ ನಾಯಕತ್ವದ ಚರ್ಚೆಗಳು ಆಗಿಲ್ಲ| ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಯಾವುದೇ ರೀತಿಯ ಚರ್ಚೆಯಾಗಿಲ್ಲ| ನಾಯಕತ್ವ ಬದಲಾವಣೆ ಬಗ್ಗೆ ಯಾರೂ ಪ್ರಶ್ನೆ ಎತ್ತಿಲ್ಲ ಎಂದ ನಳಿನ್‌ ಕುಮಾರ್‌ ಕಟೀಲ್‌|   

ಮಂಗಳೂರು(ನ.28): ಶಾಸಕರ ಮಧ್ಯೆ ಯಾವುದೇ ಗೊಂದಲ ಇಲ್ಲ, ಸಚಿವ ಸ್ಥಾನದ ಬಗ್ಗೆ ಗೊಂದಲಗಳಿಲ್ಲ. ಶಾಸಕರು ಸಚಿವ ಸ್ಥಾನಕ್ಕೆ ಅಪೇಕ್ಷೆ ಪಡೋದು ತಪ್ಪಲ್ಲ. ಅದನ್ನ ನಿರ್ಧರಿಸಲು ಸಿಎಂ ಬಿ.ಎಸ್‌. ಯಡಿಯೂರಪ್ಪನವರು ಸ್ವತಂತ್ರರಾಗಿದ್ದಾರೆ. ಅಪೇಕ್ಷಿತರನ್ನು ಮಂತ್ರಿ ಮಾಡೋದು ಮುಖ್ಯಮಂತ್ರಿಗಳ ಪರಮಾಧಿಕಾರವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. 

ಇಂದು(ಶನಿವಾರ) ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜಕಾರಣದಲ್ಲಿ ಅಪೇಕ್ಷೆ ಮತ್ತು ಗುರಿ ಇರಲೇ ಬೇಕು. ಸಚಿವ ಸ್ಥಾನ ಕೊಡೋದು ಮುಖ್ಯಮಂತ್ರಿ ಮತ್ತು ರಾಷ್ಟ್ರೀಯ ನಾಯಕರಿಗೆ ಬಿಟ್ಟಿದ್ದು. ನಮ್ಮಲ್ಲಿ ಯಾವುದೇ ನಾಯಕತ್ವದ ಚರ್ಚೆಗಳು ಆಗಿಲ್ಲ. ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಯಾವುದೇ ರೀತಿಯ ಚರ್ಚೆಯಾಗಿಲ್ಲ. ನಾಯಕತ್ವ ಬದಲಾವಣೆ ಬಗ್ಗೆ ಯಾರೂ ಪ್ರಶ್ನೆ ಎತ್ತಿಲ್ಲ ಎಂದು ತಿಳಿಸಿದ್ದಾರೆ. 

ನಿಮ್ಮನ್ನ ನಂಬಿದ್ರೆ ಏನೂ ಸಿಗಲ್ಲ! ಕೈ ಕೊಟ್ಟು ಬಂದ ವಲಸಿಗ ಶಾಸಕರಲ್ಲಿ ಅತೃಪ್ತಿ ಸ್ಫೋಟ!

ಕಳೆದ 4 ತಿಂಗಳಿನಿಂದ ನಾಯಕತ್ವದ ಬದಲಾವಣೆ ಇಲ್ಲ ಅಂತ ಸ್ಪಷ್ಟಪಡಿಸುತ್ತಿದ್ದೇನೆ. ದೆಹಲಿ ಮಟ್ಟದಲ್ಲೂ ಯಾರೂ ಈ ಬಗ್ಗೆ ಚರ್ಚೆ ಮಾಡಿಲ್ಲ. ನಮ್ಮ ಶಾಸಕರಾಗಲೀ, ಸಂಸದರಾಗಲೀ ಯಾರಾದರೂ ಇದನ್ನ ಹೇಳಿದ್ದಾರಾ ಎಂದು ಮಾಧ್ಯಮದವರಿಗೆ ಕಟೀಲ್‌ ಪ್ರಶ್ನಸಿದ್ದಾರೆ. 
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಧರ್ಮಸ್ಥಳ ಬುರುಡೆ ಕೇಸ್‌ ಹಿಂದೆ ಅರ್ಬನ್‌ ನಕ್ಸಲ್‌: ಬಿಜೆಪಿ ನಾಯಕರ ತೀವ್ರ ಆರೋಪ
ಬಿಜೆಪಿ ಬುರುಡೆ ಗ್ಯಾಂಗಿಂದ ಗ್ಯಾರಂಟಿ ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ