ಮೋದಿ ವಿಶ್ವ ನಾಯಕ, ಜೆಡಿಎಸ್ ಜೊತೆ ಯಾಕೆ ಮೈತ್ರಿ ಮಾಡಿಕೊಂಡಿದ್ದಾರೆ: ಸಚಿವ ಕೆ.ವೆಂಕಟೇಶ್

Published : Apr 13, 2024, 05:48 PM IST
ಮೋದಿ ವಿಶ್ವ ನಾಯಕ, ಜೆಡಿಎಸ್ ಜೊತೆ ಯಾಕೆ ಮೈತ್ರಿ ಮಾಡಿಕೊಂಡಿದ್ದಾರೆ: ಸಚಿವ ಕೆ.ವೆಂಕಟೇಶ್

ಸಾರಾಂಶ

ಡಿ.ಕೆ.ಸುರೇಶ್ ಒಬ್ಬರೇ ನಮ್ಮ ರಾಜ್ಯದ ಪರವಾಗಿ ಮಾತನಾಡುತ್ತಿದ್ದಾರೆ. ಬೇರೆ ಯಾವ ಸಂಸದರು ಮಾತನಾಡುತ್ತಿಲ್ಲ. ಕೊಡಗು ಮೈಸೂರು ಜಿಲ್ಲೆಯಲ್ಲಿ ನಮ್ಮ ಅಭ್ಯರ್ಥಿಯನ್ನ ಗೆಲ್ಲಿಸುವ ಅನಿರ್ವಾತೆ ನಮ್ಮ ಮೇಲಿದೆ ಎಂದು ಹುಣಸೂರಿನಲ್ಲಿ ನಡೆಯುತ್ತಿರುವ ಸಮಾವೇಶದಲ್ಲಿ ಸಚಿವ ಕೆ.ವೆಂಕಟೇಶ್ ಹೇಳಿದರು. 

ಮೈಸೂರು (ಏ.13): ಡಿ.ಕೆ.ಸುರೇಶ್ ಒಬ್ಬರೇ ನಮ್ಮ ರಾಜ್ಯದ ಪರವಾಗಿ ಮಾತನಾಡುತ್ತಿದ್ದಾರೆ. ಬೇರೆ ಯಾವ ಸಂಸದರು ಮಾತನಾಡುತ್ತಿಲ್ಲ. ಕೊಡಗು ಮೈಸೂರು ಜಿಲ್ಲೆಯಲ್ಲಿ ನಮ್ಮ ಅಭ್ಯರ್ಥಿಯನ್ನ ಗೆಲ್ಲಿಸುವ ಅನಿರ್ವಾತೆ ನಮ್ಮ ಮೇಲಿದೆ ಎಂದು ಹುಣಸೂರಿನಲ್ಲಿ ನಡೆಯುತ್ತಿರುವ ಸಮಾವೇಶದಲ್ಲಿ ಸಚಿವ ಕೆ.ವೆಂಕಟೇಶ್ ಹೇಳಿದರು. ಮಂಜುನಾಥ್ ಚೆನ್ನಾಗಿ ನೋಡಿಕೊಳ್ಳುವ ಜವಾಬ್ದಾರಿ ನಮ್ಮದು. ಬಿಜೆಪಿ ಜೆಡಿಎಸ್ ಒಂದಾಗಿದ್ದಾರೆ. ಯದುವೀರ್ ಗೆದ್ದಾಗಿದೆ ಅಂದುಕೊಂಡಿದ್ದಾರೆ. ಎಲ್ಲರೂ ನಮ್ಮನ್ನು ಕೇಳುತ್ತಾರೆ. ನಾನು ಸಹ ಹೇಳುತ್ತೇನೆ ನಮ್ಮ ಅಭ್ಯರ್ಥಿ ಗೆದ್ದೆ ಗೆಲ್ಲುತ್ತಾರೆ ಎಂದರು.

ಮೋದಿ ವಿಶ್ವನಾಯಕರು. ವಿಶ್ವ ನಾಯಕರು ಜೆಡಿಎಸ್ ಜೊತೆ ಯಾಕೆ ಮೈತ್ರಿ ಮಾಡಿಕೊಂಡಿದ್ದಾರೆ. ಜೆಡಿಎಸ್ ಪಕ್ಷ ಇಡೀ ರಾಜ್ಯದಲ್ಲಿದ್ಯ? ಬರಿ ಮೂರು ಜಿಲ್ಲೆಯಲ್ಲಿ ಮಾತ್ರ ಇದೆ. ಬಿಜೆಪಿಯವರು ಜೆಡಿಎಸ್ ಗೆ ಕೇವಲ ಮೂರು ಸೀಟ್ ಕೊಟ್ಟಿದ್ದಾರೆ. ಜೆಡಿಎಸ್ ನವರು ಅವಕಾಶವಾದಿಗಳು. ಡಾ.ಮಂಜುನಾಥ್ ಅವರನ್ನ ಜೆಡಿಎಸ್ ನಿಂದಲೇ ಟಿಕೆಟ್ ಕೊಡಬಹುದಿತ್ತು. ಜೆಡಿಎಸ್ ಪಕ್ಷ ಅಸ್ತಿತ್ವಕ್ಕೆ ಹೋರಾಟ ಮಾಡುತ್ತಿದ್ದಾರೆ. ಮೈತ್ರಿ ಕಳ್ಳಬೆರಿಕೆ, ಅವರನ್ನು ಬೆಂಬಲಬೇಡಿ. ಮೈಸೂರು ಕ್ಷೇತ್ರವನ್ನ ಸೋತರೆ ಸಿಎಂಗೆ ಅವಮಾನ ಆಗುತ್ತೆ. ಕೆಟ್ಟ ಮೇಸೆಜ್ ಹೋಗುತ್ತೆ. ಸಿಎಂ ಮೈಸೂರಿನವರೇ ಆಗಿದ್ದಾರೆ ಹೀಗಾಗಿ ಮೈಸೂರು ಕ್ಷೇತ್ರವನ್ನ ಗೆಲ್ಲಿಸಿ ಎಂದು ಹೇಳಿದರು.

ಹುಣಸೂರು ಕ್ಷೇತ್ರದಲ್ಲಿ 50 ಸಾವಿರ ಲೀಡ್ ಕೊಡ್ಸಿ ಮಂಜುನಾಥ್ ಎಂಎಲ್ಸಿ ಮಾಡುತ್ತೇವೆ. ವೇದಿಕೆ ಮೇಲೆಯೇ ಸಚಿವ ಕೆ.ವೆಂಕಟೇಶ್ ಓಪನ್ ಆಫರ್ ಕೊಟ್ಟರು. ಎಂಎಲ್ಸ್ ಮಾಡಲು ಮುಂದೆ ಟೈಮ್ ಬರಬೇಕು ತಡಿಯಪ್ಪ. ಈಗ ಕೂಗಿದರೇ ಎಂಎಲ್ಸಿ ಆಗಿಲ್ಲ. ಹುಣಸೂರು ಕ್ಷೇತ್ರದಿಂದ 50 ಸಾವಿರ ಲೀಡ್ ಕೊಡ್ಸಿ ಮಂಜುನಾಥ್‌ಗೆ ಎಂಎಲ್ಸಿ ಮಾಡುತ್ತೇವೆ. ನೀವು 50 ಸಾವಿರ ಲೀಡ್ ಕೊಡ್ಸಿ ಅಂಥಾನೇ ನಾನು ಕೇಳುತ್ತಿರುವುದು. ಇಷ್ಟು ಜನ ಸೇರಿದ್ದೀರಿ, ಆದ್ರೂ ಮಂಜಾ ಯಾಕೆ ಸೋತಾ ಅನ್ನೊದೇ ನನಗೆ ಅನುಮಾನ ಎಂದರು.

ಲೋಕ ಕದನ ಹೊತ್ತಲ್ಲೆ ನೂತನ ಪಕ್ಷ ಸ್ಥಾಪಿಸುವ ಸೂಚನೆ ನೀಡಿದ ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ!

ಮುಖ್ಯಮಂತ್ರಿಗಳ ತವರು ಜಿಲ್ಲೆ ಇದೆ. ಈಗಾಗಿ ಗೆಲ್ಲಲೇ ಬೇಕಾದ ಅನಿವಾರ್ಯತೆ ಇದೆ. ನಮ್ಮ ಅಭ್ಯರ್ಥಿ ಜನಸಾಮಾನ್ಯ ಅಭ್ಯರ್ಥಿ. ಯಾವುದೇ ಅರಮನೆಯ ಅಭ್ಯರ್ಥಿಯಲ್ಲ. ಜನರ ಬಗ್ಗೆ ಚೆನ್ನಾಗಿ ಮಾತನಾಡುತ್ತಾರೆ ಎಂದು ನಮ್ಮ ಅಭ್ಯರ್ಥಿ ನಿಲ್ಲಿಸಿದ್ದೇವೆ. ಬಿಜೆಪಿಯಿಂದ ಗೆದ್ದು ಹೋದವರು ಕೇವಲ ಸಹಿ ಹಾಕಿ ಕುಳಿತುಕೊಳ್ಳುತ್ತಾರೆ. ಅದಕ್ಕಾಗಿ ನಾವು ಅವರನ್ನು ಕಳುಹಿಸಿರೋದು ಎಂದು ಹೇಳಿದರು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿದ್ಧರಾಮಯ್ಯ ಮಾತು ಎತ್ತಿದ್ರೆ ಸಾಬ್ರು ಸಾಬ್ರು ಅಂತ ಜಪ ಮಾಡ್ತಾರೆ: ಶಾಸಕ ಯತ್ನಾಳ್ ವ್ಯಂಗ್ಯ!
ನಾನು ಹತ್ತು ಲಕ್ಷದ ವಾಚಾದ್ರೂ ಕಟ್ಟುತ್ತೇನೆ, ಅದು ನನ್ನ ಆಸ್ತಿ: ಬಿಜೆಪಿಗೆ ತಿರುಗೇಟು ಕೊಟ್ಟ ಡಿಕೆಶಿ