
ನವದೆಹಲಿ[ಮಾ.11]: ಅನಾಮಧೇಯ ಮೂಲಗಳಿಂದ ರಾಜಕೀಯ ಪಕ್ಷಗಳಿಗೆ ಸಂದಾಯವಾಗುವ ದೇಣಿಗೆ ಬಗ್ಗೆ ಆಕ್ಷೇಪಗಳ ಇರುವ ಬೆನ್ನಲ್ಲೇ, 2004-05ನೇ ಸಾಲಿನಿಂದ 2018-19ನೇ ಸಾಲಿನ ಅವಧಿಯಲ್ಲಿ 7 ರಾಜಕೀಯ ಪಕ್ಷಗಳು ಅನಾಮಧೇಯ ಮೂಲಗಳಿಂದ ಭರ್ಜರಿ 11234 ಕೋಟಿ ರು. ದೇಣಿಗೆ ಪಡೆದಿವೆ ಎಂಬ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ.
ಅಸೋಸಿಯೇಷನ್ ಆಫ್ ಡೆಮಾಕ್ರೆಟಿಕ್ ರಿಫಾಮ್ಸ್ರ್ (ಎಡಿಆರ್) ಸಂಸ್ಥೆ ಬಿಡುಗಡೆ ಮಾಡಿರುವ ವರದಿ ಅನ್ವಯ, ಬಿಜೆಪಿ, ಕಾಂಗ್ರೆಸ್, ಟಿಎಂಸಿ, ಸಿಪಿಎಂ,ಎನ್ಸಿಪಿ, ಬಿಎಸ್ಪಿ ಮತ್ತು ಸಿಪಿಐ ಪಕ್ಷಗಳು 11234.12 ಕೋಟಿ ರು.ದೇಣಿಗೆಯನ್ನು ಅನಾಮಧೇಯ ಮೂಲಗಳಿಂದ ಸಂಗ್ರಹಿಸಿವೆ. 20000 ರು.ಗಳಿಗಿಂತ ಕಡಿಮೆ ಮೊತ್ತದ ದೇಣಿಗೆ ನೀಡಿದವರ ಹೆಸರನ್ನು ಯಾವುದೇ ರಾಜಕೀಯ ಪಕ್ಷಗಳು ತಮ್ಮ ಲೆಕ್ಕಪತ್ರದಲ್ಲಿ ನೊಂದಾಯಿಸಿಕೊಳ್ಳಬೇಕಿಲ್ಲ ಮತ್ತು ಅದನ್ನು ಆದಾಯ ತೆರಿಗೆ ಇಲಾಖೆಗೆ ಸಲ್ಲಿಸುವ ವಾರ್ಷಿಕ ಲೆಕ್ಕಪತ್ರದಲ್ಲಿ ನಮೂದಿಸುವುದೂ ಕಡ್ಡಾಯವಲ್ಲ. ಈ ರೂಪದಲ್ಲಿ ಬಂದ ದೇಣಿಗೆಯನ್ನು ಅನಾಮಧೇಯ ಮೂಲಗಳಿಂದ ಬಂದ ಹಣ ಎಂದು ಪರಿಗಣಿಸಲಾಗುತ್ತದೆ.
7 ರಾಜಕೀಯ ಪಕ್ಷಗಳು, ಚುನಾವಣಾ ಬಾಂಡ್, ಕೂಪನ್ಗಳ ಮಾರಾಟ, ಪರಿಹಾರ ನಿಧಿ, ಇತರೆ ಆದಾಯ, ಸ್ವಯಂಪ್ರೇರಿತ ದೇಣಿಗೆ, ಮೋರ್ಚಾಗಳ ಮೂಲಕ ರಾಜಕೀಯ ಪಕ್ಷಗಳು ದೇಣಿಗೆಯನ್ನು ಸಂಗ್ರಹಿಸಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.