ಪ್ರಶಾಂತ್ ಕಿಶೋರ್ ಹೊಸ ದಾಳ: ಕಾಂಗ್ರೆಸ್‌ಗೆ ಶಾಕ್!

Published : Jun 04, 2020, 12:31 PM ISTUpdated : Jun 04, 2020, 02:17 PM IST
ಪ್ರಶಾಂತ್ ಕಿಶೋರ್ ಹೊಸ ದಾಳ: ಕಾಂಗ್ರೆಸ್‌ಗೆ ಶಾಕ್!

ಸಾರಾಂಶ

ಕಾಂಗ್ರೆಸ್‌ ತೊರೆದು ಆಪ್‌ಗೆ ಸಿಧು ಶೀಘ್ರ?| ಸಿಧು ಕರೆತರಲು ಪ್ರಶಾಂತ್‌ ಕಿಶೋರ್‌ ಯತ್ನ| ‘ನನ್ನನ್ನು ಸಿಎಂ ಅಭ್ಯರ್ಥಿ ಮಾಡುತ್ತೀರಾ’ ಎಂದು ಕೇಳಿರುವ ಸಿಧು

ನವದೆಹಲಿ(ಜೂ.04): ಬಿಜೆಪಿ ತೊರೆದು ಕಾಂಗ್ರೆಸ್‌ ಸೇರಿ ಪಂಜಾಬ್‌ನಲ್ಲಿ ಮಂತ್ರಿಯಾಗಿದ್ದ ಮಾಜಿ ಕ್ರಿಕೆಟಿಗ ನವಜೋತ್‌ ಸಿಂಗ್‌ ಸಿಧು, ಮತ್ತೆ ಪಕ್ಷಾಂತರ ಮಾಡುವ ಸಾಧ್ಯತೆ ಇದೆ. ಅವರು ಆಮ್‌ ಆದ್ಮಿ ಪಕ್ಷ (ಆಪ್‌) ಸೇರುವ ಸಾಧ್ಯತೆ ಇದೆ.

2022ರಲ್ಲಿ ಪಂಜಾಬ್‌ ವಿಧಾನಸಭೆ ಚುನಾವಣೆ ನಡೆಯಲಿದ್ದು, ಅದಕ್ಕೂ ಮುನ್ನ ಅವರು ಆಪ್‌ ಸೇರುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ. ಆಪ್‌ ಪರ ಚುನಾವಣಾ ತಂತ್ರಗಾರನಾಗಿ ಕೆಲಸ ಮಾಡುತ್ತಿರುವ ಪ್ರಶಾಂತ್‌ ಕಿಶೋರ್‌ ಅವರು ತೆರೆಮರೆಯಲ್ಲಿ ಸಿಧು ಅವರನ್ನು ಆಪ್‌ಗೆ ಕರೆತರುವ ಯತ್ನ ನಡೆಸುತ್ತಿದ್ದಾರೆ. ಮಂಗಳವಾರ ಇಬ್ಬರೂ ವಾಟ್ಸಪ್‌ ಕಾಲ್‌ ಮೂಲಕ ಮಾತುಕತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಈ ವೇಳೆ, ‘ಆಪ್‌ಗೆ ಬಂದರೆ ನನ್ನ ಪಾತ್ರವೇನು ಎಂಬುದನ್ನು ಸ್ಪಷ್ಟಪಡಿಸಿ. ನನ್ನನ್ನು ಮುಖ್ಯಮಂತ್ರಿ ಅಭ್ಯರ್ಥಿ ಮಾಡುತ್ತೀರಾ? ನಾನು ಹೇಳಿದ ಎಷ್ಟುಜನರಿಗೆ ಟಿಕೆಟ್‌ ಕೊಡುತ್ತೀರಿ’ ಎಂಬ ಪ್ರಶ್ನೆಗಳನ್ನು ಸಿಧು ಎಸೆದರು ಎಂದು ಮೂಲಗಳು ತಿಳಿಸಿವೆ.

ಆದರೆ ಮಾತುಕತೆ ಬಗ್ಗೆ ತಮಗೆ ಗೊತ್ತಿಲ್ಲ. ಸಿಧು ಬಂದರೆ ಸ್ವಾಗತ ಎಂದು ಆಪ್‌ನ ಪಂಜಾಬ್‌ ಪ್ರಭಾರಿ ಜರ್ನೈಲ್‌ ಸಿಂಗ್‌ ಸ್ಪಷ್ಟಪಡಿಸಿದ್ದಾರೆ.

ಮುಖ್ಯಮಂತ್ರಿ ಅಮರೀಂದರ್‌ ಸಿಂಗ್‌ ಜತೆ ಸಿಧು ಉತ್ತಮ ಬಾಂಧವ್ಯ ಹೊಂದಿಲ್ಲ. ಹೀಗಾಗಿ ಕಳೆದ ವರ್ಷವೇ ಸಿಧು ಮಂತ್ರಿ ಸ್ಥಾನ ಬಿಟ್ಟಿದ್ದರು. ಈಗ ಪಕ್ಷಾಂತರ ಯೋಚನೆಯಲ್ಲಿದ್ದಾರೆ ಎನ್ನಲಾಗಿದೆ.

News In 100 Seconds: ಈ ಕ್ಷಣದ ಪ್ರಮುಖ ಸುದ್ದಿಗಳು

"

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಯಾವುದೇ ಕ್ಷಣದಲ್ಲಾದರೂ ಡಿ.ಕೆ. ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಉದಯ ಕದಲೂರು ಓಪನ್ ಹೇಳಿಕೆ
ಎಸ್ಸಿ ಒಳ ಮೀಸಲಾತಿ ಜಾರಿ ವಿಧೇಯಕಕ್ಕೆ ಸಂಪುಟ ಅಸ್ತು: ಚಾರಿತ್ರಿಕ ಆದೇಶಕ್ಕೆ ಕಾನೂನು ಬಲ