ನಾನು ಟೈರ್ಡೂ ಆಗಿಲ್ಲ, ರಿಟೈರ್ಡೂ ಆಗಿಲ್ಲ: ಅಜಿತ್‌ ಪವಾರ್‌ಗೆ ಚಿಕ್ಕಪ್ಪನ ಟಾಂಗ್‌

Published : Jul 09, 2023, 11:30 AM IST
ನಾನು ಟೈರ್ಡೂ ಆಗಿಲ್ಲ, ರಿಟೈರ್ಡೂ ಆಗಿಲ್ಲ: ಅಜಿತ್‌ ಪವಾರ್‌ಗೆ ಚಿಕ್ಕಪ್ಪನ ಟಾಂಗ್‌

ಸಾರಾಂಶ

ಅಜಿತ್‌ ಪವಾರ್‌ ತಮ್ಮ ಚಿಕ್ಕಪ್ಪನ ವಿರುದ್ಧ ಹರಿಹಾಯುವಾಗ ‘ಅವರಿಗೀಗ 83 ವರ್ಷ. ಇನ್ನೂ ಎಷ್ಟು ವರ್ಷ ರಾಜಕೀಯದಲ್ಲಿರುತ್ತಾರೆ’ ಎಂದು ಹೇಳಿದ್ದರು. ಅದಕ್ಕೆ ಶನಿವಾರ ವಿವಿಧ ಮಾಧ್ಯಮಗಳಿಗೆ ನೀಡಿದ ಸಂದರ್ಶನದಲ್ಲಿ ಮತ್ತೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದ ಶರದ್‌ ಪವಾರ್‌, ನಾನು ಟೈರ್ಡೂ ಆಗಿಲ್ಲ, ರಿಟೈರ್ಡೂ ಆಗಿಲ್ಲ’ ಎಂದು ಹೇಳಿದರು.

ಮುಂಬೈ:  ಎನ್‌ಸಿಪಿಯ ಅಜಿತ್‌ ಪವಾರ್‌ ನೇತೃತ್ವದಲ್ಲಿ ಆ ಪಕ್ಷದ ಶಾಸಕರು ಆಡಳಿತಾರೂಢ ಶಿವಸೇನೆ ಹಾಗೂ ಬಿಜೆಪಿಯ ಮೈತ್ರಿ ಸರ್ಕಾರದಲ್ಲಿ ಸೇರ್ಪಡೆಗೊಂಡ ಬಳಿಕ ಮಹಾರಾಷ್ಟ್ರದ ರಾಜಕೀಯದಲ್ಲಿ ದಿನಕ್ಕೊಂದು ಕುತೂಹಲಕರ ಬೆಳವಣಿಗೆಗಳು ನಡೆಯುತ್ತಿವೆ. ಎನ್‌ಸಿಪಿ ಮುಖ್ಯಸ್ಥ ಶರದ್‌ ಪವಾರ್‌, ‘ನಾನು ಟೈರ್ಡೂ ಆಗಿಲ್ಲ, ರಿಟೈರ್ಡೂ ಆಗಿಲ್ಲ’ (ನನಗೆ ಸುಸ್ತಾಗಿಲ್ಲ, ನಾನು ನಿವೃತ್ತಿಯನ್ನೂ ಪಡೆದಿಲ್ಲ) ಎಂದು ತೀಕ್ಷ್ಣವಾಗಿ ಹೇಳಿದ್ದಾರೆ.

ಇತ್ತೀಚೆಗೆ ಉಪ ಮುಖ್ಯಮಂತ್ರಿ ಅಜಿತ್‌ ಪವಾರ್‌ ತಮ್ಮ ಚಿಕ್ಕಪ್ಪನ ವಿರುದ್ಧ ಹರಿಹಾಯುವಾಗ ‘ಅವರಿಗೀಗ 83 ವರ್ಷ. ಇನ್ನೂ ಎಷ್ಟು ವರ್ಷ ರಾಜಕೀಯದಲ್ಲಿರುತ್ತಾರೆ’ ಎಂದು ಹೇಳಿದ್ದರು. ಅದಕ್ಕೆ ಶನಿವಾರ ವಿವಿಧ ಮಾಧ್ಯಮಗಳಿಗೆ ನೀಡಿದ ಸಂದರ್ಶನದಲ್ಲಿ ಮತ್ತೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದ ಶರದ್‌ ಪವಾರ್‌, ‘ಮೊರಾರ್ಜಿ ದೇಸಾಯಿ ಎಷ್ಟು ವರ್ಷಕ್ಕೆ ಪ್ರಧಾನಿಯಾಗಿದ್ದರು ಗೊತ್ತಾ? ನನಗೆ ಪ್ರಧಾನಿಯೂ ಆಗಬೇಕಿಲ್ಲ, ಮಂತ್ರಿಯೂ ಆಗಬೇಕಿಲ್ಲ. ಬದಲಿಗೆ ಜನರ ಸೇವೆ ಮಾಡಬೇಕಾಗಿದೆ. ನನಗಿನ್ನೂ ವಯಸ್ಸಾಗಿಲ್ಲ. ಈಗಲೂ ಕೆಲಸ ಮಾಡಬಲ್ಲೆ. ಜನರು ಬಯಸುವವರೆಗೆ ರಾಜಕೀಯದಲ್ಲಿರುತ್ತೇನೆ. ನಾನು ರಿಟೈರಾಗಬೇಕು ಎಂದು ಹೇಳಲು ಅವರು ಯಾರು ಎಂದು ಅಜಿತ್‌ ಪವಾರ್‌ಗೆ ತಿರುಗೇಟು ನೀಡಿದರು. ಜೊತೆಗೆ ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರ ಮಾತನ್ನು ನೆನೆಸಿಕೊಂಡು ‘ನಾನು ಟೈರ್ಡೂ ಆಗಿಲ್ಲ, ರಿಟೈರ್ಡೂ ಆಗಿಲ್ಲ’ ಎಂದು ಹೇಳಿದರು.

ನಾನು ಕೆಲವರನ್ನು ನಂಬಿ ತಪ್ಪು ಮಾಡಿದೆ. ಇನ್ನೆಂದು ಆ ತಪ್ಪು ಮಾಡುವುದಿಲ್ಲ ಎಂದ ಶರದ್ ಪವಾರ್, ಈ ಮೂಲಕ ತಮ್ಮ ಆಪ್ತರಾದ ಅಜಿತ್ ಪವಾರ್, ಪ್ರಫುಲ್ ಪಟೇಲ್, ಸುನೀಲ್ ತತ್ಕರೆ, ಛಗನ್ ಭುಜಬಲ್ ಕೈ ಕೊಟ್ಟಿದ್ದಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ. 

ಸಿಎಂ ಶಿಂಧೆ ರಾಜೀನಾಮೆಗೆ ಸೂಚನೆ ಹೋಗಿದೆ: ಆದಿತ್ಯ ಠಾಕ್ರೆ

ಈ ಮಧ್ಯೆ ಶಿವಸೇನೆ ಮುಖಂಡ ಆದಿತ್ಯ ಠಾಕ್ರೆ ಹೇಳಿಕೆಯೊಂದು ಸಂಚಲನ ಸೃಷ್ಟಿಸಿದೆ. ಶೀಘ್ರದಲ್ಲೇ ಸರ್ಕಾರದಲ್ಲಿ ದೊಡ್ಡ ಬದಲಾವಣೆಯಾಗುವ ಸಾಧ್ಯತೆಯಿದೆ. ಮುಖ್ಯಮಂತ್ರಿ ಶಿಂಧೆಗೆ ರಾಜೀನಾಮೆ ನೀಡುವಂತೆ ಸೂಚಿಸಲಾಗಿದೆ ಎಂದು ನನಗೆ ಮಾಹಿತಿಯಿದೆ ಶಿವಸೇನೆ ಮುಖಂಡ ಆದಿತ್ಯ ಠಾಕ್ರೆ ಹೇಳಿದ್ದಾರೆ. ಸರ್ಕಾರಕ್ಕೆ ಎನ್‌ಸಿಪಿ ಶಾಸಕರು ಬೆಂಬಲ ನೀಡಿ ಅಜಿತ್‌ ಪವಾರ್‌ ಉಪಮುಖ್ಯಮಂತ್ರಿಯಾದ ಬಳಿಕ ಬಿಜೆಪಿಯು ಶಿಂಧೆಯನ್ನು ದೂರ ಇರಿಸುತ್ತಿದೆ ಎಂದು ವರದಿಯಾಗಿತ್ತು. ಅದರ ಬೆನ್ನಲ್ಲೇ ಆದಿತ್ಯ ಠಾಕ್ರೆಯಿಂದ ಈ ಹೇಳಿಕೆ ಬಂದಿರುವುದು ಕುತೂಹಲ ಮೂಡಿಸಿದೆ.

ಬಿಜೆಪಿಗರು 75ಕ್ಕೆ ನಿವೃತ್ತಿ ಆಗ್ತಾರೆ, ನಿಮ್ದು 83 ಆಯ್ತು, ಇನಿಂಗ್ಸ್‌ ಮುಗಿಸಿ: ಶರದ್‌ ಪವಾರ್‌ಗೆ ಅಜಿತ್‌ ಟಾಂಗ್‌

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿಎಂ ಗೊಂದಲಕ್ಕೆ ಮತ್ತೆ ಬೆಂಕಿ: ಸಿದ್ದರಾಮಯ್ಯ 5 ವರ್ಷ ಸಿಎಂ, ಬದಲಾದರೆ ಡಿಕೆಶಿ ಒಬ್ರೇ ರೇಸ್‌ನಲ್ಲಿಲ್ಲ..; - ಕೆಎನ್ ರಾಜಣ್ಣ
CM-DCM ಬ್ರೇಕ್‌ಫಾಸ್ಟ್ ಮೀಟಿಂಗ್ ಬಳಿಕ ಸಿದ್ದರಾಮಯ್ಯ ಪುತ್ರ ಶಾಕಿಂಗ್ ಹೇಳಿಕೆ