
ಚಿಕ್ಕಬಳ್ಳಾಪುರ (ಜೂ.30): ನಾಡಪ್ರಭು ಕೆಂಪೇಗೌಡ ಜಯಂತಿ(Nadaprabhu kempegowda jayanti)ಯಂದು ಶನಿವಾರ ನಗರದ ಕನ್ನಡ ಭವನ(Kannada bhavan)ದಲ್ಲಿ ನಡೆದ ಗಲಭೆಗೆ ಶಾಸಕ ಪ್ರದೀಪ್ ಈಶ್ವರ್(MLA Pradeep Eshwar) ಅವರು ಕಾರಣ ಎಂದು ಆರೋಪಿಸಿ ಎನ್ಡಿಎ(NDA) ಮಖಂಡರು ಎಸ್ಪಿಗೆ ದೂರು ನೀಡಿದರು.
ನಗರ ಹೊರವಲಯದ ಎಸ್ಪಿ ಕಚೇರಿ ಬಳಿಗೆ ಸೋಮವಾರ ತೆರಳಿದ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಪಿ.ಎನ್.ಕೇಶವರೆಡ್ಡಿ ಮತ್ತು ಜೆಡಿಎಸ್ ಜಿಲ್ಲಾಧ್ಯಕ್ಷ ಮುಕ್ತ ಮುನಿಯಪ್ಪ ನೇತೃತ್ವದಲ್ಲಿ ಎನ್ಡಿಎ ಮುಖಂಡರು ಎಸ್ಪಿ ಕುಶಲ್ ಚೌಕ್ಸೆಗೆ ಲಿಖಿತ ದೂರು ನೀಡಿದರು.
ಇದನ್ನೂ ಓದಿ: ಶಾಸಕ ಪ್ರದೀಪ್ ಈಶ್ವರ್ 'ಮೀಸೆ ತಿರುವಿ, ತೊಡೆ ತಟ್ಟಿ ಪ್ರಚೋದನೆ' ಆರೋಪ: ದೂರು ದಾಖಲಿಸಿದ ಜೆಡಿಎಸ್
ಈ ವೇಳೆ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಪಿ.ಎನ್.ಕೇಶವರೆಡ್ಡಿ ಮಾತನಾಡಿ, ಶನಿವಾರ ನಗರದ ಕನ್ನಡ ಭವನದಲ್ಲಿ ಹಮ್ಮಿಕೊಂಡಿದ್ದ ನಾಡಪ್ರಭು ಕೆಂಪೇಗೌಡರ ದಿನಾಚರಣೆ ಕಾರ್ಯಕ್ರಮದಲ್ಲಿ ಅನ್ಯ ವಿಷಯಗಳಿಗೆ ಚಿಕ್ಕಬಳ್ಳಾಪುರ ಶಾಸಕರು ತಮ್ಮ ಅಧಿಕಾರ ದುರ್ಬಳಕೆ ಮಾಡಿಕೊಂಡು ಅಲ್ಲಿ ಸೇರಿದ್ದ ಯುವಕರಿಗೆ ಕಾರ್ಯಕ್ರಮವನ್ನು ವಿಫಲಗೊಳಿಸಬೇಕು ಎಂದು ಹಾಗೂ ಪ್ರಚಾರ ಪ್ರಿಯತೆಗಾಗಿ ಸಮುದಾಯದ ಹುಡುಗರನ್ನು ಪ್ರಚೋಚನೆ ಮಾಡಿದ ಪರಿಣಾಮ ಗಲಭೆಗೆ ಸಂಪೂರ್ಣ ಕಾರಣ ಶಾಸಕ ಪ್ರದೀಪ್ ಈಶ್ವರ್ ಅವರೇ ಆಗಿದ್ದಾರೆ. ಈ ಕೂಡಲೇ ಅವರನ್ನು ಮೊದಲನೇ ಆರೋಪಿಯಾಗಿ ಮಾಡುವ ಮೂಲಕ ಕಾನೂನು ಸಮಾಜದಲ್ಲಿ ಎಲ್ಲರಿಗೂ ಒಂದೇ ಎಂಬುದನ್ನು ಸಾಬೀತು ಮಾಡಬೇಕೆಂದು ಆಗ್ರಹಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.